ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ ; 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ ವಿಹಾರ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿದ್ದು, ನಂತರ 16 ಅಗ್ನಿಶಾಮಕ ದಳಗಳು … Continued

ರಾಣೇಬೆನ್ನೂರು: ತಿರುಪತಿಗೆ ಹೊರಟಿದ್ದ ಕಾರು ಅಪಘಾತ: ನಾಲ್ವರು ಸಾವು, 6 ಮಂದಿಗೆ ಗಾಯ

ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22) ಹಾಗೂ ಚೇತನಾ ಪ್ರಭುರಾಜ ಸಮಗಂಡಿ (7) ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ (28) ಎಂಬವರು ರಾಣೆಬೆನ್ನೂರು … Continued

ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಶನಿವಾರ (ಮೇ 18)ರಂದು ಸಿಡಿಲು ಬಡಿದು ಏಳು ಹಸುಗಳು ಸಾವಿಗೀಡಾಗಿವೆ ಎಂದು ವರದಿಯಾಗಿದೆ. ಶನಿವಾರ 4 ಗಂಟೆಗೆ ಸುಮಾರಿಗೆ ಸುರಿದ ಭಾರಿ ಮಳೆಯ ಸಮಯದಲ್ಲಿ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಸಿಡಿಲು ಬಡಿದು ಬೂರಿಯಾ ಕನ್ನಾ ನಾಯ್ಕ ಎಂಬವರಿಗೆ ಸೇರಿದ 2 … Continued

3 ವರ್ಷದ ಮಗುವನ್ನು ಕಾರಿನಲ್ಲೇ ಮರೆತು ಮದುವೆಗೆ ಹೋದ ದಂಪತಿ ; ಉಸಿರುಗಟ್ಟಿ ಪುಟ್ಟ ಬಾಲಕಿ ಸಾವು

ಕೋಟ : ತಂದೆ-ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿಯೊಬ್ಬಳು ಕಾರಿನಲ್ಲಿ ಉಸಿರುಗಟ್ಟಿ ಸಾವಿಗೀಡಾದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಆಕೆಯ ಪೋಷಕರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಲಾಕ್ ಮಾಡಿದ ಕಾರಿನಲ್ಲಿ ಮಗು ಉಸಿರುಗಟ್ಟಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಘಟನೆ ಬುಧವಾರ ಸಂಜೆ ಸಂಭವಿಸಿದೆ ಮತ್ತು ಮೃತ ಮಗುವನ್ನು ಗೋರ್ವಿಕಾ ನಗರ ಎಂದು … Continued

ಮುಂಬೈ : ಧೂಳಿನ ಬಿರುಗಾಳಿಗೆ 100 ಅಡಿ ಎತ್ತರದ ಬೃಹತ್‌ ಹೋರ್ಡಿಂಗ್ ಬಿದ್ದು 8 ಮಂದಿ ಸಾವು, 64 ಜನರಿಗೆ ಗಾಯ

ಮುಂಬೈ : ಇಂದು, ಸೋಮವಾರ ಸಂಜೆ ಮುಂಬೈನ ಘಾಟ್‌ಕೋಪರ್‌ನಲ್ಲಿ ಬಲವಾದ ಧೂಳಿನ ಬಿರುಗಾಳಿಗೆ ಸಿಲುಕಿ ಪೆಟ್ರೋಲ್‌ ಬಂಕ್‌ ಮೇಲೆ ಕುಸಿದುಬಿದ್ದ ಬೃಹತ್ ಜಾಹೀರಾತು ಫಲಕದ ಅವಶೇಷಗಳ ಅಡಿಯಲ್ಲಿ ಹತ್ತಾರು ಜನರು ಸಿಲುಕಿರುವ ಆತಂಕವಿದೆ. ಈ ಘಟನೆಯಲ್ಲಿ 8 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 04:30 ರ … Continued

ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

ಬೆಳಗಾವಿ : ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ … Continued

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ತಂದೆ- ಮಗಳು ಸಾವು

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬಂದಿದ್ದ ತಂದೆ-ಮಗಳು, ಭಾನುವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸಯ್ಯದ್‌ ಅಯೂಬ್‌ (35) ಹಾಗೂ ಫಾತಿಮಾ (10) ಎಂದು ಗುರುತಿಸಲಾಗಿದೆ.ಮಜರಗೊಲ್ಲಹಳ್ಳಿಯ ಇಮ್ತಿಯಾಜ್‌ ಎಂಬವರ ಮನೆಯಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ … Continued

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ಬುಧವಾರ (ಏಪ್ರಿಲ್‌ 25) ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಇವರು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ತಿಳಿದು ಬಂದಿದೆ. ಶಶಿಕುಮಾರ (23), ಲೋಕೇಶ (25) ಎಂಬ ಇಬ್ಬರು ಮೃತರನ್ನು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೂವರು … Continued

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued