ಹಿಜ್ಬೊಲ್ಲಾ ಗುಂಪು ಬಳಸುತ್ತಿದ್ದ ನೂರಾರು ವಾಕಿ-ಟಾಕೀ, ಪೇಜರ್‌ಗಳು ಸ್ಫೋಟ ; 32 ಜನರು ಸಾವು, 3,250 ಕ್ಕೂ ಹೆಚ್ಚು ಮಂದಿಗೆ ಗಾಯ

ಬೈರುತ್‌ : ಕಳೆದ ಎರಡು ದಿನಗಳಲ್ಲಿ ಲೆಬನಾನ್‌ನಾದ್ಯಂತ ಹಿಜ್ಬೊಲ್ಲಾ ಸದಸ್ಯರು ಬಳಸಿದ ವಾಕಿ-ಟಾಕಿಗಳು ಮತ್ತು ಪೇಜರ್‌ಗಳನ್ನು ಸ್ಫೋಟಿಸಿದ್ದರಿಂದ ಕನಿಷ್ಠ 32 ಜನರು ಸಾವಿಗೀಡಾಗಿದ್ದಾರೆ ಮತ್ತು 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದು ಇಸ್ರೇಲ್‌ನೊಂದಿಗೆ ಸಂಪೂರ್ಣ ಯುದ್ಧ ನಡೆಯುವ ಆತಂಕಕ್ಕೆ ಕಾರಣವಾಗಿದೆ. ಇರಾನ್ ಬೆಂಬಲಿತ ಹಿಜ್ಬೊಲ್ಲಾ ಗುಂಪು ಬಳಸುತ್ತಿದ್ದ ವಾಕಿ-ಟಾಕಿಗಳು ಬುಧವಾರ ಅದರ ಬೈರುತ್ ಭದ್ರಕೋಟೆಯಲ್ಲಿ … Continued

ಜಾತ್ರೆ ವೇಳೆ ಬೈಕ್​ ವೀಲ್ಹಿಂಗ್​ ಹುಚ್ಚಾಟ ​; ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳದಲ್ಲಿ ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೈಕ್ ಸವಾರ ಗೋಟಖಂಡಕಿ ಗ್ರಾಮದ ನಿವಾಸಿ ನಿಂಗರಾಜ ಚೌಧರಿ(22), ಹಿಂಬದಿ ಸವಾರ ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನಿಲ … Continued

ಮಳೆಯ ಆರ್ಭಟ ; ಆಂಧ್ರ, ತೆಲಂಗಾಣದಲ್ಲಿ 27 ಜನರು ಸಾವು

ಹೈದರಾಬಾದ್‌ : ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸತತ ಎರಡನೇ ದಿನವಾದ ಭಾನುವಾರದ ಭಾರೀ ಮಳೆಗೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಬಂದಿದ್ದು, ಜಲಾವೃತವಾಗಿದೆ. ಮಳೆ ರಸ್ತೆ ಮತ್ತು ರೈಲು ಸಂಚಾರವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯಿಂದ ತೆಲಂಗಾಣದಲ್ಲಿ ಕನಿಷ್ಠ 15 ಜನರು ಮತ್ತು ಆಂಧ್ರಪ್ರದೇಶದಲ್ಲಿ 12 ಜನರು ಸಾವಿಗೀಡಾಗಿದ್ದಾರೆ, ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ … Continued

ಪಾಕಿಸ್ತಾನ: ಬಸ್ಸಿನಿಂದ ಪ್ರಯಾಣಿಕರನ್ನು ಇಳಿಸಿ ಗುರುತಿನ ಚೀಟಿ ನೋಡಿದ ನಂತರ 23 ಪ್ರಯಾಣಿಕರ ಗುಂಡಿಕ್ಕಿ ಹತ್ಯೆ..

ಕ್ವೆಟ್ಟಾ : ನೈರುತ್ಯ ಪಾಕಿಸ್ತಾನದಲ್ಲಿ ನಡೆದ ಭೀಕರ ದಾಳಿಯಲ್ಲಿ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ಗುರುತಿಸಿ ಬಸ್‌ಗಳು, ವಾಹನಗಳು ಮತ್ತು ಟ್ರಕ್‌ಗಳಲ್ಲಿದ್ದ ಅವರನ್ನು ಕರೆದೊಯ್ದ ನಂತರ ಅವರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದ ಮುಸಾಖೈಲ್ ಜಿಲ್ಲೆಯಲ್ಲಿ ರಾತ್ರಿ ಈ ಹತ್ಯೆಗಳು ನಡೆದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಯೂಬ್ ಅಚಕ್ಝೈ … Continued

ಬಾಂಗ್ಲಾದೇಶದ ಘರ್ಷಣೆಯಲ್ಲಿ 72 ಮಂದಿ ಸಾವು: ರಾಜಧಾನಿ ಢಾಕಾದಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ

ಢಾಕಾ : ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವಿಗೀಡಾಗಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಪ್ರಯೋಗಿಸಿದ್ದಾರೆ. ಹಿಂಸಾತ್ಮಕ ಪರಿಸ್ಥಿತಿಯ ನಂತರ, ಭಾನುವಾರ … Continued

ವಯನಾಡು ಭೂಕುಸಿತದಲ್ಲಿ 24 ಮಂದಿ ಸಾವು; ನಾಲ್ಕು ಗ್ರಾಮಗಳಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ

ವಯನಾಡು : ಭಾರೀ ಮಳೆಯ ನಡುವೆ ಮಂಗಳವಾರ ಬೆಳಿಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿ ಕನಿಷ್ಠ 24 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಸಿಲುಕಿರುವ ಆತಂಕವಿದೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಸೇನೆ ಸೇರಿದಂತೆ ಹಲವು ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ … Continued

ವಾಯವ್ಯ ಪಾಕಿಸ್ತಾನದಲ್ಲಿ ಎರಡು ಬುಡಕಟ್ಟುಗಳ ನಡುವೆ ಸಶಸ್ತ್ರ ಘರ್ಷಣೆ ; 36 ಸಾವು, 162 ಮಂದಿಗೆ ಗಾಯ

ಇಸ್ಲಾಮಾಬಾದ್‌ : ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಬುಡಕಟ್ಟು ಜಿಲ್ಲೆಯಲ್ಲಿ ಒಂದು ತುಂಡು ಭೂಮಿಗಾಗಿ ಹೋರಾಡುತ್ತಿರುವ ಎರಡು ಬುಡಕಟ್ಟುಗಳ ನಡುವೆ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಮತ್ತು 162 ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಅಪ್ಪರ್ ಕುರ್ರಂ ಜಿಲ್ಲೆಯ ಬೊಶೆರಾ ಗ್ರಾಮದಲ್ಲಿ ಐದು ದಿನಗಳ ಹಿಂದೆ ಭಾರಿ ಘರ್ಷಣೆಗಳು ಪ್ರಾರಂಭವಾದವು … Continued

ಹತ್ರಾಸ್ ಕಾಲ್ತುಳಿತದ ಘಟನೆ : 6 ಮಂದಿ ಬಂಧನ, ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಲಕ್ನೋ : ಹತ್ರಾಸ್‌ನಲ್ಲಿ ಸತ್ಸಂಗದ ನಂತರ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರೆಲ್ಲರೂ ಸತ್ಸಂಗವನ್ನು ನಡೆಸುವ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ನಾರಾಯಣ ಸಾಕರ್ ಹರಿ ಅಥವಾ ‘ಭೋಲೆ ಬಾಬಾ’ ನಡೆಸಿದ ಸತ್ಸಂಗದ ನಂತರ ನಡೆದ ಕಾಲ್ತುಳಿತದಲ್ಲಿ ಒಟ್ಟು … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued