ಹೆಚ್ಚಿದ ವಾಯು ಮಾಲಿನ್ಯ ; 50%ರಷ್ಟು ದೆಹಲಿ ಸರ್ಕಾರಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ

ನವದೆಹಲಿ : ‘ತೀವ್ರ’ ವಾಯುಮಾಲಿನ್ಯದಿಂದ ಬಳಲುತ್ತಿರುವ ದೆಹಲಿಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ದೆಹಲಿ ಸರ್ಕಾರವು ತನ್ನ 50%ರಷ್ಟು ಸಿಬ್ಬಂದಿಗೆ ಬುಧವಾರ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವುದಾಗಿ ಪ್ರಕಟಿಸಿದೆ. X ಗೆ ನಲ್ಲಿ ದೆಹಲಿಯ ಪರಿಸರ ಖಾತೆ ಸಚಿವ ಗೋಪಾಲ್ ರೈ ಅವರು, “ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ … Continued

ವೀಡಿಯೊ..| ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿತ ; ಓರ್ವ ಸಾವು, 6 ಮಂದಿಗೆ ಗಾಯ

ನವದೆಹಲಿ: ಇಂದು, ಶುಕ್ರವಾರ ಬೆಳಿಗ್ಗೆ ಸುರಿದ ಭಾರೀ ಮಳೆಯ ನಡುವೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 (ಟಿ 1)ರ ಛಾವಣಿಯ ಒಂದು ಭಾಗ ಕುಸಿದು ಕಾರುಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ ಒಬ್ಬರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ದೇಶೀಯ ವಿಮಾನ ಕಾರ್ಯಾಚರಣೆಗಳನ್ನು ಹೊಂದಿರುವ ಟರ್ಮಿನಲ್ 1 ರಿಂದ ಎಲ್ಲಾ ವಿಮಾನ ಸಂಚಾರಗಳನ್ನು … Continued

ಪ್ರಯಾಣಿಕರ ಚಿನ್ನಾಭರಣ ಕಳ್ಳತನ ಮಾಡಲು 110 ದಿನಗಳಲ್ಲಿ 200 ವಿಮಾನಗಳಲ್ಲಿ ಪ್ರಯಾಣಿಸಿದ್ದ ಈ ಮಹಾಕಳ್ಳ…!

ನವದೆಹಲಿ: ವಿವಿಧ ವಿಮಾನಗಳಲ್ಲಿ ಸಹ ಪ್ರಯಾಣಿಕರ ಬ್ಯಾಗ್‌ಗಳಿಂದ ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈತ ವಿಮಾನದಲ್ಲಿ ಕದ್ದ ಹಣದಿಂದ ಕೇಂದ್ರ ದೆಹಲಿಯಲ್ಲಿ ಹೋಟೆಲ್ ಅನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದ ಎಂಬ ವರದಿಯೂ ಇದೆ…! ಆರೋಪಿ ರಾಜೇಶ ಕಪೂರ್ ಎಂಬಾತ … Continued

ಮಳೆ, ಮಿಂಚು : ದೆಹಲಿಗೆ ತೆರಳುತ್ತಿದ್ದ 16 ವಿಮಾನಗಳು ಬೇರೆ ನಗರಗಳತ್ತ

ನವದೆಹಲಿ : ಭಾರೀ ಮಳೆ ಮತ್ತು ಮಿಂಚು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದ ನಂತರ ಕನಿಷ್ಠ 16 ವಿಮಾನಗಳನ್ನು ದೆಹಲಿಯಿಂದ ಜೈಪುರ, ಲಕ್ನೋ, ಅಮೃತಸರ ಮತ್ತು ಅಹಮದಾಬಾದಿಗೆ ತಿರುಗಿಸಲಾಗಿದೆ ಎಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರ್ಗ ಬದಲಿಸಿದ 16 ವಿಮಾನಗಳ ಪೈಕಿ 10 ವಿಮಾನಗಳನ್ನು ಜೈಪುರಕ್ಕೆ, … Continued

ದೆಹಲಿ ವಿಮಾನ ನಿಲ್ದಾಣದಲ್ಲಿ ಐಎಸ್ ಭಯೋತ್ಪಾದನೆ ಸಂಚಿನ ಆರೋಪಿಯನ್ನು ಬಂಧಿಸಿದ ಎನ್ಐಎ: ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೂ ನಂಟು..?

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಕೀನ್ಯಾದ ನೈರೋಬಿಯಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಮುಖ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಸಂಚುಕೋರನನ್ನು ಬಂಧಿಸಿದೆ. ಅರಾಫತ್ ಅಲಿ ಎಂಬಾತ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಗಳನ್ನು ನಡೆಸಲು ಐಎಸ್‌ (IS) ISIS (ಇಸ್ಲಾಮಿಕ್ … Continued