ಭಾರಿ ಮಳೆ ಮುನ್ಸೂಚನೆ : ಜೂನ್ 16 ರಂದು ದ.ಕ. ಜಿಲ್ಲೆಯ 5 ತಾಲೂಕುಗಳೂ, ಉಡುಪಿ ಜಿಲ್ಲೆ ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳು ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ … Continued

ಭಾರಿ ಮಳೆ : ಇಂದು (ಜೂನ್ 12) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆ‌ರ್.ಎಸ್.ಎಸ್. ಪ್ರಮುಖ ಡಾ.‌ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ … Continued

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ಮೇ 31ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ (ಮೇ 31) ರಂದು ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, (ಸಿಬಿಎಸ್​ಸಿ, ಐಸಿಎಸ್ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ … Continued

ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ; ಕಾಂಗ್ರೆಸ್‌ ಹುದ್ದೆಗಳಿಗೆ ದಕ್ಷಿಣ ಕನ್ನಡ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ

ಮಂಗಳೂರು : ಅಬ್ದುಲ್ ರಹೀಂ ಅಲಿಯಾಸ್ ಇಮ್ತಿಯಾಜ್ ಹತ್ಯೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ಸಿನ  ಮುಸ್ಲಿಂ ನಾಯಕರು ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಮತ್ತು ದಕ್ಷಿಣ ಕನ್ನಡ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶಾಹುಲ್ … Continued

ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ; ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ … Continued

ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಕೆಲವು ದಿನಗಳ ಹಿಂದೆ ನಡೆದಿತ್ತು. ಈಗ … Continued

ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 27, 28 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮೇ 27 ಮತ್ತು28ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್‌ಇ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ … Continued

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ; ಸರ್ಪ ಸಂಸ್ಕಾರ ಸೇವೆ

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ (ಮಾರ್ಚ್‌ 11) ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಆಶ್ಲೇಷ ನಕ್ಷತ್ರದ ದಿನವಾದ ಮಂಗಳವಾರ ಬೆಳಗ್ಗೆ ಕ್ಷೇತ್ರದ ಆದಿ … Continued