ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಿಡ್ಡಿಯ 65 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇಾವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಮಹಿಳೆಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆಯಾಗಿ ಅವರನ್ನು ಕರೆದುಕೊಂಡು … Continued

ರಾಯಚೂರು : ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ತಾಲೂಕಿನ ಮಿಟ್ಟಿ ವಲ್ಕಾಪುರ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಗರದ ಇಂದಿರಾ ನಗರದ ನಿವಾಸಿಗಳಾದ ರಾಘವೇಂದ್ರ (28), ಪರಶುರಾಮ (30), ಗೋವಿಂದ (28) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಂತ್ರಾಲಯದಿಂದ ರಾಯಚೂರಿಗೆ … Continued

ಪಾಕಿಸ್ತಾನದ ಚುನಾವಣೆ : ಮತದಾನಕ್ಕೆ ಒಂದು ದಿನ ಮೊದಲು ಅಭ್ಯರ್ಥಿಗಳ ಚುನಾವಣಾ ಕಚೇರಿ ಬಳಿ ಸ್ಫೋಟ ; 22 ಮಂದಿ ಸಾವು

ಪಾಕಿಸ್ತಾನದ ನೈಋತ್ಯ ಪ್ರಾಂತ್ಯದ ಬಲೂಚಿಸ್ತಾನ್‌ನಲ್ಲಿ ಚುನಾವಣಾ ಅಭ್ಯರ್ಥಿಗಳ ಕಚೇರಿಯ ಬಳಿ ಎರಡು ಸ್ಫೋಟಗಳು ಸಂಭವಿಸಿದ್ದು, 22 ಜನರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮತ್ತು ಗುರುವಾರದ ಚುನಾವಣೆಯ ಮುನ್ನಾದಿನ ಈ ಸ್ಫೋಟ ಸಂಭವಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ದಾಳಿಗಳು ಮತ್ತು ಆರ್ಥಿಕ ಬಿಕ್ಕಟ್ಟು ಮತ್ತು ಪರಮಾಣು-ಶಸ್ತ್ರಸಜ್ಜಿತ ದೇಶವನ್ನು ಬೆದರಿಸುವ ಇತರ ಸಮಸ್ಯೆಗಳ … Continued

ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಸಾವು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೆ.ಆ‌ರ್.ಪೇಟೆ ನಿವಾಸಿಗಳಾದ ಅನಿಕೇತನ(30), ಪವನ್‌ ಶೆಟ್ಟಿ(32) ಹಾಗೂ ಚಿರಂಜೀವಿ (32) ಘಟನೆಯಲ್ಲಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿರುವ ಸಾಗರ ಎಂಬ … Continued

ಉಜಿರೆ : ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ನುಗ್ಗಿದ ಲಾರಿ ; ಇಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರು ಒಬ್ಬರು ಪುರುಷನಾದರೆ ಮತ್ತೊಬ್ಬರು ಮಹಿಳೆಯಾಗಿದ್ದಾರೆ. ಉಜಿರೆ ಸಮೀಪದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52), ಕುಂಟಿನಿ ನಿವಾಸಿ ಮೋಹಿನಿ (56) ಮೃತಪಟ್ಟವರು. ಉಜಿರೆ ಸಮೀಪದ ಗಾಂಧಿ ನಗರ … Continued

ಜೀಪ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಗರ್ಲಗುಂಜಿ ರಸ್ತೆಯಲ್ಲಿ ಸಣ್ಣ ಹೊಸೂರ ಬಳಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬೇಕವಾಡ ಗ್ರಾಮದ ರಾಮಲಿಂಗ ಮುತಗೇಕರ ಮತ್ತು ಹನುಮಂತ ಪಾಟೀಲ (19) ಎಂದು ಗುರುತಿಸಲಾಗಿದೆ. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಇವರು ತೆರಳುತ್ತಿದ್ದರು … Continued

ವೀಡಿಯೊ…| ಭೀಕರ ಸರಣಿ ಅಪಘಾತದಲ್ಲಿ ಒಂದಕ್ಕೊಂದು ಗುದ್ದಿಕೊಂಡ ನಾಲ್ಕು ವಾಹನಗಳು ; ನಾಲ್ವರು ಸಾವು, 8 ಮಂದಿಗೆ ಗಾಯ

ಧರ್ಮಪುರಿ : ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೊಪ್ಪೂರ್ ಘಾಟ್ ರಸ್ತೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಸಿಸಿಟಿವಿ ವೀಡಿಯೊದಲ್ಲಿ ಟ್ರಕ್‌ ಸೇರಿದಂತೆ ನಾಲ್ಕು ವಾಹನಗಳು ಒಂದಕ್ಕೊಂದು ಗುದ್ದಿಕೊಂಡ ನಂತರ ಈ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದಿರುವುದನ್ನು … Continued

ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಸಾಣಿಕೆರೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಇಂದು, ಶುಕ್ರವಾರ ನಸುಕಿನ ಜಾವ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲಿ ಬೆಂಗಳೂರಿನ ಕಡೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ … Continued

ಯಶ್‌ ನೋಡಲು ಬಂದಾಗ ಬೈಕ್‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯಶ್ ಅಭಿಮಾನಿ ಸಾವು

ಗದಗ : ನಟ ಯಶ್ ಜನ್ಮದಿನಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ನಂತರ ಮೃತ ಕುಟುಂಬದವರಿಗೆ ಸಾಂತ್ವನ ಹೇಳಲು ಬಂದಿದ್ದ ನಟ ಯಶ್‌ ಅವರ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಸಾವಿಗೀಡಾಗಿದ್ದಾನೆ. ವಿದ್ಯುತ್‌ ಸ್ಪರ್ಶದ ಘಟನೆಯಲ್ಲಿ ಗಾಯಗೊಂಡಿದ್ದವರ ಆರೋಗ್ಯ ವಿಚಾರಿಸಲೆಂದು ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ … Continued

ಕಾರು-ಸ್ಕೂಟರ್ ಮುಖಾಮುಖಿ ಡಿಕ್ಕಿ : ಮೂವರು ಸಾವು

ತುಮಕೂರು: ಕಾರು ಹಾಗೂ ಸ್ಕೂಟರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಶನಿವಾರ ನಡೆದಿದೆ. ಮೃತರನ್ನು ತಿಪಟೂರು ಮೂಲದ ಅನಿಲಕುಮಾರ (21), ನರಸಿಂಹ ಮೂರ್ತಿ (21), ಕಾವ್ಯ (19) ಎಂದು ಗುರುತಿಸಲಾಗಿದೆ. ಮೂವರು ಆದಿಚುಂಚನಗಿರಿ ಮಠಕ್ಕೆ ತೆರಳಿ ಸ್ಕೂಟರ್‌ನಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ ಜೋಡಗಟ್ಟೆ … Continued