ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ ನಿಧನ

ಮೈಸೂರು : ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ (93) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮಂಗಳವಾರ (ಜೂನ್ 11) ನಿಧನರಾಗಿದ್ದಾರೆ. ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಚೇತರಿಸಕೊಳ್ಳುತ್ತಿದ್ದರು. … Continued

ಉಳ್ಳಾಲ : ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ; ರಕ್ಷಿಸಿದರೂ ಬಚಾವಾಗದ ಓರ್ವ ಮಹಿಳೆ

ಮಂಗಳೂರು : ಉಳ್ಳಾಲ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರು ತೆರೆಯ ಅಬ್ಬರಕ್ಕೆ ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಯಾಗಿರುವ ಪರಿಮಿ ರತ್ನಕುಮಾರಿ (57) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳ್ಳಾಲ ಕಡಲತೀರದಲ್ಲಿ ಇವರು ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದೆ. ಅಲೆಯ … Continued

ಪೊಲೀಸರ ಎನ್‌ಕೌಂಟರ್‌ನಲ್ಲಿ ಹತರಾದ ತಲೆಯ ಮೇಲೆ 38 ಲಕ್ಷ ರೂ.ಬಹುಮಾನವಿದ್ದ 6 ನಟೋರಿಯಸ್‌ ನಕ್ಸಲರು…

ರಾಯ್ಪುರ : ಎರಡು ದಿನಗಳ ಹಿಂದೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಆರು ನಕ್ಸಲೀಯರ ತಲೆಯ ಮೇಲೆ 38 ಲಕ್ಷ ರೂ.ಗಳ ಬಹುಮಾನ ಹೊಂದಿದ್ದರು ಎಂದು ವರದಿಯಾಗಿದೆ. ಈ ಕಾರ್ಯಾಚರಣೆಯು ನಕ್ಸಲೀಯರ ದಾಳಿಯ ಶಕ್ತಿಯ ಆಧಾರಸ್ತಂಭವೆಂದು ಪರಿಗಣಿಸಲಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಕಂಪನಿ ನಂ.6ರ ಮೇಲೆ ಭದ್ರತಾ … Continued

ಮೀಡಿಯಾ ಬ್ಯಾರನ್- ರಾಮೋಜಿ ರಾವ್ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಹೈದರಾಬಾದ್‌ : ತೆಲುಗು ಮೀಡಿಯಾ ಬ್ಯಾರನ್ ಮತ್ತು ಹೈದರಾಬಾದ್‌ನ ಫಿಲ್ಮ್ ಸಿಟಿಯ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ರಾಮೋಜಿ ರಾವ್ ಅವರ ಸುಪ್ರಸಿದ್ಧ ಪ್ರಯಾಣವು ಜೂನ್ 8, 2024 ರಂದು ಕೊನೆಗೊಂಡಿತು, ಅವರು ಹೃದಯ ಸಂಬಂಧಿ ತೊಡಕುಗಳಿಂದ ನಿಧನರಾದರು. ಭಾರತೀಯ ಮಾಧ್ಯಮ ಮತ್ತು ಮನರಂಜನೆ ಕ್ಷೇತ್ರದಲ್ಲಿ … Continued

ಉತ್ತರಾಖಂಡದಲ್ಲಿ ಕೆಟ್ಟ ಹವಾಮಾನದಿಂದಾಗಿ ಕರ್ನಾಟಕದವರು ಸೇರಿ 9 ಚಾರಣಿಗರು ಸಾವು

ಕರ್ನಾಟಕದ 18 ಚಾರಣಿಗರು ಸೇರಿದಂತೆ 22 ಸದಸ್ಯರ ಚಾರಣಿಗರ ತಂಡದಲ್ಲಿದ್ದ ಒಂಬತ್ತು ಚಾರಣಿಗರು ನಿನ್ನೆ ಉತ್ತರಾಖಂಡದ ಉತ್ತರಕಾಶಿಯ ಸಹಸ್ರ ತಾಲ್ (ಸರೋವರ) ಕ್ಕೆ ತೆರಳುತ್ತಿದ್ದಾಗ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿ ಸಿಕ್ಕಿಬಿದ್ದು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಕರ್ನಾಟಕದ ಐವರು ಇದ್ದಾರೆ ಎಂದು ಹೇಳಲಾಗಿದೆ. ವಾಯು-ನೆಲದ ಜಂಟಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಇದುವರೆಗೆ ಹದಿಮೂರು … Continued

ವೀಡಿಯೊ..| ಯೋಗ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಬೀಸುತ್ತ ಡ್ಯಾನ್ಸ್ ಮಾಡುವಾಗ ಪ್ರಾಣಬಿಟ್ಟ ನಿವೃತ್ತ ಸೈನಿಕ ; ಯೋಗ ಮಾಡುತ್ತಿದ್ದಾನೆಂದು ತಿಳಿದು ಚಪ್ಪಾಳೆ ತಟ್ಟಿದ ಜನ

ಮಧ್ಯಪ್ರದೇಶದ ಇಂದೋರ್ (Indore) ಯೋಗ ಕೇಂದ್ರದಲ್ಲಿ ಆಸ್ತ ಯೋಗ ಕ್ರಾಂತಿ ಅಭಿಯಾನದ ವತಿಯಿಂದ ನಡೆದ ಯೋಗ ಕಾರ್ಯಕ್ರಮದಲ್ಲಿ ನಗು ಮತ್ತು ತೂಕ ಇಳಿಸುವ ಯೋಗಕ್ಕೆ ಹೆಸರಾದ ಬಲ್ವಿಂದರ್ ಸಿಂಗ್ ಛಾಬ್ರಾ (Balwinder Singh Chhabra) ಎಂಬ ನಿವೃತ್ತ ಸೈನಿಕ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಯೋಗ … Continued

ರೀಮಲ್ ಚಂಡಮಾರುತ: ಅಸ್ಸಾಂ, ಮಿಜೋರಾಂನಲ್ಲಿ ಭಾರಿ ಗಾಳಿಮಳೆ, 24 ಮಂದಿ ಸಾವು

ಗುವಾಹತಿ: ‘ರೀಮಲ್‌’ ಚಂಡಮಾರುತದ ಪರಿಣಾಮ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ಮಳೆ ಸಂಬಂಧಿಸಿದ ಅನಾಹುತದಲ್ಲಿ 24 ಜನರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಬಿರುಗಾಳಿಯಿಂದ ಕೂಡಿದ ಭಾರಿ ಮಳೆಯಾಗಿದೆ. ಮಿಜೋರಾಂನ ಐಜ್ವಾಲ್ ಜಿಲ್ಲೆಯ ಮೆಲ್ತುಮ್‌ನಲ್ಲಿ ಕಲ್ಲಿನ ಕ್ವಾರಿ ಕುಸಿದ ಪರಿಣಾಮ 15 … Continued

ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ … Continued

ವೀಡಿಯೊ..| 27 ಮಂದಿ ಮೃತಪಟ್ಟ ರಾಜ​ಕೋಟ್​ ಗೇಮ್​ ಝೋನ್​ ದುರಂತ ; ವೆಲ್ಡಿಂಗ್‌ ಕಿಡಿಗಳಿಂದ ಬೆಂಕಿ ಹೊತ್ತಿಕೊಂಡಿದ್ದನ್ನು ತೋರಿಸಿದ ವೀಡಿಯೊ..

ಎರಡು ದಿನಗಳ ಹಿಂದೆ ಗುಜರಾತಿನ ರಾಜ್‌ಕೋಟದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನ ಗೇಮ್ ಝೋನ್‌ನಲ್ಲಿ 27 ಜನರು ಸಾವಿಗೆ ಕಾರಣವಾದ ಬೆಂಕಿ ಅವಘಡವು ವೆಲ್ಡಿಂಗ್ ಯಂತ್ರದ ಕಿಡಿಗಳಿಂದ ಸಂಭವಿಸಿದೆ ಎಂದು ವರದಿಯಾಗಿದೆ. ಅದು ಅಮ್ಯೂಸ್‌ಮೆಂಟ್ ಪಾರ್ಕ್‌ನ ಗೇಮ್ ಝೋನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ದಹನಕಾರಿ ವಸ್ತುಗಳ “ರಾಶಿ” ಮೇಲೆ ಬೆಂಕಿ ಕಿಡಿ ಬಿದ್ದಿದೆ. ಮೇ 25ರ ಸಂಜೆ, ಬೇಸಿಗೆ ರಜೆಯ ವಿಹಾರವನ್ನು … Continued

ಕಾರು – ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು

ಹಾಸನ : ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ ಮತ್ತು ಕಾರು ಚಾಲಕ ರಾಕೇಶ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಮೃತಪಟ್ಟ ಆರು ಮಂದಿಯೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಮಂಗಳೂರಿನಲ್ಲಿ … Continued