ಡಿಪ್ಲೊಮಾ ಪಠ್ಯ ಕ್ರಮದಲ್ಲಿ ಆಮೂಲಾಗ್ರ ಪರಿಷ್ಕರಣೆ

ಮಂಗಳೂರು: ಶಿಕ್ಷಣ ಕ್ಷೇತ್ರವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಅನೇಕ ಕ್ರಾಂತಿಕಾರಕ ಸುಧಾರಣೆಗಳನ್ನು ರಾಜ್ಯ ಸರಕಾರ ಕೈಗೊಂಡಿದ್ದು, ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮಂಗಳೂರಿನಲ್ಲಿಂದು ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ʼಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌, ರೀಸರ್ಚ್‌ ಡಿಸೈನ್‌ ಲ್ಯಾಬ್‌ ಮತ್ತು ಇಂಡಸ್ಟ್ರೀ … Continued

ಡಿಸಿಎಂ ದಿಢೀರ್‌ ದೆಹಲಿ ಭೇಟಿ ತಂದ ಕುತೂಹಲ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ದಿಢೀರನೆ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ವರಿಷ್ಠರ ಸೂಚನೆಯಂತೆ ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳಿರುವ ಅವರು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲೇ ಉಳಿಯಲಿದ್ದು, ಪಕ್ಷದ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಯಾವ ಕಾರಣಕ್ಕಾಗಿ ಅವರು ದೆಹಲಿಗೆ ತೆರಳಿದ್ದಾರೆ ಎಂಬುದು ಖಚಿತಪಟ್ಟಿಲ್ಲ. … Continued

ಯುಜಿಸಿ ಹಿಂಬಾಕಿ ಪಾವತಿ ಬೇಡಿಕೆ ಶೀಘ್ರವೇ ಈಡೇರಿಕೆ

ಬೆಂಗಳೂರು:ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಮತೆ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲು ತುಂಬಿಲ್ಲ. ತಕ್ಷಣ ತುಂಬಲಾಗುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು … Continued