ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 8ಕ್ಕೆ ರಜೆ ಘೋಷಣೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಬುಧವಾರ (ಜುಲೈ 8) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ ಎಚ್.ವಿ. … Continued

ಪರೀಕ್ಷೆ ನಡೆಯುತ್ತಿರುವಾಗಲೇ ತಾಯಿಯ ಸಾವು; ದುಃಖದಲ್ಲಿಯೇ ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್‌ : 600 ಕ್ಕೆ 600 ಅಂಕ…!

ಮಂಗಳೂರು: ಜೀವನದಲ್ಲಿ ಎದುರಾಗುವ ಕಷ್ಟಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂಬುದಕ್ಕೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಒಂದು ನಿದರ್ಶನವಾಗಿ ಹೊರಹೊಮ್ಮಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವಾಗಲೇ ಹೆತ್ತ ತಾಯಿಯನ್ನು ಕಳೆದುಕೊಂಡ ತೀವ್ರ ದುಃಖದಲ್ಲೂ ಧೃತಿಗೆಡದ ದಿಶಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿದ್ದಷ್ಟೇ ಅಲ್ಲ, 600 ಕ್ಕೆ 600 ಅಂಕ … Continued

ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

ಅನಾರೋಗ್ಯ : ತುಳುನಾಡಿನ ದೈವದ ಮೊರೆ ಹೋದ ಖ್ಯಾತ ನಟ ವಿಶಾಲ

ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ವಿಶಾಲ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ತಮಿಳಿನ ʼಮದಗಜರಾಜʼ ಸಿನಿಮಾ ಪ್ರಚಾರದ ವೇಳೆ ವಿಶಾಲ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಅವರು ತೀವ್ರ ವೈರಲ್‌ ಫೀವರ್‌ನಿಂದ ಬಳಲುತ್ತಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಇದೀಗ ಅನಾರೋಗ್ಯದ ನಿವಾರಣೆಗಾಗಿ ತುಳುನಾಡಿನ ದೈವಸ್ಥಾನದ ಮೊರೆ ಹೋಗಿದ್ದರು. ದಕ್ಷಿಣ ಕನ್ನಡ … Continued

ಮರ ಬಿದ್ದು ವ್ಯಕ್ತಿ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಆತ ಒಯ್ಯುತ್ತಿದ್ದ ಕೋಳಿ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ಸೀತಾರಾಮ ಗೌಡ ಸ್ಥಳದಲ್ಲೇ ಮೃತಪಟ್ಟು ಎರಡು ದಿನ ಕಳೆದಿದೆ. ಆದರೆ, ಅವರು ಸ್ಕೂಟಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಕೋಳಿ ಮಾತ್ರ ಘಟನೆ ನಡೆದು ಎರಡು ದಿನ ಕಳೆದರೂ ಆ … Continued

ಮೂಡುಬಿದಿರೆ | ಶಿಕ್ಷಣ ಕಾಶಿ ಮುಕುಟಕ್ಕೆ ಮತ್ತೊಂದು ಗರಿ : ಆಗಸ್ಟ್ 10 ರಂದು ತಾಲೂಕಿನಲ್ಲೇ ಪ್ರಪ್ರಥಮ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ  ಶಿರ್ತಾಡಿಯ ಭುವನ ಜ್ಯೋತಿ ವಿದ್ಯಾ ಸಮಚ್ಚಯದಲ್ಲಿ ಮೂಡುಬಿದರೆಯಲ್ಲಿಯೇ ಪ್ರಪ್ರಥಮ ಕಾನೂನು ವಿದ್ಯಾಲಯ ಪ್ರಾರಂಭವಾಗುತ್ತಿದೆ. ಆಗಸ್ಟ್ 10 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಆಂಧ್ರಪ್ರದೇಶದ ರಾಜ್ಯಪಾಲರಾದ ಬೆಳುವಾಯಿ ಎಸ್. ಅಬ್ದುಲ್ ನಜೀರ್ ಅವರು ನೂತನ ಕಾನೂನು ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ನೂತನ ವಿದ್ಯಾಲಯಕ್ಕೆ ಈಗಾಗಲೇ 25 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು/ಉಡುಪಿ : ಧಾರಾಕಾರ ಮಳೆ ಹಿನ್ನಲೆ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 (ಶನಿವಾರ )ರಂದು … Continued

ನೇತ್ರಾವತಿ ನದಿಗೆ ಹಾರಲು ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ಸಾಕು ನಾಯಿ….!

ಮಂಗಳೂರು : ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಸಮೀಪದ ಪಿಲಿಗೂಡಿನ 36 ವರ್ಷದ ಮಹಿಳೆಯೊಬ್ಬರು ಪತಿಯೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ತಡೆಗೋಡೆ ಏರಿ ನದಿಗೆ ಹಾರಲು ಮುಂದಾದಾಗ ಅವರನ್ನೇ … Continued

ಗೂಗಲ್ ಟ್ರಾನ್ಸ್‌ಲೇಟ್‌ ನಲ್ಲಿ ತುಳು ಭಾಷೆ ಸೇರ್ಪಡೆ

ಬೆಂಗಳೂರು: ಗೂಗಲ್ ಟ್ರಾನ್ಸ್​​ಲೇಟ್‌​​ನಲ್ಲಿ 110 ಭಾಷೆಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರಲ್ಲಿ ಕರ್ನಾಟಕದ ತುಳು ಭಾಷೆಗೂ ಮಾನ್ಯತೆ ದೊರೆತಿದೆ. ಈ ಹಿಂದೆ ದೇಶ- ವಿದೇಶದ 133 ಭಾಷೆಗಳಿಗೆ ಮಾತ್ರ ಗೂಗಲ್ ಅವಕಾಶ ಮಾಡಿಕೊಟ್ಟಿತ್ತು. ಈಗ ಹೊಸದಾಗಿ 110 ಭಾಷೆಗಳು ಸೇರ್ಪಡೆಗೊಂಡಿವೆ. ಈಗ ಕನ್ನಡ, ಇಂಗ್ಲಿಷ್ ಹಾಗೂ ಬೇರೆ ಭಾಷೆಯ ಪದಗಳನ್ನು ತುಳುವಿಗೆ ಭಾಷಾಂತರಿಸಿಕೊಳ್ಳಬಹುದು. ಅಲ್ಲದೆ, ಜೊತೆಗೆ ತುಳು … Continued