ಪುತ್ತೂರು | ಹೊಂಡಕ್ಕೆ ಉರುಳಿ ಬಿದ್ದ ಕಾರು; ಮೂವರು ಸಾವು

ಮಂಗಳೂರು : ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ, ಪಕ್ಕದ ಮನೆಯ ರಮೇಶ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಸುಳ್ಯದಿಂದ ಪುತ್ತೂರಿನ … Continued

ಮನಮೋಹನ್​ ಸಿಂಗ್​ಗೆ ತಮ್ಮ ಮಾರುತಿ 800 ಕಾರು ಬಲು ಇಷ್ಟದ ಕಾರಾಗಿತ್ತು…

ನವದೆಹಲಿ: ಉತ್ತರ ಪ್ರದೇಶದ ಯೋಗಿ ಸರ್ಕಾರದ ಸಚಿವ ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಬಗೆಗಿನ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭದ್ರತಾ ಮುಖ್ಯಸ್ಥರಾಗಿದ್ದರು. ಅವರು 2004 ಮತ್ತು 2008 ರ ನಡುವೆ ಪ್ರಧಾನಿಯಾಗಿದ್ದ ಮನಮೋಹನ ಸಿಂಗ್‌ ಅವರ 22 ಜನರ ಕಮಾಂಡೋ … Continued

ನಾಳೆ ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ ; ಕಾಂಗ್ರೆಸ್‌

ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್‌ ೨೮) ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಇನ್ನಿಲ್ಲ

ನವದೆಹಲಿ : ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು, ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಪ್ರಧಾನಿ ಅವರು ಪತ್ನಿ ಗುರುಚರಣ್ ಸಿಂಗ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. … Continued

ವೀಡಿಯೊ..| ಬೆಂಗಳೂರು ; ಕಾರಿನ ಮೇಲೆ ಕಂಟೈನರ್‌ ಪಲ್ಟಿಯಾಗಿ 6 ಮಂದಿ ಸಾವು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಕಂಟೈನರ್‌ ಲಾರಿ ಉರುಳಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಮೃತಪಟ್ಟ ದುರ್ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿನ ಮೇಲೆ ತುಮಕೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್​ ಲಾರಿ ಬಿದ್ದಿತ್ತು. ಪರಿಣಾಮ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿ, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ … Continued

ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ … Continued

ಬೆಂಗಳೂರು | ಕಾರಿನ ಮೇಲೆ ಕಂಟೇನರ್​ ಪಲ್ಟಿ: ಕಾರಿನೊಳಗಿದ್ದ 6 ಮಂದಿ ಅಪ್ಪಚ್ಚಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ (ಡಿ. 21) ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಸಾವಿಗೀಡಾಗಿದ್ದಾರೆ. ಅ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌.ಪಿ. ಸಿ.ಕೆ.ಬಾಬಾ ಸೇರಿದಂತೆ ಇತರ ಅಧಿಕಾರಿಗಳು ಪೊಲೀಸರು ಧಾವಿಸಿ ಪರಿಶೀಲನೆ … Continued

ಕೋಲಾರ : ಮೂರು ಬೈಕ್‌ ಗಳಿಗೆ ಬೊಲೆರೋ ಡಿಕ್ಕಿ ; ನಾಲ್ವರು ಸಾವು

ಕೋಲಾರ: ಬೊಲೆರೋ ವಾಹನ ಮೂರು ಬೈಕ್‌ಗಳಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ (Road Accident) ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿ-ಗುಡಿಪಲ್ಲಿ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೊಲೆರೋ ವಾಹನ ಗುಡಿಪಲ್ಲಿ ಮುಖ್ಯ ರಸ್ತೆಯ ಬಳಿ 3 ದ್ವಿಚಕ್ರ ವಾನಗಳಿಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದೆ. ವೆಂಕಟರಾಮಪ್ಪ (45), ವೆಂಕಟರಾಮಪ್ಪ ಅವರ … Continued

ಜೀವಂತ ಕೋಳಿಮರಿ ನುಂಗಿದ ವ್ಯಕ್ತಿ ಸಾವು ; ಆದ್ರೆ ದೇಹದೊಳಗೆ ಬದುಕುಳಿದ ಕೋಳಿಮರಿ…!!

ವಿಚಿತ್ರ ಘಟನೆಯೊಂದರಲ್ಲಿ ಛತ್ತೀಸ್‌ಗಢದ ವ್ಯಕ್ತಿಯೊಬ್ಬ ಜೀವಂತ ಕೋಳಿಮರಿಯನ್ನು ನುಂಗಿ ಉಸಿರುಗಟ್ಟಿ ಸಾವಿಗೀಡಾಗಿದ್ದಾನೆ. ಆದರೆ ವಿಚಿತ್ರವೆಂದರೆ ಆತ ನುಂಗಿದ ಕೋಳಿಮರಿ ದೇಹದೊಳಗೆ ಜೀವಂತವಾಗಿ ಪತ್ತೆಯಾಗಿದೆ…! ಗ್ರಾಮಸ್ಥರ ಪ್ರಕಾರ ಇದು ನಿಗೂಢ ಕ್ಷುದ್ರ ಆಚರಣೆ ಭಾಗವಾಗಿ ನಡೆದ ವಿದ್ಯಮಾನವಾಗಿದೆ. ಛತ್ತೀಸ್‌ಗಢದ ಅಂಬಿಕಾಪುರದ ಚಿಂಡ್ಕಾಲೋ ಗ್ರಾಮದ ಆನಂದ ಯಾದವ ಎಂಬ 35 ವರ್ಷದ ವ್ಯಕ್ತಿ, ಸ್ನಾನ ಮುಗಿಸಿ ಬಂದ ಸ್ವಲ್ಪ … Continued

ಭತ್ತದ ತೌಡು ತುಂಬಿದ ಲಾರಿ ಪಲ್ಟಿ: ರಸ್ತೆ ಬಂದಿ ನಿಂತಿದ್ದ ಇಬ್ಬರು ಇಂಜಿನಿಯರ್‌​ ಸೇರಿ ಮೂವರ ಸಾವು

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿಯಾಗಿ ಇಬ್ಬರು ಇಂಜಿನಿಯರ್​ ಸೇರಿ ಮೂವರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಿಂಧನೂರು ಪಿಡಬ್ಲ್ಯೂಡಿ ಕ್ಯಾಂಪ್‌ ಸಮೀಪದ ಡಾಲರ್ಸ್ ಕಾಲನಿ ಕ್ರಾಸ್ ಬಳಿ ಈ ದುರಂತ ನಡೆದಿದ್ದು, ಪಿಡಬ್ಲ್ಯುಡಿ ಇಲಾಖೆಯ ಜವಳಗೇರಾ ಉಪವಿಭಾಗದ ಕಿರಿಯ ಇಂಜಿನಿಯರ್‌​ಗಳಾದ ಶಿವರಾಜ ಕರಿರಾಂಪುರ (29), ಮಲ್ಲಿಕಾರ್ಜುನ … Continued