10 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ರಾಯ್ಪುರ: ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿದ್ದು, ಈ ವೇಳೆ ಹತ ನಕ್ಸಲರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ನಕ್ಸಲೀಯರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ಆರಂಭಿಸಿದೆ. ಇಂದು, ಶುಕ್ರವಾರ ಬೆಳ್ಳಂ ಬೆಳಗ್ಗೆ … Continued

ಪಾಕಿಸ್ತಾನದಲ್ಲಿ ಹತ್ಯಾಕಾಂಡ | ಬಂದೂಕುಧಾರಿಗಳಿಂದ ಪ್ರಯಾಣಿಕರ ವಾಹನದ ಮೇಲೆ ಗುಂಡಿನ ದಾಳಿ ; ಕನಿಷ್ಠ 50 ಮಂದಿ ಸಾವು

ಕುರ್ರಂ (ಪಾಕಿಸ್ತಾನ) : ವಾಯವ್ಯ ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಮರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರ ವಾಹನಗಳ ಮೇಲೆ ಬಂದೂಕುಧಾರಿಗಳು ಗುರುವಾರ ಯದ್ವಾತದ್ವಾ ಗುಂಡು ಹಾರಿಸಿದ್ದರಿಂದ ಕನಿಷ್ಠ 50 ಜನರು ಸಾವಿಗೀಡಾಗಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು … Continued

ಉಡುಪಿ ಜಿಲ್ಲೆಯಲ್ಲಿ ಎನ್​ ಕೌಂಟರ್​ ; ಮೋಸ್ಟ್‌ ವಾಂಟೆಡ್‌ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆ

ಉಡುಪಿ:   ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ (Naxalite Encounter) ಮೋಸ್ಟ್‌ ವಾಂಟೆಡ್‌  ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ. ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು … Continued

ವೀಡಿಯೊ..| ವೇಗವಾಗಿ ವಾಹನ ಓಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಟೆಂಪೋ ಹರಿಸಿ ಸಾಯಿಸಿದ ಚಾಲಕ

ಸೂರತ್‌ : ಅತೀ ವೇಗದಲ್ಲಿ ವಾಹನ ಚಲಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೂಡ್ಸ್‌ ಟೆಂಪೋ ಚಾಲಕ ಆ ವ್ಯಕ್ತಿಯ ಮೇಲೆ ಟೆಂಪೋ ಹರಿಸಿದ ಅಮಾನುಷ ಘಟನೆ ಗುಜರಾತಿನ (Gujarat) ಸೂರತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದನ್ನು ತಡೆಯಲು ಯತ್ನಿಸಿದ ಮಗನ್ನು ಸಲ್ಪ ದೂರ ಟೆಂಪೋ ಎಳೆದೊಯ್ದಿದೆ. ಘಟನೆಯಲ್ಲಿ ವಾಹನ ಮೈಮೇಲೆ ಹರಿದ ವ್ಯಕ್ತಿ ಮೃತ ಪಟ್ಟಿದ್ದಾರೆ. ಅಪಘಾತದ … Continued

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು

ಮಂಗಳೂರು : ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಭಾನುವಾರ (ನ.17) ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಮೂವರು ವಿದ್ಯಾರ್ಥಿನಿಯರಾದ ಕೀರ್ತನಾ ಎನ್. (21), ನಿಶಿತಾ ಎಂ. ಡಿ. (21) ಮತ್ತು ಪಾರ್ವತಿ ಎಸ್. (20) ಎಂದು ಗುರುತಿಸಲಾಗಿದೆ. ಈ … Continued

ವೀಡಿಯೊ..| ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಮತ್ತು 46 ಜನರು ಗಾಯಗೊಂಡಿದ್ದಾರೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆ ಹೊತ್ತುಕೊಂಡಿದೆ. ರೈಲು ತನ್ನ ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ … Continued

ವೀಡಿಯೊ…| ಬೆಂಗಳೂರು : ಬಸ್‌ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಸಾವು : ಬಸ್ಸಿನಲ್ಲಿದ್ದವರ ಪ್ರಾಣ ಉಳಿಸಿದ ಕಂಡಕ್ಟರ್…

ಬೆಂಗಳೂರು: ಬೆಂಗಳೂರು ಮಹಾನಗರದ ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗ 40 ವರ್ಷದ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಚಾಲನೆ ಮಾಡುತ್ತಿರುವಾಗಲೇ ಚಾಲಕ ಕಿರಣಕುಮಾರ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು … Continued

ವೀಡಿಯೊ..| ಪಂದ್ಯ ನಡೆಯುತ್ತಿರುವಾಗಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾವು, ಐವರಿಗೆ ಗಾಯ

ಪೆರುವಿನಲ್ಲಿ ಫುಟ್ಬಾಲ್ ಪಂದ್ಯ ನಡೆಯುತ್ತಿರುವಾಗ ಸಿಡಿಲು ಬಡಿದು ಫುಟ್ಬಾಲ್ ಆಟಗಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೆರುವಿನ ಚಿಲ್ಕಾ ಜಿಲ್ಲೆಯ ಪೆರುವಿಯನ್ ನಗರದಲ್ಲಿ ಹುವಾನ್‌ಕಾಯೊದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ತಂಡಗಳಾದ ಜುವೆಂಟುಡ್ ಬೆಲ್ಲವಿಸ್ಟಾ ಮತ್ತು ಫ್ಯಾಮಿಲಿಯಾ ಚೋಕಾ ನಡುವೆ ಫುಟ್‌ಬಾಲ್ ಪಂದ್ಯ ನಡೆಯುತ್ತಿತ್ತು. ದಿ ಸನ್‌ನ ವರದಿಯ ಪ್ರಕಾರ, … Continued

ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued