ಸುರತ್ಕಲ್ ಹತ್ಯೆ ಪ್ರಕರಣ: ನಾಲ್ಕು‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು : ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣd ನಂತರ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಸೆಕ್ಷನ್ 144 ಹಾಗೂ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ … Continued

ವಿಷಕಾರಿ ಕಾಡು ಅಣಬೆ ಸೇವಿಸಿದ ನಂತರ ತಂದೆ-ಮಗ ಸಾವು

ಮಂಗಳೂರು: ಕಾಡಿನ ವಿಷಕಾರಿ ಅಣಬೆ ಸೇವನೆ ಮಾಡಿದ ನಂತರ ತಂದೆ ಮತ್ತು ಮಗ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಮಿಯ್ಯಾರು ಪಲ್ಲದಪಲಿಕೆ ನಿವಾಸಿಗಳಾಗಿರುವ ಗುರುವ ಮೇರ(80) ಮತ್ತು ಅವರ ಪುತ್ರ ಓಡಿಯಪ್ಪ (41) ಎಂದು ಗುರುತಿಸಲಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ವಿವಿಧ ರೀತಿಯ ಅಣಬೆಗಳು ಬೆಳೆಯುತ್ತವೆ. … Continued

ಸುಬ್ರಹ್ಮಣ್ಯ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಸುಬ್ರಹ್ಮಣ್ಯ : ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಯೇನೆಕಲ್ಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಧರ್ಮಪಾಲ ಪರಮಲೆ (46) ಹಾಗೂ ಬೆಳ್ಯಪ್ಪ ಚಳ್ಳಂಗಾರು ಚೊಕ್ಕಾಡಿ (49) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತದ ಕಸ ವಿಲೇವಾರಿ ಘಟಕದಲ್ಲಿ ಧರ್ಮಪಾಲ ಅವರು ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದು ಎಂದು ಹೇಳಲಾಗಿದೆ. ಮಂಗಳವಾರ ರಾತ್ರಿ ಹೊಳೆಯಲ್ಲಿದ್ದ … Continued

ಬಂಟ್ವಾಳ: ಕಾರಣಿಕ ದೈವ ಕೊರಗಜ್ಜನಿಗೆ ಅಗೇಲು ಸೇವೆಯ ಹರಕೆ ತೀರಿಸಿದ ಉಕ್ರೇನ್‌ ಕುಟುಂಬ

ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ತಮ್ಮ ಕುಟುಂದ ಕಷ್ಟವನ್ನು ನೀಗಿಸಿದ್ದಕ್ಕೆ ಉಕ್ರೇನ್ ದೇಶದ ಕುಟುಂಬವೊಂದು ದಕ್ಷಿಣ ಕನ್ನಡಕ್ಕೆ ಬಂದು ತಮ್ಮ ಹರಕೆಯನ್ನು ಪೂರೈಸಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಪುದು ಗ್ರಾಮದ ಗೋವಿನತೋಟದಲ್ಲಿರುವ ಕೊರಗಜ್ಜ ದೇವರಿಗೆ ಐಟಿ ವೃತ್ತಿಪರ ಆಂಡ್ರ್ಯೂ, ಅವರ ಪತ್ನಿ ಎಲೆನಾ ಮತ್ತು ಎಂಟು ವರ್ಷದ ಮಗ ಮ್ಯಾಕ್ಸಿಮ್ … Continued

ಪ್ರವೀಣ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ ನೆಟ್ಟಾರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22) ಹಾಗೂ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಇವರಿಬ್ಬರ ಬಂಧನದಿಂದ ಪ್ರವೀಣ ನೆಟ್ಟಾರ … Continued

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚಲು ಆದೇಶ

ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೇ ಬಂದ್‌ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಈ ಆದೇಶದ ಇಂದು, ಶುಕ್ರವಾರ ಸಂಜೆ (ಜು.29) ರಿಂದ ಆಗಸ್ಟ್‌ 1ರ ವರೆಗೆ ಜಾರಿಯಲ್ಲಿರುತ್ತದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಹೊಣೆ ಎನ್​ಐಎಗೆ ವರ್ಗವಾವಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ. ಈ ಪ್ರಕರಣವು ಅಂತಾರಾಜ್ಯ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲು ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ. … Continued

ನಿರ್ಬಂಧ ಉಲ್ಲಂಘನೆ: ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಮಂಗಳೂರು: ಪ್ರವೀಣ ಹತ್ಯೆ ಪ್ರಕರಣದ ನಂತರ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದರೂ ಇಂದು, ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಬೆನ್ನಲ್ಲೇ ಪ್ರಮೋದ್ ಮುತಾಲಿಕ್ ಪ್ರವೀಣ್ ಅವರ ಮನೆಗೆ ಭೇಟಿ ನೀಡುವ … Continued

ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರು ಸಸ್ಪೆಂಡ್

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಪ್ರಾಂಶುಪಾಲರು ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್‌ ತೀರ್ಪನ್ನು … Continued

ಪೊಲೀಸ್‌ ಇನ್ಸ್‌ಪೆಕ್ಟರ್‌ ಮೇಲೆ ವಾಹನ ನುಗ್ಗಿಸಿದ ಗೋ ಕಳ್ಳರು: ಎಸ್‌ಐಗೆ ಗಾಯ, ಕಳ್ಳರು ಪರಾರಿ

ಮಂಗಳೂರು : ಅಕ್ರಮ ಗೋ ಸಾಗಾಟದ ವಾಹನ ತಡೆದು ನಲ್ಲಿಸಲು ಯತ್ನಿಸಿದ ಎಸ್‌ಐ ಅವರಿಗೆ ಗೋ ಸಾಗಾಟದ ವಾಹನ ತಾಗಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುದ್ಕೋಳಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಪುಂಜಾಲಕಟ್ಟೆ ಠಾಣಾ ಎಸ್‌ಐ ಸುತೇಶ್‌ ಅವರು ಗಾಯಗೊಂಡಿದ್ದು, ಈ ವೇಳೆ ಗೋ ಕಳ್ಳರು … Continued