ಯಲ್ಲಾಪುರ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ, 6 ಮಂದಿ ಸಾವು

ಕಾರವಾರ : ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಗಾರ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರವಾಸಿಗರಿದ್ದ ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ … Continued

ಮಂಗಳೂರು : ಧಾರಾಕಾರ ಮಳೆಗೆ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಮಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. … Continued

ಶಿರಸಿ : ಮನೆಯಲ್ಲಿ ಮಲಗಿದ್ದಾಗ ಇಬ್ಬರು ಮಕ್ಕಳಿಗೆ ಕಚ್ಚಿದ ಹಾವು ; ಓರ್ವ ಸಾವು

ಶಿರಸಿ :  ಹಾವು ಕಚ್ಚಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತನ ಸಹೋದರಿಗೂ ಹಾವು ಕಚ್ಚಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಇಂದು, ಬುಧವಾರ ಮುಂಜಾನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ … Continued

ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued

ದೇವಸ್ಥಾನದ ಸಭಾಮಂಟಪದ ಮೇಲ್ಛಾವಣಿ ಕುಸಿತ; ನಾಲ್ವರು ಸಾವು, 23 ಮಂದಿಗೆ ಗಾಯ

ಪರ್ಭಾನಿ : ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಪ್ರಸಿದ್ಧ ಯಶವಾಡಿ ದೇವಸ್ಥಾನದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾಮಂಟಪದ ಮೇಲ್ಛಾವಣಿ ಹಠಾತ್ತನೆ ಕುಸಿದು ಬಿದ್ದು  ನಾಲ್ವರು ಸಾವಿಗೀಡಾಗಿದ್ದು, 23 ಜನರು ಗಾಯಗೊಂಡ ಭೀಕರ ಘಟನೆ ಶನಿವಾರ ಸಂಭವಿಸಿದೆ. ಛತ್ರಪತಿ ಸಂಭಾಜಿನಗರದಿಂದ ಸುಮಾರು 190 ಕಿ.ಮೀ ದೂರದಲ್ಲಿರುವ ಯಶವಾಡಿ ಗ್ರಾಮದಲ್ಲಿ ಈ ದೇವಸ್ಥಾನವಿದ್ದು, ಘಟನೆ ನಡೆದಾಗ ಸುಮಾರು 27 ಜನರು ಅವಶೇಷಗಳ … Continued

ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ಮೈಸೂರು: ಇಲ್ಲಿನ ರೆಸ್ಟೋ ಪಬ್‌ (Restopub) ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಮೃತರನ್ನು ಡಾರ್ಜಿಲಿಂಗ್ ಮೂಲದ 26 ವರ್ಷದ ಸಾಹಿನ್ ಮತ್ತು ನೇಪಾಳ ಮೂಲದ 24 ವರ್ಷದ ಪ್ರಕಾಶ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ … Continued

ಬೀದರ : ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು ; ಕಿರುಕುಳ ಕಾರಣ ಎಂದು ಪೋಷಕರ ಆರೋಪ

ಬೀದರ : ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೀದರಿನಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಶಾಲೆಯವರ ಮಾನಸಿಕ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೀದರಿನ ಪ್ರತಾಪ ನಗರದ ಬಳಿಯಿರುವ ಖಾಸಗಿ ಶಾಲೆಯೊಂದರಲ್ಲಿ ಬುಧವಾರ (ಜೂನ್ 10)ರಂದು ಈ ಘಟನೆ ಸಂಭವಿಸಿದೆ. ಶಾಂತಿನಗರದ ನಿವಾಸಿಯಾದ … Continued

ಬೆಂಗಳೂರು : ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತದಿಂದ ಆಟಗಾರ ನಿಧನ

ಬೆಂಗಳೂರು : ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ ಅವರು ಭಾನುವಾರ ಕ್ರಿಕೆಟ್ ಪಂದ್ಯವನ್ನಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. 2014-15ರ ಋತುವಿನಲ್ಲಿ ರಣಜಿ ಟ್ರೋಫಿ ಮುಕುಟ ಮುಡಿಗೇರಿಸಿಕೊಂಡ ಕರ್ನಾಟಕ ತಂಡದ ಸದಸ್ಯರಾಗಿದ್ದ ಅಕ್ಷಯ ಅವರು, ಈ ದುರದೃಷ್ಟಕರ ಘಟನೆ ನಡೆದಾಗ ಕೆಎಸ್‌ಸಿಎ (KSCA) ಮೂರನೇ ಡಿವಿಷನ್ … Continued

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಸಾವು

ಮುಂಬೈ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಶುಕ್ರವಾರ (ಮೇ 22)  ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಅರಣ್ಯ ಪ್ರದೇಶಕ್ಕೆ ತೇಂದು ಎಲೆಗಳನ್ನು ಸಂಗ್ರಹಿಸಲು ಹೋಗಿದ್ದ 13 ಮಹಿಳೆಯರ ಗುಂಪಿನ ಮೇಲೆ ಹುಲಿ ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಸಿಂದೇವಾಹಿ ತಹಸಿಲ್‌ನ ಗುಂಜೆವಾಹಿ ಗ್ರಾಮದ ನಿವಾಸಿಗಳಾದ … Continued

ಮಡಿಕೇರಿ : ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ ; ಗಾಯಗೊಂಡಿದ್ದ ‘ಮಾರ್ತಾಂಡ’ ಸಾವು

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಕಂಜನ್ (Kanjan) ಮತ್ತು ಮಾರ್ತಾಂಡ ಆನೆಗಳ (Marthanda Elephant) ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು, ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಸೋಮವಾರ ಸ್ನಾತ ಮಾಡಿಸುತ್ತಿದ್ದಾಗ ಕಂಜನ್ ಎಂಬ ಆನೆಯು ಏಕಾಏಕಿ ಮಾರ್ತಾಂಡ ಆನೆ ಮೇಲೆ ನಡೆಸಿದ … Continued