ಮೈಸೂರು| ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಎಂದು ಹೇಳಲಾಗಿದೆ. ಚೇತನ್‌ ಎಂಬವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಮನೆಯವರಿಗೆ ವಿಷ ನೀಡಿ ಸಾಯಿಸಿ ನಂತರ ತಾನು … Continued

ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ. ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು … Continued

ಬೆಳಗಾವಿ : ಆಟೋ ಚಾಲಕನಿಂದ ಹಲ್ಲೆಗೊಳಗಾದ ಕೆಲವೇ ಕ್ಷಣಗಳಲ್ಲಿ ಗೋವಾದ ಮಾಜಿ ಶಾಸಕ ಸಾವು

ಬೆಳಗಾವಿ : ಬೆಳಗಾವಿಗೆ ಬಂದಿದ್ದ ಗೋವಾದ ಮಾಜಿ ಶಾಸಕರ ಲಾವೋ ಮಾಮಲೇದಾರ (69) ಜೊತೆಗೆ ಕ್ಷುಲ್ಲಕ ಕರಣಕ್ಕೆ ಜಗಳ ಆರಂಭಿಸಿದ ಆಟೋ ಚಾಲಕ ಅವರ ಮೇಲೆ ಹಲ್ಲೆ ಮಾಡಿದ್ದು, ನಂತರ ಮಾಜಿ ಶಾಸಕರು ಅಲ್ಲಿಂದ ಲಾಡ್ಜ್ ಒಳಗೆ ಬರುವಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಯ ಶ್ರೀನಿವಾಸ ವಸತಿ ಗೃಹ … Continued

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ … Continued

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು 85 ನೇ ವಯಸ್ಸಿನಲ್ಲಿ ಲಕ್ನೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ನ್ಯೂರಾಲಜಿ ವಾರ್ಡ್ ಎಚ್‌ಡಿಯುಗೆ ಸ್ಥಳಾಂತರಿಸಲಾಯಿತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ … Continued

ಆಸ್ತಿ ವಿವಾದ : ಕೈಗಾರಿಕೋದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ…!

ಹೈದರಾಬಾದ್‌ ; 86 ವರ್ಷದ ಹೈದರಾಬಾದ್ ಮೂಲದ ಉದ್ಯಮಿ ವೆಲಮಟಿ ಸಿ. ಜನಾರ್ದನ ರಾವ್ ಅವರನ್ನು ಅವರ ಬೇಗಂಪೇಟೆ ನಿವಾಸದಲ್ಲಿ ಅವರ ಮೊಮ್ಮಗನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅವರ ಪಿತ್ರಾರ್ಜಿತ ಆಸ್ತಿಗಾಗಿ ಈ ಹತ್ಯೆ ನಡೆದಿದೆ. ಕಿಲಾರು ಕೀರ್ತಿ ತೇಜ (೨೯) ಫೆಬ್ರವರಿ 6 ರಂದು ರಾತ್ರಿ ತನ್ನ ಅಜ್ಜನಿಗೆ ಚಾಕುವಿನಿಂದ ಇರಿದಿದ್ದಾನೆ. ಫೆಬ್ರವರಿ 8ರ … Continued

ಸುರಪುರ | ಬಸ್-ಬೈಕ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಮೂವರು ಮಕ್ಕಳಾಗಿದ್ದಾರೆ. ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರನ್ನು ಹನುಮಂತ ಆಂಜನೇಯ (35), ಗಂಗಮ್ಮ … Continued

ಕುಮಟಾ : ಖ್ಯಾತ ವೈದ್ಯ ಡಾ.ಅನಿಲ ಹೆಗಡೆ ನಿಧನ ; ಕಣ್ಣುಗಳ ದಾನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯವರಾಗಿದ್ದ ಖ್ಯಾತ ವೈದ್ಯ ಡಾ.ಅನಿಲ ಹೆಗಡೆ (76) ಶನಿವಾರ ನಿಧನರಾಗಿದ್ದಾರೆ. ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಅವರು ಪತ್ನಿ, ಭವಾನಿ, ಪುತ್ರರಾದ ಇಂಜಿಯರ್ ಆದ ವಿಜಯ  ಹಾಗೂ  ವೈದ್ಯರಾದ ಡಾ.ವಿಕ್ರಮ  ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅತ್ಯಂತ ಪ್ರತಿಭಾನ್ವಿತರಾಗಿದ್ದ ಡಾ. ಅನಿಲ ಹೆಗಡೆಯವರು … Continued

ಮಹಾಕುಂಭ ಕಾಲ್ತುಳಿತದಲ್ಲಿ 30 ಸಾವು, 60 ಮಂದಿಗೆ ಗಾಯ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟಿದ್ದಾರೆ ಎಂದು ಮಹಾಕುಂಭದ ಉಪ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಅವರು, 25 ಶವಗಳನ್ನು ಗುರುತಿಸಲಾಗಿದೆ, ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು … Continued

ಪ್ರಯಾಗರಾಜ್‌ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ; ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರು ಸಾವು

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜನವರಿ 29ರಂದು ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ನಗರದ ವಡಗಾವಿ ನಿವಾಸಿಗಳಾದ ತಾಯಿ-ಮಗಳಾದ ಜ್ಯೋತಿ ಹತ್ತರವಾಠ (50) ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ಅರುಣ ಕೋರ್ಪಡೆ ಹಾಗೂ ಶಿವಾಜಿನಗರ ನಿವಾಸಿ ಮಹಾದೇವಿ ಬಾವನೂರ ಮೃತರು ಎಂದು … Continued