ಹಿರಿಯ ಕೈಗಾರಿಕೋದ್ಯಮಿ-ರಾಷ್ಟ್ರೀಯ ಐಕಾನ್‌ ರತನ್ ಟಾಟಾ ಇನ್ನಿಲ್ಲ

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಹಠಾತ್ ಕುಸಿತದಿಂದಾಗಿ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ನಂತರ ಅವರು ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಸೋಮವಾರ (ಅಕ್ಟೋಬರ್ 7) ಸಾಮಾಜಿಕ ಮಾಧ್ಯಮದಲ್ಲಿ … Continued

ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued

ಶಾಕಿಂಗ್‌ …| ನಿಮ್ಮ ಮಗಳು ಸೆಕ್ಸ್‌ ಜಾಲದಲ್ಲಿ ಸಿಲುಕಿದ್ದಾಳೆಂದು ಪೊಲೀಸರ ವೇಷದಲ್ಲಿ ವಂಚಕರಿಂದ ಫೋನ್‌ ಕಾಲ್‌ : ಶಿಕ್ಷಕಿ ಹೃದಯಘಾತದಿಂದ ಸಾವು…!

ಆಗ್ರಾ : ಮೊಬೈಲ್‌ ಕರೆ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ, ಆದರೆ ಅಂತಹ ಒಂದು ವಂಚನೆ ಕಾಲ್‌ ಮಹಿಳೆಯೊಬ್ಬರ ಜೀವವನ್ನೇ ಆಹುತಿ ತೆಗೆದುಕೊಂಡ ಘಟನೆ ವರದಿಯಾಗಿದೆ. ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಫೋಟೋ ಪೋಸಿನಲ್ಲಿದ್ದ ವ್ಯಕ್ತಿಯಿಂದ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ತನ್ನ ಕಾಲೇಜಿಗೆ … Continued

ವೀಡಿಯೊ…| ಪುಣೆ ಸಮೀಪ ಹೆಲಿಕಾಪ್ಟರ್ ಪತನ : ಇಬ್ಬರು ಪೈಲಟ್‌ ಸೇರಿ ಮೂವರು ಸಾವು

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪುಣೆಯ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೂಡಲೇ ನಗರದ ವಸತಿ ಉಪನಗರವಾದ ಬವ್‌ಧಾನ್‌ ಗುಡ್ಡಗಾಡು ಪ್ರದೇಶದ ಬಳಿ ಇಂದು, ಬುಧವಾರ ಬೆಳಿಗ್ಗೆ 6:45 ರ ಸುಮಾರಿಗೆ ಪತನಗೊಂಡಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ … Continued

ವೀಡಿಯೊ..| ಅಸ್ಸಾಂನಲ್ಲಿ ಬೈಕ್ ಸವಾರನನ್ನು ಅಟ್ಟಾಡಿಸಿಕೊಂಡು ಹೋಗಿ ಕೊಂದುಹಾಕಿದ ಘೇಂಡಾಮೃಗ…

ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಪೊಬಿತೋರಾ ವನ್ಯಜೀವಿ ಅಭಯಾರಣ್ಯದ ಬಳಿ ಘೇಂಡಾಮೃಗವೊಂದು ಅಟ್ಟಿಸಿಕೊಂಡು ಹೋಗಿ ದಾಳಿ ಮಾಡಿದ ನಂತರ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸದ್ದಾಂ ಹುಸೇನ್ (37 ವರ್ಷ) ಘಟನೆಯ ಸ್ಥಳದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕಾಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ತಮ್ಮ ದ್ವಿಚಕ್ರ … Continued

ಬಿಹಾರ | ‘ಜೀವಿತ ಪುತ್ರಿಕಾ’ ಉತ್ಸವದಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿ 43 ಸಾವು

ಪಾಟ್ನಾ : ಬಿಹಾರದಲ್ಲಿ ‘ಜೀವಿತ್‌ ಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ ಕನಿಷ್ಠ 43 ಜನರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಹಾಗೂ ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ. ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು … Continued

ಬೆಳಗಾವಿ | ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

ಬೆಳಗಾವಿ: ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಬೆಳಗಾವಿ ನಗರದ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣ ಪಾಟೀಲ(48) ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಸೇತುವೆಯಿಂದ … Continued

ಮಾಗಡಿ | ಮರಕ್ಕೆ ಡಿಕ್ಕಿ ಹೊಡೆದ ಕಾರು ; ಒಂದೇ ಕುಟುಂಬದ ಐವರು ಸಾವು

ರಾಮನಗರ:  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ ಎಂದು ವರದಿಯಾಗಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮಾಗಡಿ … Continued

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಅಸ್ವಸ್ಥಗೊಂಡು ಸಾವು

ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿಯೊಬ್ಬರು ಕೆಲದಿನಗಳ ನಂತರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಉಪನ್ಯಾಸಕಿಯಾಗಿದ್ದ ಅರ್ಚನಾ ಕಾಮತ್ (33) ಅವರು ತಮ್ಮ ಸಂಬಂಧಿಕರಿಗೆ ಪಿತ್ತಜನಕಾಂಗ (ಲಿವರ್‌) ದಾನ ಮಾಡಿದ ನಂತರ ಹಠಾತ್‌ ಆರೋಗದಯಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ … Continued

ನಿಪ್ಪಾಣಿ | ಸರಣಿ ಅಪಘಾತ : ಇಬ್ಬರು ಸಾವು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ … Continued