ಚಿಕ್ಕೋಡಿ : ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ … Continued

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

ಮಂಗಳೂರು: ಜೆಸಿಬಿಯಿಂದ ಹಳೆ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮನೆ ಮಾಲೀಕ ಜೇಮ್ಸ್ ಜತ್ತನ್ನ (56) ಹಾಗೂ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ … Continued

ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಹಾಲಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಕನ್ನಡ ಪ್ರಭ ಮೊದಲಾದ ಪತ್ರಿಕೆಗಳಲ್ಲಿ ಕೆಲಸ … Continued

ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು … Continued

ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐ ಆರ್ ದಾಖಲು

ಬೆಂಗಳೂರು : ಖ್ಯಾತ ಸಿನೆಮಾ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued

ಐಪಿಎಸ್ ಅಧಿಕಾರಿಯ ಮಗಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದಲ್ಲಿ ಭಾನುವಾರ (ಸೆಪ್ಟೆಂಬರ್ 1) 19 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಅನಿಕಾ ರಸ್ತೋಗಿ ಎಂಬ ವಿದ್ಯಾರ್ಥಿನಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ವರದಿಗಳ ಪ್ರಕಾರ, ವಿದ್ಯಾರ್ಥಿನಿಯು ಹಾಸ್ಟೆಲ್‌ನ ತನ್ನ ಕೊಠಡಿಯ ಬಾಗಿಲು ತೆರೆಯದ ಕಾರಣ … Continued

ಒಮನ್ ನಲ್ಲಿ‌ ಕಾರು ಅಪಘಾತ: ಗೋಕಾಕ ಮೂಲದ ನಾಲ್ವರು ಸಾವು

ಬೆಳಗಾವಿ: ಒಮನ್‌ನಲ್ಲಿ ಸಂಭವಿಸಿದ ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ವಾಹನ ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಒಮಾನಿನ ಸಲಾಲಾ ನಗರದಿಂದ ಮುಸ್ಕತ್‌ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ‌ ರವಾನೆಯಾಗಿತ್ತು. ಗೋಕಾಕ … Continued

ದೇಹದೊಳಗೆ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿಸಿದ ಪಾದ್ರಿ, ಸಹಚರರ ಏಟಿಗೆ ವ್ಯಕ್ತಿಯ ಪ್ರಾಣವೇ ಹೋಯ್ತು..!

ಗುರುದಾಸಪುರ : ಪಾದ್ರಿ ಮತ್ತು ಆತನ ಎಂಟು ಮಂದಿ ಸಹಚರರು “ಶರೀರದೊಳಗೆ ಹೊಕ್ಕಿರುವ ದೆವ್ವ ಬಿಡಿಸಲು 30 ವರ್ಷದ ವ್ಯಕ್ತಿಯೊಬ್ಬನನ್ನು ಥಳಿಸಿದ್ದರಿಂದ ಆತ ಸಾವಿಗೀಡಾದ ಘಟನೆ ಪಂಜಾಬ್‌ನ ಗುರುದಾಸಪುರ ಜಿಲ್ಲೆಯಲ್ಲಿ ನಡೆದಿದೆ ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಸ್ಯಾಮ್ಯುಯೆಲ್ ಮಸಿಹ್ ಎಂದು ಗುರುತಿಸಲಾಗಿದ್ದು, ದಿನಗೂಲಿ ಮಾಡುತ್ತಿದ್ದರು. ಅವರು ರೋಗಗ್ರಸ್ತರಾಗಿದ್ದರು ಎಂದು ವರದಿಯಾಗಿದೆ. ಸ್ಯಾಮ್ಯುಯೆಲ್ ಮಸಿಹ್ ಸ್ಥಿತಿಯಿಂದ ಕಳವಳಗೊಂಡ … Continued

ಜಿಪಿಎಸ್ ಸಿಗ್ನಲ್ ಸಿಗದೆ ಸೌದಿ ಅರೇಬಿಯಾ ಮರುಭೂಮಿಯಲ್ಲಿ ಜೀವ ಕಳೆದುಕೊಂಡ ತೆಲಂಗಾಣ ವ್ಯಕ್ತಿ, ಸಹೋದ್ಯೋಗಿ

ಹೈದರಾಬಾದ್: ಸೌದಿ ಅರೇಬಿಯಾದ ರಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವಿಗೀಡಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ಮೂರು ವರ್ಷಗಳಿಂದ ಟೆಲ್ಕಾಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ಎಂಬವರು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಮರುಭೂಮಿಯ ನಿರ್ಜನ ಮತ್ತು ಅಪಾಯಕಾರಿ ಖಾಲಿ … Continued