23ನೇ ವಯಸ್ಸಿನಲ್ಲಿ ಕೊಲೆ ಮಾಡಿ ಪರಾರಿ : 42 ವರ್ಷಗಳ ಬಳಿಕ 65ನೇ ವಯಸ್ಸಿನಲ್ಲಿ ಈತ ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ !

ನವದೆಹಲಿ : ಕೊಲೆ ಪ್ರಕರಣವೊಂದರಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ 65 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 1984ರಲ್ಲಿ ಪಶ್ಚಿಮ ದೆಹಲಿಯ ಜನಕಪುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಆರೋಪಿ ನತ್ತು ಅಲಿಯಾಸ್ ನತ್ತೂಲಾಲ ಎಂಬ ಆರೋಪಿಯನ್ನು ಸೆಂಟ್ರಲ್ ರೇಂಜ್ ಕ್ರೈಂ ಬ್ರಾಂಚ್ ಹಲವು ತಿಂಗಳ ಸತತ … Continued

ಪೆಲೆಟ್ ಗನ್ ಪ್ರಕರಣದಲ್ಲಿ ದೆಹಲಿ ಪೊಲೀಸರಿಂದ ಎಫ್‌ಐಆರ್‌ ದಾಖಲು ; ರಾಹುಲ್ ಗಾಂಧಿಯ 7 ತಾಸುಗಳ ಧರಣಿ ಅಂತ್ಯ

ನವದೆಹಲಿ: ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್‌ಗಳನ್ನು ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೊನೆಗೂ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 118 ಮತ್ತು 125ರ ಅಡಿಯಲ್ಲಿ ದಾಖಲಿಸಲಾಗಿದೆ. ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ … Continued

ಎನ್‌ಕ್ರಿಪ್ಟೆಡ್‌ ಕಾಲ್‌, ರಹಸ್ಯ ಕಡತ, ತೀವ್ರ ನಿಗಾ : ಪೊಲೀಸರು ವಾಯುಪಡೆಯ ಹನಿಟ್ರ್ಯಾಪ್–ಗೂಢಚಾರಿಕೆ ಜಾಲ ಭೇದಿಸಿದ್ದು ಹೇಗೆ…?

ನವದೆಹಲಿ: ಪಾಕಿಸ್ತಾನ ಮೂಲದ ಗುಪ್ತಚರ ಏಜೆಂಟನಿಗೆ ರಹಸ್ಯ ರಕ್ಷಣಾ ದಾಖಲೆಗಳು ಹಾಗೂ ಸೇನಾ ಕಾರ್ಯತಂತ್ರದ  ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಸೇವೆಯಲ್ಲಿದ್ದ 44 ವರ್ಷದ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್‌ನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ನಾಲ್ಕು ತಿಂಗಳ ಕಾಲ ನಡೆದ ಈ ಅಧಿಕಾರಿಯ ಮೇಲೆ ನಿಗಾ ಇಟ್ಟ ಬಳಿಕ … Continued

ಸಿಜೆಪಿ ಪ್ರತಿಭಟನೆ | ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಸುಪ್ರೀಂಕೋರ್ಟ್ ; ಅಪ್ರಾಪ್ತರ ತಕ್ಷಣ ಬಿಡುಗಡೆಗೆ ಸೂಚನೆ

ನವದೆಹಲಿ : ದೆಹಲಿ ಜಂತರ್ ಮಂತರ್ ಹಾಗೂ ವಿವಿಧ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ (Coercive) ಕ್ರಮ ಕೈಗೊಳ್ಳಬಾರದು ಎಂದು ಮಂಗಳವಾರ ಮಹತ್ವದ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, … Continued

ಜಂತರ್ ಮಂತರ್ ಪ್ರತಿಭಟನೆ ವೇಳೆ ಹಿಂಸಾಚಾರ: 2,873 ಅಪರಾಧ ಹಿನ್ನೆಲೆಯವರ ಗುರುತು ಪತ್ತೆ; 989 ಮಂದಿ ವಿರುದ್ಧ ಗಂಭೀರ ಪ್ರಕರಣಗಳು

ನವದೆಹಲಿ: ಕಳೆದ ವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೂರಾರು ಗಿಗಾಬೈಟ್‌ಗಳಷ್ಟು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವ್ಯಂಗ್ಯಾತ್ಮಕ ರಾಜಕೀಯ ಸಂಘಟನೆಯಾದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ … Continued

ಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ನಡುವೆ ಸುಳ್ಳು ಮಾಹಿತಿ ಹರಡುತ್ತಿರುವ 480ಕ್ಕೂ ಹೆಚ್ಚು ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಖಾತೆಗಳಲ್ಲಿ ಬಹಳಷ್ಟು ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿಯೂ ಸಕ್ರಿಯವಾಗಿದ್ದವು ಎಂದು ಪೊಲೀಸರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ … Continued

ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued

ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದ ನಾಲ್ವರು “ಕಟ್ಟರ್ ಪಂಥೀಯ” ವ್ಯಕ್ತಿಗಳನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರ ರಾಜ್ಯಗಳಿಗೆ ಸೇರಿದವರಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದರು ಎಂದು ತಿಳಿದುಬಂದಿದೆ. ದೆಹಲಿ ಪೊಲೀಸ್‌ನ ವಿಶೇಷ ದಳ (Special Cell) ಈ ಕಾರ್ಯಾಚರಣೆಯನ್ನು ನಡೆಸಿದ್ದು, ಬಂಧಿತರನ್ನು ಮೊಸೈಬ್ ಅಹ್ಮದ್, … Continued

ಭಾರತದ ಮೇಲೆ ದಾಳಿಗೆ ಸಂಚು: ದೆಹಲಿ ಪೊಲೀಸರಿಂದ ಐಎಸ್‌ಐ-ಬಬ್ಬರ್ ಖಾಲ್ಸಾ ಉಗ್ರ ಜಾಲ ಪತ್ತೆ, 11 ಶಂಕಿತರ ಬಂಧನ

ನವದೆಹಲಿ: ಭಾರತದ ಭದ್ರತಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಪ್ರೇರಿತ ಭಯೋತ್ಪಾದನಾ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭೇದಿಸಿದೆ. ಪಂಜಾಬ್ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ 11 ಶಂಕಿತರನ್ನು ಬಂಧಿಸಲಾಗಿದೆ. ರಕ್ಷಣಾ ನೆಲೆಗಳ … Continued