ಶಿರಸಿ: ಮುರೇಗಾರ ಜಲಪಾತದಲ್ಲಿ ಮುಳುಗಿ ವ್ಯಕ್ತಿ ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮುರೇಗಾರ ಜಲಪಾತದಲ್ಲಿ ವ್ಯಕ್ತಿಯೊಬ್ಬ ಮುಳುಗಿ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ತುಮಕೂರು ಮೂಲದ ನವೀನ ಕುಮಾರ್ (35) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಕೆಲವರೊಂದಿಗೆ ಪ್ರವಾಸಕ್ಕೆ ಬಂದಿದ್ದ ನವೀನ್ ಕುಮಾರ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ತುಮಕೂರು ನಗರದ ಆರೆಸ್ಸೆಸ್‌ ಜವಾಬ್ದಾರಿ ಇತ್ತು ಎನ್ನಲಾಗಿದೆ. … Continued

ಉಕ್ರೇನ್‌ನಲ್ಲಿ ಸಾವಿಗೀಡಾದ ನವೀನ್ ಮನೆಗೆ ಸಿಎಂ ಭೇಟಿ, ಸಾಂತ್ವನ: ಪರಿಹಾರ ಚೆಕ್‌ ವಿತರಣೆ

ಹಾವೇರಿ: ಯುದ್ಧಪೀಡಿತ ಉಕ್ರೇನ್​ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್​ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನವೀನಗೆ ಸಲ್ಲಿಸಿದ ಬೊಮ್ಮಾಯಿ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ … Continued

ಚಿನ್ನಾಭರಣ ಅಂಗಡಿಗೆ ಕದಿಯಲು ಬಂದ ಕಳ್ಳರಿಂದ ಫೈರಿಂಗ್​; ಯುವಕ ಸಾವು

ಮೈಸೂರು: ಹಾಡಹಗಲೇ ಚಿನ್ನಾಭರಣದ ಅಂಗಡಿಗೆ ನುಗ್ಗಿದ ಕಳ್ಳರು, ಆಭರಣಗಳನ್ನು ಕದಿಯಲು ಯತ್ನಿಸಿದ್ದಾರೆ ಹಾಗೂ ಇದಕ್ಕೆ ಪ್ರತಿರೋಧ ಒಡ್ಡಿದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿದ್ದಾರೆ. ನಾಲ್ಕು ಜನರ ತಂಡ ಮೈಸೂರಿನ ವಿದ್ಯಾರಣ್ಯಪುರಂ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಚಿನ್ನಾಭರಣ ಅಂಗಡಿಗೆ ಅಭರಣ ಕದಿಯಲು ಆಗಮಿಸಿದೆ. ಕಳ್ಳತನಕ್ಕೆ ಬಂದಿರುವ ಬಗ್ಗೆ ಸುಳಿವು ಗೊತ್ತಾದ ಕೂಡಲೇ ಅಂಗಡಿಯಲ್ಲಿದ್ದ ಮಾಲೀಕ … Continued

ಧಾರವಾಡ: ಮಾಜಿ ಪೈಲ್ವಾನರಿಗೆ ಶ್ರದ್ಧಾಂಜಲಿ

ಧಾರವಾಡ : ರಾಜ್ಯದ ಹಾಗೂ ಜಿಲ್ಲೆಯ ಅನೇಕ ಮಾಜಿ ಪೈಲ್ವಾನರು ಕೋವಿಡ್ ಮಹಾಮಾರಿಯಿಂದ ಮೃತರಾಗಿದ್ದು, ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವರೆಲ್ಲರ ಸಾಧನೆ ಹಾಗೂ ಸೇವೆಯನ್ನು ಈ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಮೃತ್ ದೇಸಾಯಿ ಮಾತನಾಡಿ ಕಳೆದ ವರ್ಷ ಕುಸ್ತಿ ಹಬ್ಬಕ್ಕೆ ಅವಿರತ ಸೇವೆ ಮಾಡಿದ ಹಿರಿಯ ಪೈಲ್ವಾರನ್ನು ನೆನಪಿಸಿಕೊಂಡರು. ಮೃತರಾದ … Continued

ವಿವಿಧ ತೆರಿಗೆ ಅನುಸರಣೆ ಗಡುವು ವಿಸ್ತರಿಸಿ ಆದೇಶ: ಕೋವಿಡ್ ಚಿಕಿತ್ಸೆಯಲ್ಲಿ ನೌಕರರಿಗೆ ತೆರಿಗೆ ವಿನಾಯ್ತಿ ಘೋಷಣೆ

ನವದೆಹಲಿ: ವಿವಿಧ ಆದಾಯ ತೆರಿಗೆ ಪವತಿ ಅನುಸರಣೆಗಳ ಗಡುವನ್ನು ವಿಸ್ತರಿಸಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶಿಸಿದೆ. ಕೋವಿಡ್ 19 ಚಿಕಿತ್ಸೆಗಾಗಿ ಉದ್ಯೋಗದಾತರು ಉದ್ಯೋಗಿಗಳಿಗೆ ನೀಡಿದ ಮೊತ್ತಕ್ಕೆ ತೆರಿಗೆಯಿಂದ ವಿನಾಯಿತಿ ನೀಡಿದೆ. ಅಲ್ಲದೆ ಕೋವಿಡ್ ನಿಂದಾಗಿ ನೌಕರರು ಮೃತಪಟ್ಟಲ್ಲಿ ಕುಟುಂಬ ಸದಸ್ಯರು ಉದ್ಯೋಗದಾತರಿಂದ ಪಡೆದ ಪರಿಹಾರ ಪಾವತಿಗಳನ್ನು 2019-20ರ ಹಣಕಾಸು ಮತ್ತು ನಂತರದ ವರ್ಷಗಳಲ್ಲಿ ಆದಾಯ ತೆರಿಗೆಯಿಂದ … Continued

‘ಸಂಘಕಾರ್ಯ’ವನ್ನು ‘ಜೀವನಕಾರ್ಯ’ವನ್ನಾಗಿ ಸ್ವೀಕರಿಸಿದ್ದ ಸಿದ್ದಣ್ಣಗೌಡ ಗಡಿಗುಡಾಳರು

ಕರ್ನಾಟಕ ಉತ್ತರ ಪ್ರಾಂತದ ಹಿಂದಿನ ಪ್ರಾಂತ ಸಂಘಚಾಲಕರಾಗಿದ್ದ ಸಿದ್ದಣ್ಣಗೌಡ ಗಡಿಗುಡಾಳರು ಏಪ್ರಿಲ್‌ ೧ರಂದು ಗುರುವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ೨ಕ್ಕೆ ಬಳ್ಳಾರಿ ಜಿಲ್ಲೆಯ ಅವರ ಸ್ವಗ್ರಾಮ ಗಡಿಗುಡಾಳದಲ್ಲಿ ನಡೆಯಿತು. ಮಾ.ಶ್ರೀ ಸಿದ್ದಣ್ಣಗೌಡ ಗಡಿಗುಡಾಳ್ ರವರು ಇಂದು(1.4.2021) ಬೆಳಗ್ಗೆ 6.15 ಕ್ಕೆ ಗಡಿಗುಡಾಳದ ತಮ್ಮ ಸ್ವಗೃಹದಲ್ಲಿ ದೈವಾಧೀನರಾದ ಸುದ್ದಿ ತಲುಪಿತು. ಸಹಜವಾಗಿ ಮನಸ್ಸಿನಲ್ಲಿ … Continued

ನೀನಾಸಂ ಕೆ.ವಿ.ಸುಬ್ಬಣ್ಣ ಪತ್ನಿ ಶೈಲಜಾ ನಿಧನ

ಸಾಗರ: ಸಾಗರ ತಾಲೂಕಿನ ಹೆಗ್ಗೋಡು ನೀನಾಸಂ ಸಂಸ್ಥೆಯ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಪತ್ನಿ ಶೈಲಜಾ (೮೫) ಭಾನುವಾರ ಮುಂಡಿಗೇಸರ ಗ್ರಾಮದ ನಿವಾಸದಲ್ಲಿ ನಿಧನರಾದರು. ಮೃತರು ಪುತ್ರ ಕೆ.ವಿ. ಅಕ್ಷರ ಹಾಗೂ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ. ಕೆ.ವಿ.ಸುಬ್ಬಣ್ಣ ನೀನಾಸಂ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾಗ ಮನೆ ಹಾಗೂ ತೋಟದ ಜವಾಬ್ದಾರಿಯನ್ನು ಶೈಲಜಾ ಅವರೇ ನೋಡಿಕೊಳ್ಳುತ್ತಿದ್ದರು. ಅಲ್ಲದೇ ನೀನಾಸಂ ಸಂಸ್ಥೆಯ ಬೆಳವಣಿಗೆಯಲ್ಲಿ … Continued

ಮೋದಿ ಭೇಟಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಾಲ್ವರು ಸಾವು

ನವ ದೆಹಲಿ: ಇಸ್ಲಾಮಿಕ್ ಮೂಲಭೂತವಾದಿ ಗುಂಪಿನ ಹೆಫಜತ್-ಎ-ಇಸ್ಲಾಂನ ಕಾರ್ಯಕರ್ತರು ಮತ್ತು ಎಡ ಪಕ್ಷಗಳ ಸಂಯೋಜಿತ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಬಾಂಗ್ಲಾದೇಶ ಭೇಟಿ ವಿರೊಧಿಸಿ ನಡೆದ ಪ್ರತಿಭಟನೆ ಪೊಲೀಸರೊಂದಿಗೆ ಘರ್ಷಣೆಗೆ ತಿರುಗಿದಾಗ ಚಿತ್ತಗಾಂಗ್‌ನಲ್ಲಿ ಕನಿಷ್ಠ ನಾಲ್ಕು ಜನರು ಮೃತಪಟ್ಟಿದ್ದಾರೆ. ಮೋದಿಯವರ ನಿಗದಿತ ಭೇಟಿಯ ವಿರುದ್ಧ ಈಗಾಗಲೇ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳು, ಬಾಂಗ್ಲಾದೇಶದ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ … Continued

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಪೊಲೀಸರಿಂದ ಆತ್ಮಹತ್ಯೆ ಶಂಕೆ

ನವ ದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟಿದ್ದಾರೆ. ರಾಮ್ ಸ್ವರೂಪ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವರ ಮರಣದ ಹಿನ್ನೆಲೆಯಲ್ಲಿ … Continued

ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued