ಹೊನ್ನಾವರ : ಸಿಡಿಲು ಬಡಿದು ಸಾವು

ಹೊನ್ನಾವರ : ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಶನಿವಾರ ತಡರಾತ್ರಿ ನಡೆದಿದೆ ಎನ್ನಲಾಗಿದ್ದು, ಮೃತ ಮೀನುಗಾರನನ್ನು ವಿನಾಯಕ ಖಾರ್ವಿ ಎಂದು ಗುರುತಿಸಲಾಗಿದೆ. ಮೀನುಗಾರಿಕಾ ಬೋಟ್‌ನಲ್ಲಿ ತೆರಳಿ ಅರಬ್ಬೀ ಸಮುದ್ರದಲ್ಲಿ ಮೀನು ಹಿಡಿದುಕೊಂಡು ಮರಳಿ ಬಂದ ನಂತರ ದೋಣಿಯನ್ನು ದಡಕ್ಕೆ … Continued

ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಶಿಕ್ಷಕಿ ಸಾವು

ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ, ಅಖಿಲೇಶ ಮಲಸಹೋದರ ಪ್ರತೀಕ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ ಯಾದವ್ ಅವರ ಸಹೋದರ ಪ್ರತೀಕ ಯಾದವ್ (38) ಅವರು ಬುಧವಾರ ಲಕ್ನೋದಲ್ಲಿ ನಿಧನರಾಗಿದ್ದಾರೆ. ಪ್ರತೀಕ್ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಪತಿ. ಮೂಲಗಳ ಪ್ರಕಾರ, ಪ್ರತೀಕ ಅವರನ್ನು ಬುಧವಾರ ಮುಂಜಾನೆ ಸುಮಾರು … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಸಚಿವ ಡಿ.ಸುಧಾಕರ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ … Continued

ಮನೆ ಕಟ್ಟಲು ತೋಡಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರ ಸಾವು

ಧಾರವಾಡ: ಇಬ್ಬರು ಬಾಲಕರು ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಕುಮಾರ ನಿಂಗಪ್ಪ ಮುದಕಣ್ಣವರ (7) ಮತ್ತು ಪ್ರಥಮ ಸುರೇಶ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ ಉಳ್ಳಾಗಡ್ಡಿ ಎಂಬಾತ ಧಾರವಾಡದ ಸತ್ತೂರಿನವನು. ರಜೆ ಇದ್ದಿದ್ದರಿಂದ ಮನಸೂರಿಗೆ ಬಂದಿದ್ದ ಎನ್ನಲಾಗಿದೆ. ಇವರಿಬ್ಬರು ಬುಧವಾರ … Continued

ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಚಿಕ್ಕಮಗಳೂರು : ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ … Continued

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ  ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್‌ ಸ್ಟಾರ್ಟ್‌ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued

ಮದುವೆಯಲ್ಲಿ ಏರ್‌ ಕೂಲರ್​​ಗಾಗಿ ಬಡಿದಾಡಿಕೊಂಡ ನೆಂಟರು ; ಸಾವಿನ ಮನೆಯಾದ ಮದುವೆ ಮನೆ…!

ನವದೆಹಲಿ: ಮದುವೆ ಮನೆಯೊಂದರ ಸಂಭ್ರಮವು ಕ್ಷುಲ್ಲಕ ಕಾರಣಕ್ಕೆ ರಣರಂಗವಾಗಿ ಮಾರ್ಪಟ್ಟ ಘಟನೆ ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದಿದೆ. ಕೇವಲ ಒಂದು ಏರ್ ಕೂಲರ್ ಗಾಳಿ ಯಾವ ದಿಕ್ಕಿಗೆ ಮಾಡಬೇಕು ಎಂಬ ವಿಚಾರವಾಗಿ ಶುರುವಾದ ಸಣ್ಣ ಜಗಳ ವಿಕೋಪಕ್ಕೆ ತಿರುಗಿ, ಓರ್ವ ಯುವಕ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಜಂಗಢದ ಜಿಯಾನ್‌ಪುರ ಪೊಲೀಸ್ ಠಾಣಾ … Continued