ಹುಬ್ಬಳ್ಳಿ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಓಮ್ನಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಶವಾಯುಗೆ ಔಷಧಿ … Continued

ಫಾರ್ಮಾ ಕಂಪನಿ ಘಟಕದಲ್ಲಿ ರಿಯಾಕ್ಟರ್ ಸ್ಫೋಟ; 15 ಮಂದಿ ಸಾವು, ಹಲವರಿಗೆ ಗಾಯ

ಬುಧವಾರ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ನಂತರ ಕನಿಷ್ಠ ಹದಿನೈದು ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು 41 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯ ಘಟಕದಲ್ಲಿ ಈ ಘಟನೆ ನಡೆದಿದೆ. ಫಾರ್ಮಾ ಸಂಸ್ಥೆಯ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟವು ಗಮನಾರ್ಹ ಹಾನಿಯನ್ನುಂಟುಮಾಡಿತು ಮತ್ತು ಅನೇಕರು … Continued

ನರಗುಂದ | ಕೊಣ್ಣೂರು ಬಳಿ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಗದಗ: ಸಾರಿಗೆ ಬಸ್‌ ಹಾಗೂ ಕಾರು ನಡುವೆ ಭೀಕರ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 4 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), … Continued

ದೇವಸ್ಥಾನದಲ್ಲಿ ಕಾಲ್ತುಳಿತ ; 7 ಜನರು ಸಾವು, 35 ಮಂದಿಗೆ ಗಾಯ

ಪಾಟ್ನಾ: ಭಾನುವಾರ ರಾತ್ರಿ ಬಿಹಾರದ ಜೆಹಾನಾಬಾದ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಬಲಪ್ರಯೋಗ ಮಾಡಿದ ನಂತರ ಕಾಲ್ತುಳಿತ ಸಂಭವಿಸಿ ಮೂವರು ಮಹಿಳೆಯರು ಸೇರಿದಂತೆ ಏಳು ಭಕ್ತರು ಮೃತಪಟ್ಟಿದ್ದಾರೆ. ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರ ನಾಥ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಕಾಲ್ತುಳಿತದಲ್ಲಿ ಕನಿಷ್ಠ 35 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿಯಿಂದಲೇ ಸಿದ್ದೇಶ್ವರನಾಥ ದೇಗುಲದಲ್ಲಿ ಭಕ್ತರ ದಂಡೇ … Continued

ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

ಜಶ್ಪುರ: ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆನೆ ದಾಳಿಗೆ ಈವರೆಗೆ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಬಾಗೀಚಾ ನಗರ ಪಂಚಾಯತ್‌ನ ಗಮ್ಹ್ರಿಯಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಅವರು … Continued

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. … Continued

ಮದುವೆಯಾದ ಕೆಲವೇ ಹೊತ್ತಿನಲ್ಲಿ ನವದಂಪತಿ ನಡುವೆ ಹೊಡೆದಾಟ ; ವಧು ಸಾವು, ವರನ ಸ್ಥಿತಿ ಗಂಭೀರ…!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಜಗಳವಾಗಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ನಂತರ ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಕೆಜಿಎಫ್ (KGF)​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ನವೀನ್ … Continued

ಬಾಂಗ್ಲಾದೇಶ ಬಿಕ್ಕಟ್ಟು : ಅವಾಮಿ ಲೀಗ್‌ ನಾಯಕನ ಹೊಟೇಲಿಗೆ ಬೆಂಕಿ ಹಚ್ಚಿ 24 ಜನರನ್ನು ಸಜೀವ ದಹನ ಮಾಡಿದ ಗುಂಪು

ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವಾಮಿ ಲೀಗ್ ಪಕ್ಷದ ನಾಯಕರ ಒಡೆತನದ ಹೋಟೆಲ್‌ ಗೆ ಗುಂಪೊಂದು ಬೆಂಕಿ ಹಚ್ಚಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಸಜೀವ ದಹನ ಮಾಡಿದೆ ಎಂದು ಸ್ಥಳೀಯ ಪತ್ರಕರ್ತರು … Continued

ವಯನಾಡು ಭೂ ಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಮೊದಲು ಕರೆ ಮಾಡಿದ್ದ ನೀತು ಜೊಜೊ ಅದೇ ದುರಂತದಲ್ಲಿ ಸಾವು

ವಯನಾಡು: ಜುಲೈ 30 ರಂದು ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಎಚ್ಚರಿಕೆ ನೀಡಿದವರಲ್ಲಿ ವಯನಾಡಿನ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ನೀತು ಜೊಜೊ ಮೊದಲಿಗರು, ಆದರೆ ರಕ್ಷಣಾ ತಂಡಗಳು ತಲುಪುವ ಮೊದಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯ ಚೂರಲ್ಮಲಾದಲ್ಲಿ ಸಂಭವಿಸಿದ ವಿನಾಶಕಾರಿ ಭೂ ಕುಸಿತದ ಸರಣಿಯ ಮೊದಲ ಭೂಕುಸಿತದ ನಂತರ … Continued

ಭರತನಾಟ್ಯ-ಕೂಚಿಪುಡಿಯ ಅಭಿಜಾತ ನೃತ್ಯಪಟು, ಪದ್ಮವಿಭೂಷಣ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ (84) ಅವರು ಶನಿವಾರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು ಮತ್ತು ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು ಯಾಮಿನಿ ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ ತಿಳಿಸಿದ್ದಾರೆ. ಅಂತಿಮ ಶ್ರದ್ಧಾಂಜಲಿಗಾಗಿ ಕೃಷ್ಣಮೂರ್ತಿ ಅವರ ಪಾರ್ಥಿವ … Continued