ವೀಡಿಯೊ | ದಾವಣಗೆರೆಯಲ್ಲಿ ರೋಡ್‌ ಶೋ ವೇಳೆ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ : ವಾಹನದತ್ತ ನುಗ್ಗಿದ ವ್ಯಕ್ತಿ

ದಾವಣಗೆರೆ : ಶನಿವಾರ ದಾವಣಗೆರೆಯಲ್ಲಿ ಚುನಾವಣಾ ರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯನ್ನು ವ್ಯಕ್ತಿಯೊಬ್ಬ ಉಲ್ಲಂಘಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯೊಬ್ಬ ಬ್ಯಾರಿಕೇಡ್ ಮೇಲೆ ಹಾರಿ ಪ್ರಧಾನಿಯ ಬಳಿಗೆ ಹೋಗಲು ಪ್ರಯತ್ನಿಸಿದ್ದಾನೆ. ಆತ ಭದ್ರತಾ ಕ್ರಮಗಳನ್ನು ಉಲ್ಲಂಘಿಸಿ ಪ್ರಧಾನಿ ವಾಹನದತ್ತ ಧಾವಿಸುತ್ತಿರುವಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಧಾವಿಸಿ ತಕ್ಷಣವೇ ಆತನನ್ನು ತಡೆದಿದ್ದಾರೆ. … Continued

ದೇಶದಲ್ಲಿದ್ದ ‘ಗ್ರಹಿಕೆ ರಾಜಕಾರಣ’ವನ್ನು ʼಕಾರ್ಯನಿರ್ವಹಣೆ ರಾಜಕಾರಣʼವನ್ನಾಗಿ ಬದಲಾಯಿಸಿದ್ದು ಬಿಜೆಪಿ ಸರ್ಕಾರ: ಪ್ರಧಾನಿ ಮೋದಿ ಪ್ರತಿಪಾದನೆ

ದಾವಣಗೆರೆ : ಬಿಜೆಪಿಯು ದೇಶದಲ್ಲಿನ ‘ಗ್ರಹಿಕೆಯ ರಾಜಕೀಯ’ವನ್ನು ‘ಕಾರ್ಯನಿರ್ವಹಣೆʼಯ ರಾಜಕೀಯವಾಗಿ ಪರಿವರ್ತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯ ಸದಸ್ಯತ್ವದಿಂದ ಶುಕ್ರವಾರ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಕ್ಕೆ ಪ್ರತಿಪಕ್ಷಗಳ ನಾಯಕರು ರ್ಯಾಲಿ ಮಾಡಲು ಪ್ರಯತ್ನಿಸುತ್ತಿರುವುದರ ನಡುವೆ, ಪ್ರಧಾನಿ ನರೇಂದ್ರ ಮೋದಿ ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಮಹಾ … Continued

8 ಕೋಟಿ ಅಕ್ರಮ ಹಣ ಸಿಕ್ಕರೂ ಶಾಸಕ ವಿರೂಪಾಕ್ಷಪ್ಪ ಅವರನ್ನು ಯಾಕೆ ಬಂಧಿಸಿಲ್ಲ : ಬಿಜೆಪಿಗೆ ಕೇಜ್ರಿವಾಲ್‌ ಪ್ರಶ್ನೆ

 ದಾವಣಗೆರೆ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ನಿವಾಸದಿಂದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ವಶ ಪಡಿಸಿಕೊಂಡ ನಂತರವೂ … Continued

ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ

ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿರುವ ಘಟನೆ ಭಾನುವಾರ ದಾವಣಗೆರೆಯ ಹರಿಹರದ ಕಾರ್ಯಕ್ರಮದ ವೇಳೆ ನಡೆದಿದೆ. ಬರಗೂರು ರಾಮಚಂದ್ರಪ್ಪ ಅವರು ಕಾರ್ಯಕ್ರಮ ಮುಗಿಸಿ ಪೋಸ್ಟರ್‌ ಒದನ್ನು ಉದ್ಘಾಟಿಸಲು ತೆರಳಿದ ವೇಳೆ ಅವರು ಅಸ್ವಸ್ಥರಾಗಿ ಕುಸಿದು ಕುಳಿತಿದ್ದಾರೆ ಎಂದು ಹೇಳಲಾಗಿದೆ. ತಕ್ಷಣವೇ ಅವರನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಾಮಚಂದ್ರಪ್ಪ ಆರೋಗ್ಯದಲ್ಲಿ ಚೇತರಿಕೆ … Continued

ದಾವಣಗೆರೆ: ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಹತ್ಯೆಗೈದ ಪಾಗಲ್ ಪ್ರೇಮಿ

ದಾವಣಗೆರೆ: ತನ್ನ ಪಾಡಿಗೆ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ತಡೆದು ನಿಲ್ಲಿಸಿ, ಮನಬಂದಂತೆ ಚುಚ್ಚಿ-ಚುಚ್ಚಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಬಿ.ಜೆ ಬಡಾವಣೆಯ ಚರ್ಚ್ ಮುಂಭಾಗ ಯುವತಿಯನ್ನ ಕೊಂದಿರುವ ಪಾಗಲ್ ಪ್ರೇಮಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋಭಾ ನಗರದ ನಿವಾಸಿ ಚಾಂದ್ ಸುಲ್ತಾನಾ … Continued

ದಾವಣಗೆರೆ : ನಾಳೆ ಜಿಎಂಆರ್-ರಕ್ಷಾ ಉದ್ಯೋಗ ಮೇಳ

ದಾವಣಗೆರೆ: ಕೈಗಾರಿಕಾ ತರಬೇತಿ ಇಲಾಖೆ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾಡೆಲ್‌ ಕರಿಯರ್‌ ಸೆಂಟರ್‌ ದಾವಣಗೆರೆ ವತಿಯಿಂದ ಜಿಎಂಆರ್-ರಕ್ಷಾ ಕಂಪನಿಯ ಉದ್ಯೋಗ ಮೇಳವು ದಾವಣೆಗೆರೆಯ ಬಾಷಾ ನಗರ ಮುಖ್ಯ ರಸ್ತೆಯ ಮಿಲ್ಲತ್‌ ಕ್ಯಾಂಪಸ್‌ನ ಡಾ.ಝಕೀರ್‌ ಹುಸೇನ್‌ ಫಸ್ಟ್‌ ಗ್ರೇಡ್‌ ಕಾಲೇಜಿನಲ್ಲಿ ಆಗಸ್ಟ್‌ 6ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು … Continued

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ಸಂಪೂರ್ಣ ಒಗ್ಗೂಡಿದೆ: ರಾಹುಲ್ ಗಾಂಧಿ

ದಾವಣಗೆರೆ: ದಾವಣಗೆರೆಯಲ್ಲಿ ಇಂದು, ಬುಧವಾರ ನಡೆದ ಸಿದ್ದರಾಮೋತ್ಸವದ ವೇಳೆ, ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಏಕತೆಯ ಸಾರ್ವಜನಿಕ ಪ್ರದರ್ಶನದಲ್ಲಿ ಆಲಿಂಗಿಸಿಕೊಂಡಿದ್ದು ರಾಹುಲ್ ಗಾಂಧಿ ಸಂತೋಷ ವ್ಯಕ್ತಪಡಿಸಲು ಪ್ರೇರೇಪಿಸಿತು. ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ … Continued

ದಾವಣಗೆರೆ: ತಡರಾತ್ರಿ ದಂಪತಿಯ ಭೀಕರ ಕೊಲೆ

ದಾವಣಗೆರೆ: ಎಲೆಬೇತೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಗುರುಸಿದ್ದಯ್ಯ (80) ಮತ್ತು ಪತ್ನಿ ಸರೋಜಮ್ಮ (75) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತಿ‌-ಪತ್ನಿ ಇಬ್ಬರೇ ವಾಸವಿದ್ದರು. ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾಸಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಒಳಗೆ ಶವ ಬಿಟ್ಟು … Continued

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ದೊಡ್ಡಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ. ಜಗಳೂರು ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಶನಿವಾರ (ನವೆಂಬರ್ 13) ನಡೆದಿದ್ದು, ಮೃತಪಟ್ಟವರನ್ನು ಸೈಯದ್ (10), ಅಶ್ರಫ್ (7) ಮತ್ತು ಆಸೀಫ್ (5) ಎಂದು ಗುರುತಿಸಲಾಗಿದೆ. ಈ ಮೂವರು ಮಕ್ಕಳು ಕೆರೆಯಲ್ಲಿ … Continued

ದಾವಣಗೆರೆ ಸಕ್ಕರೆ ಕಾರ್ಖಾನೆಯಲ್ಲಿ ಪಿಲ್ಲರ್ ಕುಸಿದು ಮೂವರು ಕಟ್ಟಡ ಕಾರ್ಮಿಕರ ಸಾವು, 12 ಜನರಿಗೆ ಗಾಯ

ದಾವಣಗೆರೆ: ದಾವಣಗೆರೆಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಪಿಲ್ಲರ್ ಕುಸಿದ ಪರಿಣಾಮ 3 ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕದ ಪಿಲ್ಲರ್ ಕುಸಿದು ಮೂರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರನ್ನು ಕೊಪ್ಪಳ ಮತ್ತು ರಾಯಚೂರು ಮೂಲದ ಮಾನಪ್ಪ(32), ಬಸ್ಸಪ್ಪ(32), … Continued