ಅಭ್ಯಾಸದ ವೇಳೆ ಚೆಂಡು ಬಡಿದು ಆಸ್ಟ್ರೇಲಿಯಾದ ಕ್ರಿಕೆಟಿಗ ಸಾವು

 ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಕ್ರಿಕೆಟ್ ಅಭ್ಯಾಸದ ವೇಳೆ ಚೆಂಡು ಬಡಿದ ಪರಿಣಾಮ ಬೆನ್ ಆಸ್ಟಿನ್ (17) ಎಂಬ ಯುವ ಕ್ರಿಕೆಟಿಗ ಕುತ್ತಿಗೆಗೆ ಚೆಂಡು ಬಡಿದು ಮೃತಪಟ್ಟಿದ್ದಾರೆ. ಮಂಗಳವಾರ ಫೆರ್ನ್‌ಟ್ರೀ ಗಲ್ಲಿಯಲ್ಲಿ ಕ್ರಿಕೆಟ್ ನೆಟ್‌ನಲ್ಲಿ ಹೆಲ್ಮೆಟ್ ಧರಿಸಿ ನೆಕ್ ಗಾರ್ಡ್ ಇಲ್ಲದೆ ತರಬೇತಿ ಪಡೆಯುತ್ತಿದ್ದ “ವಾಂಗರ್” ಎಂದು ಕರೆಯಲ್ಪಡುವ 17 ವರ್ಷದ ಬೆನ್ ಆಸ್ಟಿನ್, ಎಸೆದ … Continued

ಹೈದರಾಬಾದ್-ಬೆಂಗಳೂರು ಬಸ್ಸಿನಲ್ಲಿ ಬೆಂಕಿ ; 19 ಜನರು ಸಾವು

ಕರ್ನೂಲ್ (ಆಂಧ್ರಪ್ರದೇಶ): ಶುಕ್ರವಾರ ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಐಷಾರಾಮಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು 19 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ 43 ಜನರಿದ್ದರು. ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಬಳಿ ಬಸ್ ಅಪಘಾತ ಸಂಭವಿಸಿದೆ. ಬಸ್ ಮಧ್ಯರಾತ್ರಿ ಸುಮಾರಿಗೆ ಹೈದರಾಬಾದಿನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು … Continued

ಹಾವೇರಿ | ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ; ಹೋರಿ ತಿವಿದು ಮೂವರು ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಹಾವೇರಿ ಜಿಲ್ಲೆಯ ವಿವಿಧೆಡೆ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಹಾಯ್ದು ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿಯ ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ ಕೋಡಿಹಳ್ಳಿ (75) ಎಂಬವರು ಮನೆಗೆ ಹೊರಟಿದ್ದ ವೇಳೆ … Continued

ಕಾರವಾರ : ಮೀನು ಚುಚ್ಚಿ ಗಾಯಗೊಂಡು ಮೀನುಗಾರ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ದಂಡೇಭಾಗ ಪ್ರದೇಶದ ಬಳಿ ಮೀನುಗಾರಿಕೆಗೆ ತೆರಳಿದ್ದ ವೇಳೆ 24 ವರ್ಷದ ಮೀನುಗಾರ ಹಾರುವ ತೊಳೆ ಕಾಂಡೆ ಮೀನು (Flying fish) ಚುಚ್ಚಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 14, ಮಂಗಳವಾರ ಅಕ್ಷಯ ಮಾಜಾಳೀಕರ ಎಂಬವರು ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದರು. … Continued

ಹಾವೇರಿ | ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ ; ಓರ್ವ ಸಾವು

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಎಂಬವರು ಮೃತಟ್ಟಿದ್ದಾರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. … Continued

ತುಮಕೂರು : ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು

ತುಮಕೂರು : ಜಿಲ್ಲೆಯ ಕುಣಿಗಲ್‌ನಲ್ಲಿರುವ ಮಾರ್ಕೊನಹಳ್ಳಿ ಡ್ಯಾಂ (Markonahalli Dam) ಹಿನ್ನೀರಿನಲ್ಲಿ 6 ಮಂದಿ ಕೊಚ್ಚಿ (Drowned) ಹೋಗಿದ್ದಾರೆ ಎಂದು ವರದಿಯಾಗಿದೆ. ಜಲಾಶಯದ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಒಂದೇ ಕುಟುಂಬದ ಏಳು ಸದಸ್ಯರು ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದು, ಅವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತುಮಕೂರು ನಗರದ ಬಿ.ಜಿ. ಪಾಳ್ಯದ … Continued

ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಐಪಿಎಸ್ ಅಧಿಕಾರಿ

ಚಂಡೀಗಢ: ಹರಿಯಾಣ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ ಪೂರಣ್‌ಕುಮಾರ ಅವರು ಮಂಗಳವಾರ (ಅಕ್ಟೋಬರ್ 7) ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಅವರು ಸ್ವತಃ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ವರದಿಯಾದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹರಿಯಾಣದ ಹಿರಿಯ ಪೊಲೀಸ್ … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಶಿರಸಿ : ಮನೆಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಶಿರಸಿ : ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳು ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುರ್ಕಿನಕೊಡ್ಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 )ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ … Continued

ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಕಾಸರಗೋಡು : ಆಮ್ಲೆಟ್ ತಿನ್ನುವಾಗ ಗಂಟಲಿನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನ ಮೂಲದ ಪ್ರಸ್ತಕ್ತ ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಅವರು ತಮ್ಮ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ … Continued