“ಅತಿಶಿ ತಾತ್ಕಾಲಿಕ ಸಿಎಂ ಎಂದು ಅರವಿಂದ ಕೇಜ್ರಿವಾಲ್ ಕರೆದಿರುವುದು ಆಕ್ಷೇಪಾರ್ಹ”: ದೆಹಲಿ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿನಯಕುಮಾರ ಸಕ್ಸೇನಾ ಅವರು ಸೋಮವಾರ ಮುಖ್ಯಮಂತ್ರಿ ಅತಿಶಿ ಅವರಿಗೆ ಪತ್ರ ಬರೆದಿದ್ದು, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ತಾತ್ಕಾಲಿಕ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2025 ರ ವಿಧಾನಸಭಾ ಚುನಾವಣೆಗೆ ಮುನ್ನ ಆಡಳಿತರೂಢ ಎಎಪಿ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವ ತೀವ್ರ ಜಟಾಪಟಿಯ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ಅರವಿಂದ ಕೇಜ್ರಿವಾಲ್‌ ಬದಲಿಗೆ ಯಾರಾಗ್ತಾರೆ ದೆಹಲಿ ಸಿಎಂ…?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನದಲ್ಲಿ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದು, ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನರ ತೀರ್ಪಿನ ನಂತರವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಈಗ ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ದೆಹಲಿ ಮದ್ಯ ನೀತಿ ಹಗರಣ : ಮಧ್ಯಂತರ ರಕ್ಷಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ. ತಂಡ

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್ ಇದೆ ಎಂದು ಇ.ಡಿ. ತಂಡವು ಕೇಜ್ರಿವಾಲ್ ಅವರ ನಿವಾಸದಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನಿವಾಸ ನವೀಕರಣ ಪ್ರಕರಣ : ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ನವೀಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ಕೇಂದ್ರ ಗೃಹ ಸಚಿವಾಲಯ ಸಿಬಿಐ ತನಿಖೆಗೆ ಆದೇಶಿಸಿದೆ. ಸಿಬಿಐ ಬುಧವಾರ ಈ ವಿಷಯದಲ್ಲಿ ಪ್ರಾಥಮಿಕ ವಿಚಾರಣೆಯನ್ನು (ಪಿಇ) ದಾಖಲಿಸಿದೆ. ಅಕ್ಟೋಬರ್ 3ರೊಳಗೆ ಎಲ್ಲ ದಾಖಲೆಗಳನ್ನು ನೀಡುವಂತೆ ದೆಹಲಿ ಸರ್ಕಾರದ ಅಧೀನದಲ್ಲಿರುವ ಲೋಕೋಪಯೋಗಿ ಇಲಾಖೆಗೆ ಸಿಬಿಐ ನಿರ್ದೇಶನ ನೀಡಿದೆ. ದೆಹಲಿಯ ಮುಖ್ಯ … Continued