ಕೆಎಸ್‌ಆರ್‌ಟಿಸಿ ಹೆಸರು ಕರ್ನಾಟಕದಿಂದ ಕೈ ತಪ್ಪುವ ಭಯ ಬೇಡ: ಡಿಸಿಎಂ ಸವದಿ

ಬೆಂಗಳೂರು:ಕೆ.ಎಸ್ಆರ್ ಟಿಸಿ ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆ.ಎಸ್.ಆರ್.ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. … Continued