ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-9 ತಿಂಗಳ ಮಗು ಸಾವು

ಬೆಂಗಳೂರು: ಬೆಂಗಳೂರಿನ ಹೋಪ್ ಫಾರ್ಮ್ ಬಳಿಯ ಪಾದಾಚಾರಿ ಮಾರ್ಗದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ 23 ವರ್ಷದ ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗಳು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಎಕೆಜಿ ಕಾಲೋನಿ ನಿವಾಸಿಗಳಾದ ಸೌಂದರ್ಯ ಮತ್ತು ಸುವೀಕ್ಷಾ ಎಂದು ಗುರುತಿಸಲಾಗಿದೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ರಾಸಾಯನಿಕ ಗೋದಾಮಿನಲ್ಲಿ ಬೆಂಕಿ: ಬಹುಮಹಡಿ ಕಟ್ಟಡಕ್ಕೆ ವ್ಯಾಪಿಸಿ 9 ಸಾವು

ಹೈದರಾಬಾದ್‌ : ಹೈದರಾಬಾದ್ ನಾಂಪಲ್ಲಿ ವಸತಿ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ದುರಂತದ ನಂತರ ಒಟ್ಟು 16 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ರಕ್ಷಣಾ ಮತ್ತು ತಂಪಾಗಿಸುವ ಕಾರ್ಯಾಚರಣೆ ನಡೆಯುತ್ತಿದೆ. ಮೇಲಿನ ಮಹಡಿಗಳಲ್ಲಿ ವಾಸಿಸುವ … Continued

ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಭಾರತೀಯ ಕ್ರಿಕೆಟ್ ದಿಗ್ಗಜ ಬಿಶನ್ ಸಿಂಗ್ ಬೇಡಿ ನಿಧನ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಮಾಂತ್ರಿಕ ಎಡಗೈ ಸ್ಪಿನ್ನರ್‌ ಬಿಶೆನ್ ಸಿಂಗ್ ಬೇಡಿ (77) ಅವರು ಇಂದು, ಸೋಮವಾರ ನಿಧನರಾಗಿದ್ದಾರೆ. ಬಿಶನ್ ಸಿಂಗ್ ಬೇಡಿ 22 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವವನ್ನೂ ವಹಿಸಿದ್ದರು. ಬೇಡಿ ಅವರು 1967 ರಿಂದ 1979 ರವರೆಗೆ ಭಾರತದ ಪರವಾಗಿ ಆಡಿದ್ದರು. ಅವರು 67 ಟೆಸ್ಟ್‌ಗಳಲ್ಲಿ 266 … Continued

2 ಪಟಾಕಿ ಘಟಕಗಳಲ್ಲಿ ಸ್ಫೋಟ : 9 ಮಹಿಳೆಯರು ಸೇರಿ 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಂಗಳವಾರ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ … Continued

ಇಸ್ರೇಲಿನಲ್ಲಿ ಮಕ್ಕಳೆದುರೇ ನನ್ನ ಸಹೋದರಿ, ಆಕೆಯ ಗಂಡನನ್ನು ಹಮಾಸ್‌ ದಾಳಿಕೋರರು ಕೊಂದಿದ್ದಾರೆ ಎಂದು ಹೇಳಿಕೊಂಡ ಭಾರತದ ಟಿವಿ ನಟಿ

ಕಳೆದ ವಾರ ಹಮಾಸ್‌ನಿಂದ ‘ಆಘಾತಕಾರಿʼ ದಾಳಿಯ ನಂತರ ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲಿ ಆಕ್ರಮಣವು ತೀವ್ರಗೊಂಡಿದೆ. ಯುದ್ಧವು ನಾಲ್ಕನೇ ದಿನಕ್ಕೆ ಪ್ರವೇಶಿಸಿದ್ದು, 3,000 ಕ್ಕೂ ಹೆಚ್ಚು ಜನರು ಸತ್ತಿದ್ದಾರೆ. ಗಡಿಯ ಎರಡೂ ಕಡೆಯ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಹಮಾಸ್‌ನಿಂದ ದಾಳಿಗಳ ಸುರಿಮಳೆ ಮತ್ತು ಗಾಜಾವನ್ನು “ಸಂಪೂರ್ಣ ಹಿಡಿತ” ತೆಗೆದುಕೊಳ್ಳಲು ಇಸ್ರೇಲ್‌ನ ಸಂಪೂರ್ಣ ಕಾರ್ಯಾಚರಣೆಯ … Continued

ವೀಡಿಯೊ..| ಔಷಧಿ ಖರೀದಿಗೆಂದು ಔಷಧದ ಅಂಗಡಿಗೆ ಬಂದಾಗಲೇ ಹೃದಯಘಾತದಿಂದ ಸಾವು

ಮೈಸೂರು: ಈ ಹೃದಯ ಯಾವ ಕ್ಷಣದಲ್ಲಿ ಆಘಾತಕ್ಕೆ (Heart Attack) ಒಳಗಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಕುಳಿತಲ್ಲೇ ಕುಸಿಯುವುದು, ಮಾತನಾಡುತ್ತಿರುವಾಗಲೇ ಸ್ತಬ್ದವಾಗುವುದು, ನೃತ್ಯ ಮಾಡುತ್ತಲೇ ಬೀಳುವುದು.. ಹೀಗೆ ಸಾವಿನ ಹತ್ತಾರು ಸನ್ನಿವೇಶಗಳು ಕಂಡುಬರುತ್ತಿವೆ. ಮೈಸೂರಿನಲ್ಲಿ ಔಷಧದ ಅಂಗಡಿಯೊಂದಕ್ಕೆ (Medical Stores) ಔಷಧ ತೆಗೆದುಕೊಳ್ಳಲೆಂದು ಬಂದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆಯೊಂದು ವರದಿಯಾಗಿದೆ. ಘಟನೆಯ ದೃಶ್ಯಗಳು … Continued

ಸಿಕ್ಕಿಂನಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ : 14 ಜನರು ಸಾವು, 23ಯೋಧರ ಸಹಿತ 102 ಮಂದಿ ನಾಪತ್ತೆ

ಗ್ಯಾಂಗ್ಟಕ್‌: ಸಿಕ್ಕಿಂನಲ್ಲಿ ಬುಧವಾರ ಸಂಭವಿಸಿದ ಹಠಾತ್ ಪ್ರವಾಹದ ನಂತರ 14 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಸೇನಾ ಸಿಬ್ಬಂದಿ ಸೇರಿದಂತೆ 120 ಜನರು ನಾಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಲ್ಹೋನಕ್ ಸರೋವರದ ಮೇಲೆ ಸಂಭವಿಸಿದ ಮೇಘಸ್ಫೋಟವು ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು, ಇದು ಅಂತಿಮವಾಗಿ ಮಾರಣಾಂತಿಕ ಪ್ರಹಾವಾಗಿ ಮಾರ್ಪಟ್ಟಿತು. ಸಿಕ್ಕಿಂನಲ್ಲಿ ಮಂಗಳವಾರ ತಡರಾತ್ರಿ … Continued

ಊಟಿ ಬಳಿ ಕಂದಕಕ್ಕೆ ಬಸ್‌ ಉರುಳಿ ಬಿದ್ದು 8 ಜನರು ಸಾವು

ಉದಕಮಂಡಲಂ : ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ 55 ಪ್ರವಾಸಿಗರಿದ್ದ ಬಸ್ ಕಣಿವೆಗೆ ಉರುಳಿ ಬಿದ್ದು 8 ಪ್ರವಾಸಿಗರು ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ನೀಲಗಿರಿ ಬೆಟ್ಟದ ವ್ಯಾಪ್ತಿಯಲ್ಲಿ ಬರುವ ಕೂನೂರು ಬಳಿಯ ಊಟಿ-ಮಟ್ಟುಪಾಳ್ಯಂ ರಸ್ತೆಯ ಘಾಟ್‌ನಲ್ಲಿ ಹೆಡ್‌ಪಿನ್ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು … Continued

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ 49 ನೇ ವಯಸ್ಸಿನಲ್ಲಿ ನಿಧನ

ಜಿಂಬಾಬ್ವೆಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ( 49 ವರ್ಷ) ಭಾನುವಾರ, ಸೆಪ್ಟೆಂಬರ್ 3 ರಂದು ನಿಧನರಾಗಿದ್ದಾರೆ. ಅವರು ಕೊಲೊನ್ ಮತ್ತು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಈ ಸುದ್ದಿಯನ್ನು ಹೀತ್ ಸ್ಟ್ರೀಕ್ ಪತ್ನಿ ನಡಿನ್ ಸ್ಟ್ರೀಕ್ ತಮ್ಮ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಸ್ಟ್ರೀಕ್ ನಿಧನರಾದರು ಎಂಬ ವದಂತಿಗಳು … Continued