ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡದ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ರುಕ್ಮಾ ಗುಲಾಬಿ  ಮಾಳ್ಸೇಕರ (70) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. . ಭಾರಿ … Continued

ಹಾವೇರಿ ಬಳಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್‌ (ಟಿಟಿ) ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಮಹಿಳೆಯರು, ಒಂದು … Continued

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಸಾವು

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಆಟೋ ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ಹಾಸನದ ಅಲ್ಲೂರು ನಿವಾಸಿ ರಾಜು (50) ಹಾಗೂ ಪುತ್ತೂರಿನ ರಾಮಕುಂಜ ನಿವಾಸಿ ದೇವರಾಜ ಗೌಡ (46) ಎಂದು ಗುರುತಿಸಲಾಗಿದೆ. ಇಬ್ಬರೂ … Continued

ಉಳ್ಳಾಲ : ಭಾರೀ ಮಳೆಗೆ ಕಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು : ಪಕ್ಕದ ಕಂಪೌಂಡ್ ಗೋಡೆ ಮನೆ ಮೇಲೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವಿಗೀಡಾದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಹಾನ ಮಂಝಿಲ್ ಮನೆಯ ಯಾಸಿರ್ (45), ಪತ್ನಿ ಮರಿಯಮ್ಮ(40), ಪುತ್ರಿಯರಾದ ರಿಹಾನಾ (11)ಮತ್ತು ರಿಫಾನ (17) ಮೃತರು ಎಂದು ಗೊತ್ತಾಗಿದೆ. … Continued

ಅಯೋಧ್ಯೆ ರಾಮ ಮಂದಿರದ ಬಳಿ ತಮ್ಮದೇ ಬಂದೂಕಿನ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

ಅಯೋಧ್ಯೆ : ಇಲ್ಲಿನ ರಾಮ ಮಂದಿರದಲ್ಲಿ ನಿಯೋಜನೆಗೊಂಡಿದ್ದ 25 ವರ್ಷದ ಪೊಲೀಸ್ ಜವಾನ ತನ್ನ ಸ್ವಂತ ಬಂದೂಕಿನಿಂದ ಗುಂಡು ತಗುಲಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವಾಗಿ ಗುಂಡು ಹಾರಿದ್ದೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಶತ್ರುಘ್ನ ವಿಶ್ವಕರ್ಮ ಅವರನ್ನು ವಿಶೇಷ ಭದ್ರತಾ ಪಡೆಯ (ಎಸ್‌ಎಸ್‌ಎಫ್) ಭಾಗವಾಗಿ ದೇವಾಲಯದ ಆವರಣದಲ್ಲಿ ಭದ್ರತೆಗಾಗಿ … Continued

ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದು14 ಮಂದಿ ಸಾವು

ನವದೆಹಲಿ : ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಋಷಿಕೇಶ-ಬದ್ರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ 26 ಜನರಿದ್ದ ಟೆಂಪೋ ಟ್ರಾವೆಲರ್ ರಸ್ತೆಯಿಂದ ಸ್ಕಿಡ್ ಆಗಿ ಅಲಕನಂದಾ ನದಿಗೆ ಬಿದ್ದ ಪರಿಣಾಮ ಕನಿಷ್ಠ 14 ಪ್ರವಾಸಿಗರು ಮೃತಪಟ್ಟಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಕುವೈತ್‌ ಕಟ್ಟಡದಲ್ಲಿ ಅಗ್ನಿ ಅವಘಡ ; ಭಾರತೀಯರು ಸೇರಿ 41 ಮಂದಿ ಸಾವು

ಕುವೈತ್ : ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ಕನಿಷ್ಠ 41 ಜನರು ಸಾವಿಗೀಡಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮವು ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಹಲವಾರು ಭಾರತೀಯರು ಸಹ ಮೃತಪಟ್ಟಿದ್ದಾರೆ. ಸ್ಥಳೀಯ ಮಾಧ್ಯಮಗಳು ಈ ಕಟ್ಟಡವು ಹೆಚ್ಚಿನ ಮಲಯಾಳಂ ಜನಸಂಖ್ಯೆಯನ್ನು ಹೊಂದಿದೆ ಎಂದು ವರದಿ ಮಾಡಿದೆ. … Continued