ಅಂಕೋಲಾ | ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (80 ವರ್ಷ ) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರು ಉತ್ತರ ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ … Continued

ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಇನ್ನಿಲ್ಲ

ನವದೆಹಲಿ : ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಅವರು ಡಿಸೆಂಬರ್ 15 ರಂದು (ಭಾನುವಾರ) ಅಮೆರಿಕದಲ್ಲಿ ನಿಧನರಾಗಿದ್ದಾರೆ. ತಹೃದಯ ಸಂಬಂಧಿ ಸಮಸ್ಯೆಗಳಿಂದ ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾದ ನಂತರ ಅವರು ನಿಧನರಾದರು. ಜಾಕೀರ್‌ ಹುಸೇನ್ ಅವರ ಮ್ಯಾನೇಜರ್ ಪ್ರಕಾರ, ಅವರು ರಕ್ತದೊತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದರು. ತಬಲಾವನ್ನು … Continued

ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ನಿಧನ

ಮಂಗಳೂರು: ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ (77) ನಿಧನರಾಗಿದ್ದಾರೆ. ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯ ಅವರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ತೆಂಕುತಿಟ್ಟಿನ ಭಾಗವತರಾಗಿ ಮನೆಮಾತಾಗಿದ್ದರು. ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದರು. ಲೀಲಾವತಿ ಬೈಪಡಿತ್ತಾಯ … Continued

ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; ಮಗು ಸೇರಿ 7 ಮಂದಿ ಸಾವು

ಚೆನ್ನೈ : ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪ್ರಮುಖ ಮೂಳೆಚಿಕಿತ್ಸೆಯ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಏಳು ರೋಗಿಗಳು ಸಾವಿಗೀಡಾಗಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೊದಲು ನೆಲ ಅಂತಸ್ತಿನ ರಿಸೆಪ್ಶನ್‌ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. … Continued

ಮುರುಡೇಶ್ವರ ಬೀಚ್‌ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು

ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued

ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ … Continued

ವೇಣೂರು ; ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರು ಪಾಲು

ಮಂಗಳೂರು : ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನದಿ ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು ಎಂದು ಗುರುತಿಸಲಾಗಿದೆ. ವೇಣೂರು … Continued

ವೇದಿಕೆಯಲ್ಲಿ ಭಾಗವತಿಕೆ ಮಾಡುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಕುಕ್ಕೆಹಳ್ಳಿ ವಿಠ್ಠಲ ಪ್ರಭು

ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಕಲಾವಿದರೋರ್ವರು ಸಾವಿಗೀಡಾದ ಘಟನೆ ಮುಂಬೈಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ತೀವ್ರ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ. . ಶನಿವಾರ ಕುಕ್ಕೆಹಳ್ಳಿ ವಿಠ್ಠಲ ಪ್ರಭು ಅವರ ನಿರ್ದೇಶನದಲ್ಲಿ ಮುಂಬೈಯಲ್ಲಿ ಯಕ್ಷಗಾನ ನಡೆಯುತ್ತಿತ್ತು. ಭಾಗವತಿಕೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರವಾದ ಎದೆ ನೋವು ಬಂದ ಕಾರಣ … Continued

ತಮಾಷೆಗೆ ಕೆನ್ನೆಗೆ ಹೊಡೆದದ್ದು 3 ವರ್ಷದ ಪುಟ್ಟ ಬಾಲಕಿಯ ಪ್ರಾಣವನ್ನೇ ತೆಗೆಯಿತು ; ನಂತರ ಆತ ಮಾಡಿದ್ದೇನು..?

ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ 3 ವರ್ಷದ ಪುಟ್ಟ ಸೊಸೆಗೆ ಕೊನ್ನೆಗೆ ಹೊಡೆದ ನಂತರ ಆಕೆ ಸಾವಿಗೀಡಾಗಿದ್ದು, ನಂತರ ಆಕೆಯ ದೇಹವನ್ನು ಸುಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಉಲ್ಹಾಸ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 18 ರಂದು ಮಗು ನಾಪತ್ತೆಯಾದ … Continued

ಅಮೆರಿಕದಲ್ಲಿ ಜನ್ಮದಿನಾಚರಣೆ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಭಾರತೀಯ ವಿದ್ಯಾರ್ಥಿ ಸಾವು

ಭಾರತದ 23 ವರ್ಷದ ವಿದ್ಯಾರ್ಥಿಯೊಬ್ಬ ಅಮೆರಿಕದಲ್ಲಿ ತನ್ನ ಜನ್ಮದಿನ ಆಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ನವೆಂಬರ್ 13 ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಆರ್ಯನ್ ರೆಡ್ಡಿ ಜಾರ್ಜಿಯಾದ ಅಟ್ಲಾಂಟಾದಲ್ಲಿರುವ ಮನೆಯಲ್ಲಿ ಸ್ನೇಹಿತರೊಂದಿಗೆ ತಮ್ಮ ಜನ್ಮದಿನ ಸಂಬ್ರಮಾಚಾರಣೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಜನ್ಮದಿನದ ಆಚರಣೆಯ ಸಮಯದಲ್ಲಿ, … Continued