ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ಜೆಡಿಯು ಸೇರಲಿರುವ ನಿತೀಶ ಪುತ್ರ ನಿಶಾಂತ; ಮುಂದಿನ ಡಿಸಿಎಂ ?

ಪಾಟ್ನಾ: ಬಿಹಾರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ನಿತೀಶಕುಮಾರ ಅವರ ಪುತ್ರ ನಿಶಾಂತಕುಮಾರ ಅವರು ಶನಿವಾರ ಅಧಿಕೃತವಾಗಿ ಜನತಾ ದಳ (ಯುನೈಟೆಡ್) ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಅಷ್ಟೇ ಅಲ್ಲದೆ, ಅವರು ಬಿಹಾರದ ಮುಂದಿನ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸಂಜಯ ಕುಮಾರ ಝಾ ಶುಕ್ರವಾರ ನಡೆದ ಪ್ರಮುಖ ಸಭೆಯಲ್ಲಿ ಸುಳಿವು ನೀಡಿದ್ದಾರೆ. ನಿತೀಶಕುಮಾರ ಅವರು … Continued

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಪ್ರಮಾಣ ವಚನ

ಮುಂಬೈ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (NCP) ನಾಯಕ ಅಜಿತ್ ಪವಾರ್ ಅವರ ನಿಧನದ ನಂತರ, ಅವರ ಪತ್ನಿ ಸುನೇತ್ರಾ ಪವಾರ್ ಅವರು ಇಂದು, ಶನಿವಾರ (ಜ.೩೧) ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ಇತಿಹಾಸದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ … Continued

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸಾಧ್ಯತೆ

ಮುಂಬೈ: ಎನ್‌ಸಿಪಿ (NCP) ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ ತೆರವಾಗಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅವರ ಪತ್ನಿ ಹಾಗೂ ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ಶನಿವಾರ (ಜನವರಿ 31) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಸಂಜೆ ಸುನೇತ್ರಾ ಪವಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರೆ ಮಹಾರಾಷ್ಟ್ರದ … Continued

ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ

ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued

ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿಯನ್ನು ನೇಮಕ ಮಾಡಿದ ಸಿಎಂ ಎಂ.ಕೆ.ಸ್ಟಾಲಿನ್‌

ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ … Continued

ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ; ಸಿಎಂ, ಡಿಸಿಎಂ ಕುರಿತು ಕೆಟ್ಟ ಭಾಷೆ ಬಳಕೆಗೆ ಅತೃಪ್ತಿ

ಬೆಂಗಳೂರು : ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೆಟ್ಟ ಭಾಷೆ ಬಳಸಬಾರದು” ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಶುಕ್ರವಾರ ಹೇಳಿದೆ. ಪ್ರಕರಣವೊಂದರ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಅರ್ಜಿ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ ನನಗೆ ಬೇಡ : ಸಿಎಂ, ಡಿಸಿಎಂಗೆ ಅಕ್ಕಯ್ ಪದ್ಮಶಾಲಿ ಪತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ತಮ್ಮನ್ನು ಕೈಬಿಡುವಂತೆ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ. “ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ … Continued

ಡಿಸಿಇಟಿ ಪರೀಕ್ಷೆ :ಗೊಂದಲಕ್ಕೆ ಡಿಸಿಎಂ ಸ್ಪಷ್ಟನೆ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಾದ ಎಂಜಿನಿಯರಿಂಗ್(ಲ್ಯಾಟರಲ್ ಪ್ರವೇಶಾತಿ ಸೇರಿದಂತೆ ಡಿಸಿಇಟಿ) ಮೆಡಿಕಲ್ ಅಗ್ರಿಕಲ್ಚರಲ್, ನರ್ಸಿಂಗ್, ಪ್ಯಾರಾಮೆಡಿಕಲ್, ಫಾರ್ಮಸಿ ಮುಂತಾದ ಕೋರ್ಸ್‍ಗಳಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ದತ್ತಾಂಶವನ್ನು ಕೆಇಎಯಿಂದ ಪಡೆಯಬೇಕೆಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸೂಚಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮೂಲಕ ವಿವರ ನೀಡಿರುವ ಅವರು, ಜುಲೈ, ಆಗಸ್ಟ್ 2021ರಲ್ಲಿ ನಡೆಯುವ ಡಿಸಿಇಟಿ ಪರೀಕ್ಷೆಯ … Continued

ನಾಯಕತ್ವ ಬದಲಾವಣೆ: ಊಹಾಪೋಹಕ್ಕೆ ತೆರೆ ಎಳೆದ ಡಿಸಿಎಂ

ನವ ದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡರು ನನ್ನ ಮೇಲಿನ ಪ್ರೀತಿಯಿಂದಾಗಿ, ನಾನು ಮುಖ್ಯಮಂತ್ರಿಯಾಗಲಿ ಎಂದು ಹೇಳಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸದಾನಂದಗೌಡರು ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ, ಆಕಸ್ಮಿಕವಾಗಿ ಆ ಮಾತನ್ನು ಹೇಳಿದ್ದಾರೆ. … Continued