ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

 ನವದೆಹಲಿ : ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಸಂದೇಶಗಳ ಎನ್‌ಕ್ರಿಪ್ಶನ್ ಅನ್ನು ಬಹಿರಂಗ ಮಾಡಲು ಒತ್ತಾಯಿಸಿದರೆ “ಭಾರತದಿಂದ ನಿರ್ಗಮಿಸಬೇಕಾಗುತ್ತದೆ” ಎಂದು ವಾಟ್ಸಾಪ್ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್ ಭರವಸೆ ನೀಡುವ ಗೌಪ್ಯತೆ ಮತ್ತು ಗೂಢಲಿಪೀಕರಣ ಸಂದೇಶಗಳು ಅಂತ್ಯದಿಂದ ಅಂತ್ಯದವರೆಗೆ ಎನ್‌ಕ್ರಿಪ್ಟ್ ಆಗಿರುವುದರಿಂದ ಜನರು ಅದನ್ನು ಬಳಸುತ್ತಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಎಂಡ್-ಟು-ಎಂಡ್ … Continued

ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ಭಾರತೀಯ ಜನತಾ ಪಕ್ಷದ … Continued

ಅರವಿಂದ ಕೇಜ್ರಿವಾಲ್ ಜೈಲಿನಲ್ಲಿ ಉಳಿಯಬೇಕು : ಬಂಧನ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಏಪ್ರಿಲ್ 3 ರಂದು ಸುದೀರ್ಘ ವಾದಗಳನ್ನು ಆಲಿಸಿದ ನಂತರ ಕಾಯ್ದಿರಿಸಿದ್ದ ತೀರ್ಪನ್ನು ಇಂದು, ಮಂಗಳವಾರ ಪ್ರಕಟಿಸಿದ್ದಾರೆ. … Continued

ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ₹ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ (ಇ ಡಿ) ಕ್ಸಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡುವ ಕುರಿತು ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ … Continued

ತೆರಿಗೆ ಮರುಮೌಲ್ಯಮಾಪನ ಪ್ರಶ್ನಿಸಿ ಐಟಿ ಇಲಾಖೆ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆ ತನ್ನ ವಿರುದ್ಧ ಪ್ರಾರಂಭಿಸಿದ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಸಲ್ಲಿಸಿದ್ದ ಮೂರು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಯಶವಂತ ವರ್ಮಾ ಮತ್ತು ಪುರುಷೀಂದ್ರ ಕುಮಾರ ಕೌರವ್ ಅವರಿದ್ದ ವಿಭಾಗೀಯ ಪೀಠವು ಮಾರ್ಚ್ 20 ರಂದು ತೀರ್ಪನ್ನು ಕಾಯ್ದಿರಿಸಿತ್ತು. 2014-15, 2015-16 ಮತ್ತು … Continued

ದೆಹಲಿ ಮದ್ಯ ನೀತಿ ಹಗರಣ : ಮಧ್ಯಂತರ ರಕ್ಷಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ. ತಂಡ

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್ ಇದೆ ಎಂದು ಇ.ಡಿ. ತಂಡವು ಕೇಜ್ರಿವಾಲ್ ಅವರ ನಿವಾಸದಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ … Continued

₹105 ಕೋಟಿ ತೆರಿಗೆ : ಐಟಿಎಟಿ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆಯು ₹105 ಕೋಟಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವಂತೆ ತನಗೆ ನೀಡಿದ್ದ ನೋಟಿಸಿಗೆ ತಡೆ ನೀಡಲು ನಿರಾಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶ ಪ್ರಶ್ನಿಸಿ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ ಮತ್ತು ನ್ಯಾಯಮೂರ್ತಿ ತುಷಾರ ರಾವ್ ಗೆಡೇಲಾ ಅವರಿದ್ದ ಪೀಠದ ಮುಂದೆ … Continued

ಕ್ರಿಕೆಟಿಗ ಧೋನಿ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ ಮಾಜಿ ಪಾಲುದಾರ ಮಿಹಿರ್ ದಿವಾಕರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅವರ ಮಾಜಿ ವ್ಯವಹಾರ ಪಾಲುದಾರರಾದ ಮಿಹಿರ್ ದಿವಾಕರ್ ಮತ್ತು ದಿವಾಕರ ಪತ್ನಿ ಸೌಮ್ಯ ದಾಸ್‌ ಅವರು ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಜನವರಿ 18ರಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರ ಪೀಠ ವಿಚಾರಣೆ ನಡೆಸಲಿದೆ. 2017 … Continued

ಮೋದಿ, ಶಾ ಜೇಬುಗಳ್ಳರು ಹೇಳಿಕೆ : ರಾಹುಲ್‌ ಗಾಂಧಿಗೆ ಈಗ ಮತ್ತೊಂದು ಸಂಕಷ್ಟ

ನವದೆಹಲಿ: ನವೆಂಬರ್ 22ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ‘ಜೇಬುಗಳ್ಳರು’ ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ. ಹೇಳಿಕೆಯು “ಉತ್ತಮ ಅಭಿರುಚಿಯಲ್ಲಿಲ್ಲ” … Continued