ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಮಾಸ್ಕೋದಲ್ಲಿ ಭಯೋತ್ಪಾದಕರ ಅಟ್ಟಹಾಸ ; ಸಂಗೀತ ಕಛೇರಿ ಸಭಾಂಗಣದಲ್ಲಿ ದಾಳಿ : 60 ಜನರು ಸಾವು, 145 ಜನರಿಗೆ ಗಾಯ

ಮಾಸ್ಕೊ: ಉಗ್ರರ ದಾಳಿಗೆ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ರಕ್ತದ ಕೋಡಿ ಹರಿದಿದೆ. ಮಾಸ್ಕೋದ ಅತೀ ದೊಡ್ಡ ಒಳಾಂಗಣ ಸಭಾಂಗಣವಾದ ಕ್ರಾಕಸ್ ಸಿಟಿ ಹಾಲ್‌ಗೆ (Crocus City Hall) ನುಗ್ಗಿದ ಶಸ್ತ್ರಸಜ್ಜಿತ ಉಗ್ರರು ನಡೆಸಿದ ಗುಂಡಿನ ದಾಳಿಯಿಂದ 60 ಜನ ಮೃತಪಟ್ಟಿದ್ದಾರೆ ಹಾಗೂ 145 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾ ಹೇಳಿದೆ. ಐದು ಮಕ್ಕಳು ಸೇರಿದಂತೆ 115 … Continued

ವೀಡಿಯೊ…| ತಂದೆಯ ಕೈಯಿಂದ ಜಾರಿ ಮೂರನೇ ಮಹಡಿಯಿಂದ ಬಿದ್ದು ಮಗು ಸಾವು

ಛತ್ತೀಸ್‌ಗಢ : ಶಾಪಿಂಗ್ ಮಾಲ್‌ನ ಮೂರನೇ ಮಹಡಿಯಲ್ಲಿ ಎಸ್ಕಲೇಟರ್‌​​​​​ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದ ಹೃದಯ ವಿದ್ರಾವಕ ಘಟನೆ ಮಂಗಳವಾರ ಛತ್ತೀಸ್‌ಗಢದ ರಾಜಧಾನಿ ರಾಯ್ಪುರದ ದೇವೇಂದ್ರ ನಗರದ ಮಾಲ್‌ನಲ್ಲಿ ನಡೆದಿದೆ. ಸುಮಾರು 40 ಅಡಿಗಳಷ್ಟು ಆಳಕ್ಕೆ ಮಗು ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ … Continued

ಇಸ್ರೇಲ್‌ ದಾಳಿಯಲ್ಲಿ ಕೊಲ್ಲಲ್ಪಟ್ಟ ಹಮಾಸ್ ಉಪ ಸೇನಾ ನಾಯಕ : ವರದಿ

ಗಾಜಾದಲ್ಲಿ ಹಮಾಸ್‌ನ ಮಿಲಿಟರಿ ವಿಭಾಗದ ಉಪ ಕಮಾಂಡರ್ ಮತ್ತು ದಕ್ಷಿಣ ಇಸ್ರೇಲ್‌ನ ಅಕ್ಟೋಬರ್ 7 ರ ದಾಳಿಯ ಮಾಸ್ಟರ್‌ಮೈಂಡ್ ಆಗಿರುವ ಮಾರ್ವಾನ್ ಇಸ್ಸಾ ಒಂದು ವಾರದ ಹಿಂದೆ ಇಸ್ರೇಲಿ ವೈಮಾನಿಕ ದಾಳಿಯ ನಂತರ ಮೃತಪಟ್ಟಿದ್ದಾರೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಹಮಾಸ್‌ನ ಅತ್ಯುನ್ನತ ಶ್ರೇಣಿಯ ಅಧಿಕಾರಿಗಳಲ್ಲಿ ಒಬ್ಬರಾದ ಮಾರ್ವಾನ್ ಇಸ್ಸಾ ಮಾರ್ಚ್ 11 ರಂದು … Continued

ಸಿದ್ದಾಪುರ : ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ(ಕೆಎಫ್‌ಡಿ)ಗೆ ಒಂದೇ ದಿನ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಕಲ್ಲೂರು ಗ್ರಾಮದ 65 ವರ್ಷದ ವೃದ್ಧ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗನ ಕಾಯಿಲೆಯಿಂದ … Continued

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ(KFD)ಗೆ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಶಿರಸಿ ತಾಲೂಕಿನ 68 ವರ್ಷದ ವ್ಯಕ್ತಿಯೊಬ್ಬರು ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದೆ. ಶಿರಸಿ ತಾಲೂಕಿನ ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಫೆ.22ರಂದು‌ … Continued

ಬಾಂಗ್ಲಾದೇಶ : ಬಹುಮಹಡಿ ಕಟ್ಟದಲ್ಲಿ ಅಗ್ನಿ ಅನಾಹುತ ; 43 ಮಂದಿ ಸಾವು, ಅನೇಕರಿಗೆ ಗಾಯ

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಗುರುವಾರ ತಡರಾತ್ರಿ ಏಳು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಕನಿಷ್ಠ 43 ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. “ಇದುವರೆಗೆ 43 ಜನರು ಬೆಂಕಿ ಅವಘಡದಿಂದ ಸಾವಿಗೀಡಾಗಿದ್ದಾರೆ” ಎಂದು ಬಾಂಗ್ಲಾದೇಶದ ಆರೋಗ್ಯ ಸಚಿವ ಸಮಂತಾ ಲಾಲ ಸೇನ್ ಅವರು ಢಾಕಾ ವೈದ್ಯಕೀಯ ಕಾಲೇಜು … Continued

ಧಾರವಾಡ : ಅಳು ನಿಲ್ಲಿಸದೆ ನಿದ್ದೆ ಹಾಳು ಮಾಡಿತೆಂದು 1 ವರ್ಷದ ಮಗುವನ್ನು ಗೋಡೆಗೆ ಎಸೆದು ಸಾಯಿಸಿದ ತಂದೆ…!

ಧಾರವಾಡ: ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ ಎಂಬಾತ ಕುಡಿತದ ದಾಸನಾಗಿದ್ದು, ಈ ಕಾರಣಕ್ಕೆ ನಿತ್ಯವೂ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈಗ … Continued

ಜಮ್ತಾರಾದಲ್ಲಿ ರೈಲಿಗೆ ಸಿಲುಕಿ 12 ಮಂದಿ ಸಾವು

ರಾಂಚಿ : ಜಾರ್ಖಂಡದ ಜಮ್ತಾರಾ ಬಳಿ ಬುಧವಾರ (ಫೆಬ್ರವರಿ 28) ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಹಾಗೂಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಮ್ತಾರಾ-ಕರ್ಮತಾಂಡ್‌ನ ಕಲ್ಜಾರಿಯಾದ ಸಮೀಪದಲ್ಲಿ ಜನರಿಗೆ ರೈಲು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಜನರಿಗೆ ರೈಲ್ವೇ ಆಡಳಿತ, ರೈಲ್ವೇ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸೇರಿದಂತೆ ತುರ್ತು … Continued

ಯರಗಟ್ಟಿ :ಕಾರುಗಳ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ: ಸ್ವಿಫ್ಟ್‌ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಶುಕ್ರವಾರ ನಡೆದಿದ್ದು, ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ(8), ಗೋಪಾಲ ನಾಯಕ(45) ಹಾಗೂ ಧಾರವಾಡ ಮೂಲದ ಅನ್ನಪೂರ್ಣ(53) ಎಂಬವರು ಸ್ಥಳದಲ್ಲೇ … Continued