ತುಮಕೂರು | ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್‌ ಟ್ಯಾಂಕ್‌ ಸ್ಫೋಟ; ಇಬ್ಬರ ಸಾವು, ಮೂವರಿಗೆ ಗಾಯ

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂತಸರನಹಳ್ಳಿಯಲ್ಲಿರುವ ಇಂಡಸ್ಟ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಟ್ಯಾಂಕ್‌ ಸ್ಪೋಟಗೊಂಡಿದೆ ಎನ್ನಲಾಗಿದೆ. ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರನ್ನು ಸಂತೋಷ … Continued

ವೀಡಿಯೊ…| ಮದುವೆಯ ಮೆರವಣಿಗೆಗೆ ತಂದಿದ್ದ ಕುದುರೆಯ ಒದೆತಕ್ಕೆ ಸ್ಥಳದಲ್ಲೇ ಮೃತಪಟ್ಟ ಮಗು…!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಮದುವೆಯ ಸಂಭ್ರಮಾಚರಣೆ ವೇಳೆ ಅಪ್ರಾಪ್ತ ಮಗುವೊಂದು ಕುದುರೆ ಒದೆತದಿಂದ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಟವಾಡುತ್ತ ಕುದುರೆಯ ಹಿಂಬದಿಗೆ ಬಂದ ಮಗುವಿಗೆ ಕುದುರೆ ಬಲವಾಗಿ ಒದ್ದಿದೆ, ಒದ್ದ ರಭಸಕ್ಕೆ ಸ್ಥಳದಲ್ಲೇ ಮಗುವಿನ ಪ್ರಾಣ … Continued

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು : 5 ಕಿಮೀ ದೂರದ ವರೆಗೆ ಕೇಳಿದ ಸ್ಫೋಟದ ಸದ್ದು

ಮುಂಬೈ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ನಾಗ್ಪುರ ಬಳಿಯ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯಾಹ್ನ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾವನ್ನು ಖಚಿತಪಡಿಸಿದ್ದಾರೆ. “ಭಂಡಾರಾದಲ್ಲಿ, ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ, ದೊಡ್ಡ ಅನಾಹುತ ಸಂಭವಿಸಿದೆ, ಇದರ ಪರಿಣಾಮವಾಗಿ … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಹಾಸನ : ಕಾಡಾನೆ ದಾಳಿಗೆ ವೃದ್ಧ ಸಾವು; ಕೊಂದ ನಂತರ ಶವ ಮುಚ್ಚಿಟ್ಟು ಹೋದ ಆನೆ…!

ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ … Continued

ಯಲ್ಲಾಪುರ | ಲಾರಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಲ್ಲದೆ, ಗಾಯಾಳುಗಳ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ … Continued

ತನ್ನದೇ ಮದುವೆ ಕಾರ್ಡ್‌ ಕೊಡಲು ಹೋಗುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮದುಮಗ…!

ನವದೆಹಲಿ: ದುರಂತದ ಘಟನೆಯೊಂದರಲ್ಲಿ, ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಕಾರಿಗೆ ಬೆಂಕಿ ಹೊತ್ತುಕೊಂಡು ಹಚ್ಚಿ ಸುಟ್ಟು ಕರಕಲಾದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮದುಮಗ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ನಾವಡ ನಿವಾಸಿಯಾಗಿರುವ ಅನಿಲ ಎಂಬವರ … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued

ಗಂಟಲಲ್ಲಿ ಪಿಸ್ತಾ ಸಿಪ್ಪೆ ಸಿಲುಕಿ 2 ವರ್ಷದ ಮಗು ಸಾವು

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಎಂದು ಗುರುತಿಸಲಾಗಿದೆ. ಪಿಸ್ತಾವನ್ನು ತಿನ್ನುತ್ತಿದ್ದಾಗ ಅದರ ಸಿಪ್ಪೆ ಬಾಲಕನ … Continued