ಎನ್‌ಕೌಂಟರ್‌ನಲ್ಲಿ 4 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು, ಓರ್ವ ಪೊಲೀಸ್‌ ಹುತಾತ್ಮ

ರಾಯ್ಪುರ : ಶನಿವಾರ ಸಂಜೆ ಛತ್ತೀಸ್‌ಗಢದ ಅಬುಜ್‌ಮದ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತರಾಗಿದ್ದಾರೆ. ಮತ್ತು ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಮೃತ ನಕ್ಸಲರ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಎಕೆ-47, ಎಸ್‌ಎಲ್‌ಆರ್ ಮತ್ತು ಇತರ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ … Continued

ಖ್ಯಾತ ಪರಮಾಣು ವಿಜ್ಞಾನಿ, ಭಾರತದ ಪೋಖ್ರಾನ್ ಪರಮಾಣು ಶಕ್ತಿ ಪರೀಕ್ಷೆ ರೂವಾರಿ ಆರ್‌.ಚಿದಂಬರಂ ನಿಧನ

ನವದೆಹಲಿ : 1975 ಮತ್ತು 1998ರ ಪರಮಾಣು ಶಕ್ತಿ ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ಅರ್‌. ಚಿದಂಬರಂ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3:20 ಕ್ಕೆ ಕೊನೆಯುಸಿರೆಳೆದರು ಎಂದು ಅಣುಶಕ್ತಿ ಇಲಾಖೆಯ … Continued

ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಸಹೋದರಿಯರನ್ನು ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಎಂದು ಗುರುತಿಸಲಾಗಿದೆ. ಇಂದು ಶನಿವಾರ ಮಧ್ಯಾಹ್ನ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ … Continued

ಗದಗ | ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಗದಗ: ಹೈಸ್ಕೂಲ್‌ ಮಕ್ಕಳು ಚಲಾಯಿಸುತ್ತಿದ್ದ ಕಾರು ಡಿವೈಡರ್‌ಗೆ ಗುದ್ದಿ (Accident) ಛಿದ್ರಛಿದ್ರವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ಹಾಗೂ ಗಾಯಾಳುಗಳು ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ … Continued

ವೀಡಿಯೊ..|ನ್ಯೂ ಓರ್ಲಿಯನ್ಸ್‌ನಲ್ಲಿ ಜನಸಂದಣಿ ಮೇಲೆ ವಾಹನ ನುಗ್ಗಿಸಿದ ಶಂಕಿತ ಉಗ್ರ ; 15 ಮಂದಿ ಸಾವು, 35 ಜನರಿಗೆ ಗಾಯ : ನಿವೃತ್ತ ಯೋಧನೇ ಶಂಕಿತ ಉಗ್ರ..!

ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಘಟನೆಯಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಕಾರಣನಾದ ಶಂಕಿತನನ್ನು ಗುರುತಿಸಲಾಗಿದ್ದು, ಈತ ಅಫ್ಘಾನಿಸ್ತಾನದಲ್ಲಿ ಸೇವೆ ಸಲ್ಲಿಸಿದ್ದ ಅಮೆರಿಕದ ಮಾಜಿ ಸೈನಿಕ ಎನ್ನಲಾಗಿದೆ. ಅಲ್ಲದೆ, ಆತ ಓಡಿಸಿಕೊಂಡು … Continued

ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಇಬ್ಬರು ಮಕ್ಕಳು ಸಾವು

ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವಿಗೀಡಾದ ಘಟನೆ ವಿಜಯಪುರ (vijayapura ) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗೀತಾ ಬಡಗಿ (28), ಮಕ್ಕಳಾದ ಶ್ರವಣ (6) ಮತ್ತು ಶರಣ (4) ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ … Continued

ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued

ಮುಂಡಗೋಡ | ಹಾವು ಕಡಿದು 5 ವರ್ಷದ ಅಂಗನವಾಡಿ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಅಂಗನವಾಡಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ  ಪಟ್ಟಣದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಮಯೂರಿ ಸುರೇಶ ಕುಂಬಳಪ್ಪನವರ (5) ಎಂದು ಗುರುತಿಸಲಾಗಿದೆ. ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು … Continued

ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ | ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ (Gas Cylinder Blast) ಗಾಯಗೊಂಡಿದ್ದ ಮತ್ತೊಬ್ಬರು ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದು, ಈ ಘಟನೆಯಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ. ಸಿಲಿಂಡರ್ ಸ್ಫೋಟದಿಂದ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಮೃತಪಟ್ಟಿದ್ದರು. ಮಂಗಳವಾರ ಗಂಭೀರವಾಗಿ … Continued

ಹೊನ್ನಾವರ | ಶರಾವತಿ ಸೇತುವೆ ಮೇಲೆ ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ಹೊನ್ನಾವರ : ಇಂದು ಬೆಳಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ಪಟ್ಟಣದ ಶರಾವತಿ ಸೇತುವೆ ಮೇಲೆ ಭೀಕರ  ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದ ಬೈಕ್ … Continued