ಹಣಕ್ಕಾಗಿ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಅರಣ್ಯದಲ್ಲಿ ಶವ ಎಸೆದಿದ್ದ ಮೂವರು ಆರೋಪಿಗಳ ಬಂಧನ

ಶಿರಸಿ: ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆಗೈದು ಶವವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದು ಹೋಗಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹಣಕ್ಕಾಗಿ ಕೊಲೆಗೈದು ಬಳಿಕ ಶವವನ್ನು ತಾಲೂಕಿನ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯದಲ್ಲಿ ಎಸೆದು ಹೋಗಿದ್ದರು. ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಪತ್ತೆಯಾದ 24 ಗಂಟೆಗಳ ಒಳಗೆ ಮೂವರು ಕೊಲೆ ಆರೋಪಿಗಳನ್ನೂ ಬಂಧಿಸಲಾಗಿದೆ ಬಂಧಿತ … Continued

ವೀಡಿಯೊ…| ಮಿಲಿಟರಿ ಸಮವಸ್ತ್ರ ಧರಿಸಿ ಕೊನೆ ಬಾರಿಗೆ ತಂದೆಯ ಪಾರ್ಥಿವ ಶರೀರಕ್ಕೆ ಸೆಲ್ಯೂಟ್ ಮಾಡಿದ ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರ 6 ವರ್ಷದ ಮಗ

ಚಂಡೀಗಢ : ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮೂವರ ಪೈಕಿ ಒಬ್ಬರಾದ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರ ಆರು ವರ್ಷದ ಮಗ ಮೊಹಾಲಿ ಜಿಲ್ಲೆಯ ಮುಲ್ಲನ್‌ಪುರದ ಮನೆಗೆ ತಂದೆಯ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಮಿಲಿಟರಿ ಬಟ್ಟೆ ಧರಿಸಿ ಸೆಲ್ಯೂಟ್‌ ಮಾಡುವ ಮೂಲಕ ತಂದೆಗೆ ಗೌರವ ನಮನ ಸಲ್ಲಿಸಿದ್ದಾನೆ. ಶುಕ್ರವಾರ ಕೊನೆಯ ಬಾರಿಗೆ ಕರ್ನಲ್ … Continued

ಮಳೆಗಾಗಿ ಹೂತಿದ್ದ ಶವಗಳ ಬಾಯಿಗೆ ನೀರು ಬಿಟ್ಟ ಗ್ರಾಮಸ್ಥರು…!

ವಿಜಯಪುರ: ಮಳೆಗಾಗಿ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಈ ಊರಿನಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ವಿದ್ಯಮಾನ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯದಲ್ಲಿ ಈ ವರ್ಷ ಮುಂಗಾರು ದುರ್ಬಲವಾಗಿದ್ದು ನಿರೀಕ್ಷಿತ ಮಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಜೂನ್ ಮುಗಿಯುತ್ತಾ ಬಂದರೂ ಬಹುತೇಕ ಮಳೆಯೇ … Continued

ಕಾಳಿ ನದಿಯಲ್ಲಿ ಮೊಸಳೆಯೊಂದಿಗೆ ಪತ್ತೆಯಾದ ಮೃತದೇಹ..!

ದಾಂಡೇಲಿ : ನಗರದ ಕುಳಗಿ ರಸ್ತೆಯಯಲ್ಲಿ ಸೇತುವೆಯ ಕೆಳಗಿನಿಂದ ಮೊಸಳೆಯ ಜೊತೆ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು ಪತ್ತೆ ಹಚ್ಚಿ ಮೊಸಳೆಯ ಬಾಯಿಂದ ಬಿಡಿಸಿ ದಡಕ್ಕೆ ತೆಗೆದುಕೊಂಡು ಬಂದ ವಿದ್ಯಮಾನ ಸಮೀಪದ ಕೋಗಿಲಬನದ ಹತ್ತಿರದಲ್ಲಿ ದಬದಬೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಸುಮಾರು ೨೫ ರಿಂದ ೩೫ ವರ್ಷ ಅಂದಾಜು ವಯಸ್ಸಿನ ಯುವಕನ … Continued