ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ….ತಪ್ಪಿಸಲು ಹೋದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿ….!

ಹೈದರಾಬಾದ್: ಕ್ರಿಸ್‌ಮಸ್ ಹಬ್ಬದ ಮುನ್ನಾದಿನದಂದು ಹೈದರಾಬಾದಿನ ನಲ್ಲಕುಂಟ ಪ್ರದೇಶದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ನಡೆದಿದೆ. ಪತ್ನಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬ, ತನ್ನಿಬ್ಬರು ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ, ತಾಯಿಯನ್ನು ಉಳಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ತ್ರಿವೇಣಿ … Continued

ಹಿಂದೂಸ್ತಾನಿ ಗಾಯಕ ಅಶೋಕ ಹುಗ್ಗಣ್ಣವರ ನಿಧನ

ಹುಬ್ಬಳ್ಳಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ನಿವೃತ್ತ ಸಂಗೀತ ಪ್ರಾಧ್ಯಾಪಕರಾದ ಅಶೋಕ ಹುಗ್ಗಣ್ಣವರ (64) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೂಲತಃ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದವರಾದ ಅಶೋಕ ಹುಗ್ಗಣ್ಣವರ ಅವರು, ಹೊನ್ನಾವರದ  ಎಸ್.ಡಿ.ಎಂ. ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ 2021ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಅವರು ಹುಬ್ಬಳ್ಳಿಯಲ್ಲಿ … Continued

ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued

ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಸಾವು : ಬಾಂಗ್ಲಾದಲ್ಲಿ ಹಿಂಸಾಚಾರ, ಅವಾಮಿ ಲೀಗ್ ಕಚೇರಿ, ಪತ್ರಿಕಾ ಕಚೇರಿಗಳಿಗೆ ಬೆಂಕಿ

ಢಾಕಾ: ಜುಲೈ ದಂಗೆಯ ಪ್ರಮುಖ ಸಂಘಟಕ ಹಾಗೂ ‘ಇಂಕ್ವಿಲಾಬ್ ಮಂಚ’ದ ಸಂಚಾಲಕ ಶರೀಫ್ ಉಸ್ಮಾನ್ ಹಾದಿ ಅವರ ನಿಧನದ ಬೆನ್ನಲ್ಲೇ ಬಾಂಗ್ಲಾದೇಶದ ಢಾಕಾ ಮತ್ತು ಚತ್ತೋಗ್ರಾಮ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಡಿಸೆಂಬರ್ 12 ರಂದು ಢಾಕಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಶರೀಫ್ ಉಸ್ಮಾನ್ ಹಾದಿ ಅವರ ತಲೆಗೆ ಗುಂಡು ಹಾರಿಸಲಾಗಿತ್ತು. ಗಂಭೀರವಾಗಿ … Continued

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಶಿವರಾಜ ಪಾಟೀಲ ನಿಧನ

ಮುಂಬೈ : ಮಾಜಿ ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಶಿವರಾಜ ಪಾಟೀಲ್ ಚಾಕೂರ್ಕರ್ ಅವರು ಶುಕ್ರವಾರ (ಡಿಸೆಂಬರ್ 12, 2025) ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಐದು ದಶಕಗಳ ರಾಜಕೀಯ ವೃತ್ತಿಜೀವನದಲ್ಲಿ, ಶಿವರಾಜ ಪಾಟೀಲ ಅವರು ಲೋಕಸಭಾ ಸ್ಪೀಕರ್ ಮತ್ತು ಹಲವು ಸಚಿವಾಲಯಗಳು ಸೇರಿದಂತೆ … Continued

ಮದುವೆಯಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ್ದಕ್ಕೆ ಆಕ್ಷೇಪಿಸಿದ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಮೇಲೆ ಹಲ್ಲೆ ನಡೆಸಿ ಸಾಯಿಸಿದ ದುಷ್ಕರ್ಮಿಗಳು

ರೋಹ್ಟಕ್ (ಹರಿಯಾಣ) : ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದವರನ್ನು ಪ್ರಶ್ನಿಸಿದ್ದ 26 ವರ್ಷದ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಮತ್ತು ವೃತ್ತಿಪರ ಬಾಡಿಬಿಲ್ಡರ್ ಅವರ ಮೇಲೆ ಭೀಕರ ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ. ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಆಗಿದ್ದ ಮೃತ ರೋಹಿತ್ ಧನಕರ (26), ಹರಿಯಾಣದ ರೋಹ್ಟಕ್ ಜಿಲ್ಲೆಯ … Continued

ಕುಮಟಾ : ಕೆನರಾ ಕಾಲೇಜು ಸೊಸೈಟಿ ಉಪಾಧ್ಯಕ್ಷ ದಿನಕರ ಕಾಮತ ನಿಧನ

ಕುಮಟಾ : ಶಿಕ್ಷಣ ತಜ್ಞ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಉಪಾಧ್ಯಕ್ಷ ದಿನಕರ ಕಾಮತ (83)ಶನಿವಾರ ರಾತ್ರಿ ಹೃಧಯಾಘಾತದಿಂದ ನಿಧನರಾಗಿದ್ದಾರೆ. ಹೆಗಡೆಯ ಶಾಂತಿಕಾಂಭ ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ, ಮುಖ್ಯಾಧ್ಯಾಪಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ದಿನಕರ ಕಾಮತ್‌ ಅವರು … Continued

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಏಕಾಏಕಿ ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಮೃತಪಟ್ಟಿದ್ದವು. ಇಂದು ಶನಿವಾರ (ನವೆಂಬರ್‌ 15) ಒಂದೇ ದಿನ 20 ಕೃಷ್ಣ ಮೃಗಗಳು ಮತ್ತೆ … Continued

ವೀಡಿಯೊ..| ಹೆಲಿಕಾಪ್ಟರ್‌ ಪತನ, ಐವರು ಸಾವು ; ಹೆಲಿಕಾಪ್ಟರ್‌ ಕೆಳಗೆ ಬೀಳುವ ದೃಶ್ಯ ಸೆರೆ

ರಷ್ಯಾದ (Russia) ಡಾಗೆಸ್ತಾನ್ ಗಣರಾಜ್ಯದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ರಷ್ಯಾದ ಮಿಲಿಟರಿ ಕಾರ್ಖಾನೆಯ ನಾಲ್ವರು ಹಿರಿಯ ಕಾರ್ಯನಿರ್ವಾಹಕರು ಸೇರಿದಂತೆ ಕನಿಷ್ಠ ಐದು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಯುರೋಪಿಯನ್ ಯೂನಿಯನ್‌ನಿಂದ (EU) ನಿರ್ಬಂಧಕ್ಕೊಳಗಾದ ಡಾಗೆಸ್ತಾನ್‌ನ ಕಿಜ್ಲಿಯಾರ್ ಎಲೆಕ್ಟ್ರೋಮೆಕ್ಯಾನಿಕಲ್ ಪ್ಲಾಂಟ್‌ನ (Kizlyar Electromechanical Plant) ಉದ್ಯೋಗಿಗಳನ್ನು ಹೊತ್ತೊಯ್ಯುತ್ತಿದ್ದ ಕೆಎ-226 (Ka-226) ಹೆಲಿಕಾಪ್ಟರ್, ಕ್ಯಾಸ್ಪಿಯನ್ ಸಮುದ್ರದ (Caspian … Continued

ಪ್ರಯಾಣಿಕರ ರೈಲು-ಸರಕು ರೈಲು ಡಿಕ್ಕಿ ; 8 ಮಂದಿ ಸಾವು

ಬಿಲಾಸಪುರ: ಛತ್ತೀಸ್‌ಗಢದ ಬಿಲಾಸಪುರ ಜಿಲ್ಲೆಯ ಲಾಲ್‌ಖಡನ್ ಬಳಿ ಮಂಗಳವಾರ ಪ್ರಯಾಣಿಕರ ರೈಲು (68733) ಮತ್ತು ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಪ್ರಯಾಣಿಕ ರೈಲಿನ ಹಲವಾರು ಬೋಗಿಗಳು ಒಂದರ ಮೇಲೊಂದು ಹತ್ತಿ ಭೀಕರ ದೃಶ್ಯ ಸೃಷ್ಟಿಸಿದವು. ಘಟನೆ ನಡೆದ ತಕ್ಷಣ, ರೈಲ್ವೆ ಆಡಳಿತ ಮತ್ತು … Continued