ಪಾಕಿಸ್ತಾನದಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿಗೆ 13 ಸೈನಿಕರು ಸಾವು

ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ. “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, … Continued

42ನೇ ವಯಸ್ಸಿನಲ್ಲೇ ʼಕಾಂಟಾ ಲಗಾʼ ಖ್ಯಾತಿಯ ಶೆಫಾಲಿ ಜರಿವಾಲಾ ಸಾವು

ಮುಂಬೈ: ‘ಕಾಂಟಾ ಲಗಾ’ ಹಾಡಿನ ಖ್ಯಾತಿಯ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರನ್ನು ಅವರ ಪತಿ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿಗೆ ಕಾರಣವನ್ನು ಅವರ ಕುಟುಂಬ ಸದಸ್ಯರು ಇನ್ನೂ ಬಹಿರಂಗಪಡಿಸಿಲ್ಲ. ಏತನ್ಮಧ್ಯೆ, ಮುಂಬೈ ಪೊಲೀಸರು ತನಿಖೆಗಾಗಿ ತಡರಾತ್ರಿ … Continued

ಮೈ ಜುಂ ಎನ್ನುವ ವೀಡಿಯೊ | ಕಾರು ಚಲಾಯಿಸುವಾಗ ನಿದ್ದೆಗೆ ಜಾರಿದ ಎಂಜಿನಿಯರ್‌ ; ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಡಿಕ್ಕಿ : ಒಬ್ಬ ಸಾವು

ವಾಹನ ಚಲಾಯಿಸುವಾಗ ಗುರುಗ್ರಾಮದ ಸಿವಿಲ್ ಎಂಜಿನಿಯರ್ ಒಬ್ಬರು ನಿದ್ದೆಗೆ ಜಾರಿದ್ದರಿಂದ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದು, ಒಬ್ಬ ಕಾನೂನು ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ ಹಾಗೂ ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದು, ಸಿವಿಲ್ ಎಂಜಿನಿಯರ್ ನನ್ನು ಬಂಧಿಸಲಾಗಿದೆ. ಜೂನ್ 24 ರಂದು ಹರ್ಷ ಮತ್ತು ಮೋಕ್ಷ ಎಂದು ಗುರುತಿಸಲಾದ ವಿದ್ಯಾರ್ಥಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಧಾಬಾವನ್ನು ಬೆಳಗಿನ ಜಾವ 3 … Continued

ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋದ ದಂಪತಿಗೆ ವಿದ್ಯುತ್‌ ತಗುಲಿ ಸಾವು

ಶಿವಮೊಗ್ಗ: ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋದಾಗ ವಿದ್ಯುತ್ ತಗುಲಿ ದಂಪತಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೃಷ್ಣಪ್ಪ (53) ವಿನೋದಾ (43) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮನೆಯ ಬಳಿಯ ತಂತಿಯ ಮೇಲೆ ಒಣಗಿಸಿದ್ದ ಬಟ್ಟೆಯನ್ನು ತೆಗೆಯಲು ಹೋದ ಸಮಯದಲ್ಲಿ … Continued

ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued

ಮಣಿಪಾಲ | ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ : ಮರಣೋತ್ತರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ

ಉಡುಪಿ : ಮಗನೊಬ್ಬ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪದ್ಮಾಬಾಯಿ(45) ಎಂದು ಗುರುತಿಸಲಾದ ಮಹಿಳೆ ಕೊಲೆಯಾಗಿದ್ದು, ಮಗ ಈಶ ನಾಯಕ್‌ (26) ಕೊಲೆ ಆರೋಪಿಯಾಗಿದ್ದಾನೆ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು … Continued

ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued

ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: 7 ಮಂದಿ ಸಾವು

ಡೆಹ್ರಾಡೂನ್‌ : ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್‌ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು … Continued

ಅಹಮದಾಬಾದ್‌ ವಿಮಾನ ಅಪಘಾತದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ ರೂಪಾನಿ ಸಾವು

ಅಹಮದಾಬಾದ್‌ : ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಹಿರಿಯ ಬಿಜೆಪಿ ನಾಯಕ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಯುನೈಟೆಡ್‌ ಕಿಂಗ್ಡಂನ ಲಂಡನ್‌ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನವು ನಿಲ್ದಾಣದ ಬಳಿಯ ನಾಗರಿಕ ಪ್ರದೇಶದಲ್ಲಿ … Continued

ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued