ದೀಪಾವಳಿ; ಕಾರವಾರ-ಬೆಂಗಳೂರು ವಿಶೇಷ ರೈಲು

ಬೆಂಗಳೂರು : ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30ರಂದು ಬೆಂಗಳೂರು- ಕಾರವಾರ ವಿಶೇಷ ರೈಲು ಸಂಚಾರವನ್ನು ಘೋಷಣೆ ಮಾಡಿದ್ದ ರೈಲ್ವೆ ಇದೀಗ ನವೆಂಬರ್ 3 ರಂದು ಕಾರವಾರದಿಂದ ಇನ್ನೊಂದು ವಿಶೇಷ ರೈಲು ಬಿಡಲಿದೆ. ನವೆಂಬರ್ 3 ರಂದು ಕಾರವಾರದಿಂದ ರೈಲು ಮಧ್ಯಾಹ್ನ 12ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ ನಾಲ್ಕು ಗಂಟೆಗೆ ಬೆಂಗಳೂರು ತಲುಪಲಿದೆ. … Continued

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿಷೇಧ ಆದೇಶ ವಾಪಸ್…

ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. … Continued