ಗದಗ : ಬಿಡಾಡಿ ದನಗಳು ಗುದ್ದಿ ವೃದ್ಧ ಸಾವು

ಗದಗ: ಬಿಡಾಡಿ ದನಗಳ ಹಾವಳಿಗೆ ವೃದ್ಧ ಸಾವಿಗೀಡಾದ ಘಟನೆ ಬುಧವಾರ ಬೆಳಗ್ಗೆ ಬೆಟಗೇರಿ ಪಟ್ಟಣದಲ್ಲಿ ನಡೆದಿದೆ. ಗದಗ-ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರದ 7ನೇ ನಂಬರ ಶಾಲೆ ಬಳಿ ಈ ಘಟನೆ ನಡೆದಿದ್ದು, ನಂತರ ರೊಚ್ಚಿಗೆದ್ದ ಜನರು ಬೀದಿಗಳಿದು ಪ್ರತಿಭಟನೆ ನಡೆಸಿದರಲ್ಲದೆ ನಗರಸಭೆಯ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೃದ್ಧನನ್ನು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ … Continued

ಮನೆಗೆ ನೀರು ನುಗ್ಗಿದ ಸುದ್ದಿ ಕೇಳಿ ವ್ಯಕ್ತಿ ಹೃದಯಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದ ಉಪ್ಪಾರಗಲ್ಲಿಯಲ್ಲಿ ದಶರಥ ಬಂಡಿ(80)ಎಂಬವರು ತಮ್ಮ ಮನೆಗೆ ಮಳೆ ನೀರು ನುಗ್ಗಿರುವ ವಿಷಯ ತಿಳಿದು ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಹೊತ್ತು ಮನೆಗೆ ಮಳೆ ನೀರು ಬಂದಿರುವ ವಿಷಯ ತಿಳಿದ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಘಟಪ್ರಭಾ ನದಿಯಿಂದ ಪ್ರವಾಹ ಬಂದು ಎಲ್ಲರೂ ಮನೆ ಖಾಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿ … Continued

ಯಲ್ಲಾಪುರ | ಗಾಳಿಮಳೆ ; ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ಸಾವು

ಯಲ್ಲಾಪುರ: ಸ್ಕೂಟರ್‌ ಸವಾರನ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆಯ ಎದುರು ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಗುರುತಿಸಲಾಗಿದೆ. ಈತ ಮನೆಯಿಂದ ತನ್ನ ಸ್ಕೂಟರಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಆತನ … Continued

ಗೀಸರ್‌ ಗ್ಯಾಸ್‌ ಸೋರಿಕೆ ; ತಾಯಿ-ಮಗ ಸಾವು

ರಾಮನಗರ : ಬಿಸಿ ನೀರು ಕಾಯಿಸುವ ಅನಿಲ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಜ್ಯೋತಿನಗರದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶೋಭಾ(40) ಹಾಗೂ ಅವರ ಪುತ್ರ ದಿಲೀಪ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ ಸ್ನಾನದ … Continued

ಬಾಂಗ್ಲಾದೇಶದ ಪ್ರತಿಭಟನೆಯಲ್ಲಿ 105 ಮಂದಿ ಸಾವು : ದೇಶಾದ್ಯಂತ ಕರ್ಫ್ಯೂ, ಮಿಲಿಟರಿ ನಿಯೋಜನೆ

ಢಾಕಾ : ದೇಶಾದ್ಯಂತ ಹರಡಿರುವ ಅಶಾಂತಿಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಗಳು ಕನಿಷ್ಠ 105 ಜನರ ಸಾವಿಗೆ ಕಾರಣವಾಗಿವೆ ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಇದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಕಠಿಣ ರಾಜಕೀಯ ಸವಾಲನ್ನು ಒಡ್ಡುತ್ತಿದೆ, ಏಕೆಂದರೆ ವಿದ್ಯಾರ್ಥಿಗಳು … Continued

ಭಾರೀ ಮಳೆಗೆ ಮನೆ ಗೋಡೆ ಕುಸಿತ ; ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ಸುರಿದ ಮಳೆಗೆ ಮನೆ ಸೋರುತ್ತಿದ್ದು, ಶುಕ್ರವಾರ ಬೆಳಗ್ಗೆ ಗೋಡೆ ಕುಸಿದಿದೆ. ಒಂದೇ ಕೋಣೆಯಲ್ಲಿ ಮಲಗಿದ್ದ ಚೆನ್ನಮ್ಮ ಹರಕುಣಿ (30) ಹಾಗೂ ಆಕೆಯ ಅವಳಿ ಹೆಣ್ಣು ಮಕ್ಕಳಾದ … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಉಲ್ಬಣ : 39 ಸಾವು, ಸರ್ಕಾರಿ ಟಿವಿ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ : ಸರ್ಕಾರಿ ಉದ್ಯೋಗಗಳಿಗೆ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರತಿಭಟನಾಕಾರರು, ಭದ್ರತಾ ಅಧಿಕಾರಿಗಳು ಮತ್ತು ಸರ್ಕಾರದ ಪರ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ವ್ಯಾಪಕ ಹಿಂಸಾಚಾರವು ಬಾಂಗ್ಲಾದೇಶದಲ್ಲಿ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದಲ್ಲಿ ಗುರುವಾರವು ಅತ್ಯಂತ ಹಿಂಸಾತ್ಮಕ ದಿನವಾಗಿದೆ. ವಿದ್ಯಾರ್ಥಿಗಳು ಬಾಂಗ್ಲಾದೇಶದಾದ್ಯಂತ ಸಾರಿಗೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದಾಗ ಪೊಲೀಸರು … Continued

ಶಿರೂರು ಗುಡ್ಡ ಕುಸಿತ ದುರಂತ ; ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರದ ಚೆಕ್ ನೀಡಿದ ಸಚಿವ ವೈದ್ಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಿಂದ ಮೃತಪಟ್ಟ ಮತ್ತು ಹಾನಿಗೊಳಗಾದವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬುಧವಾರ ಪರಿಹಾರ ಚೆಕ್ ವಿತರಿಸಿದ್ದಾರೆ. ಶಿರೂರುನಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟ ೩ ವ್ಯಕ್ತಿಗಳ ಕುಟುಂಬಗಳ ವಾರಿಸುದಾರರಿಗೆ ತಲಾ ೫ ಲಕ್ಷ ರೂ. ಗಳ ಪರಿಹಾರ ಚೆಕ್ ನೀಡಿದರು. … Continued

ಶಿಗ್ಗಾವಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ನೀಲಪ್ಪ ಮೂಲಿಮನಿ (23), ಸುದೀಪ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), … Continued

ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued