ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued

ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದ ನಾಲ್ವರು “ಕಟ್ಟರ್ ಪಂಥೀಯ” ವ್ಯಕ್ತಿಗಳನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರ ರಾಜ್ಯಗಳಿಗೆ ಸೇರಿದವರಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದರು ಎಂದು ತಿಳಿದುಬಂದಿದೆ. ದೆಹಲಿ ಪೊಲೀಸ್‌ನ ವಿಶೇಷ ದಳ (Special Cell) ಈ ಕಾರ್ಯಾಚರಣೆಯನ್ನು ನಡೆಸಿದ್ದು, ಬಂಧಿತರನ್ನು ಮೊಸೈಬ್ ಅಹ್ಮದ್, … Continued

ಭಾರತದ ಮೇಲೆ ದಾಳಿಗೆ ಸಂಚು: ದೆಹಲಿ ಪೊಲೀಸರಿಂದ ಐಎಸ್‌ಐ-ಬಬ್ಬರ್ ಖಾಲ್ಸಾ ಉಗ್ರ ಜಾಲ ಪತ್ತೆ, 11 ಶಂಕಿತರ ಬಂಧನ

ನವದೆಹಲಿ: ಭಾರತದ ಭದ್ರತಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಪ್ರೇರಿತ ಭಯೋತ್ಪಾದನಾ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭೇದಿಸಿದೆ. ಪಂಜಾಬ್ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ 11 ಶಂಕಿತರನ್ನು ಬಂಧಿಸಲಾಗಿದೆ. ರಕ್ಷಣಾ ನೆಲೆಗಳ … Continued

ದೇಶಾದ್ಯಂತ 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಆರೋಪಿಯ ಬಂಧನ

ನವದೆಹಲಿ: ದೇಶಾದ್ಯಂತ ಶಾಲೆಗಳು, ಆಸ್ಪತ್ರೆಗಳು, ಹೈಕೋರ್ಟ್‌ಗಳು ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕರ್ನಾಟಕದ ಮೈಸೂರಿನಲ್ಲಿ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀನಿವಾಸ ಲೂಯಿಸ್ (47) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಶ್ರೀನಿವಾಸ … Continued

‘ಎಐ ಸಮಿಟ್’ ಪ್ರತಿಭಟನೆ | ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ನಂತ್ರ ಹೈಡ್ರಾಮಾ ; ಪೊಲೀಸ್‌ vs ಪೊಲೀಸ್‌

ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ‘ಎಐ ಸಮಿಟ್’ (AI Summit) ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ವಿಚಾರವಾಗಿ, ಶಿಮ್ಲಾದಲ್ಲಿ ಬುಧವಾರ ತಡರಾತ್ರಿ ದೆಹಲಿ ಮತ್ತು ಹಿಮಾಚಲ ಪ್ರದೇಶ ಪೊಲೀಸರ ನಡುವೆ ಅಸಾಧಾರಣ ಜಟಾಪಟಿ ನಡೆದಿದೆ. ಅಂತರರಾಜ್ಯ ಪೊಲೀಸ್ ಕಾರ್ಯಾಚರಣೆಯಾಗಿ ಆರಂಭವಾದ ಈ ಘಟನೆ, ವಾಹನಗಳ ತಡೆ, ವಾಗ್ವಾದ … Continued

ಭಾರತದಲ್ಲಿ ಭೀಕರ ದಾಳಿಗೆ ಸಂಚು ; ಪಾಕ್‌ ಐಎಸ್‌ಐ, ಬಾಂಗ್ಲಾದೇಶ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟಿದ್ದ 8 ಜನರ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ (ISI) ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಭಾರತದಲ್ಲಿ ಭೀಕರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎಂಟು ಮಂದಿ ಶಂಕಿತರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ದೆಹಲಿಯ ಕೆಂಪು ಕೋಟೆ ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಇವರು ಯೋಜಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ತಮಿಳುನಾಡಿನ … Continued

ರೀಲ್ಸ್ ಹುಚ್ಚು | ಚಲಿಸುವಾಗಲೇ ಬಸ್, ರಿಕ್ಷಾ ಬಾಗಿಲು ತೆರೆದು ಪುಂಡಾಟಿಕೆ : ವೀಡಿಯೊ ವೈರಲ್‌ ; ಯುವಕನ ಬಂಧನ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ‘ಲೈಕ್ಸ್’ ಮತ್ತು ‘ಶೇರ್’ಗಳಿಗಾಗಿ ಪ್ರಾಣದ ಹಂಗು ತೊರೆದು ಸ್ಟಂಟ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹದ್ದೇ ಒಂದು ಅಪಾಯಕಾರಿ ಸಾಹಸಕ್ಕೆ ಕೈಹಾಕಿ, ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಖಜೂರಿ ಖಾಸ್ ನಿವಾಸಿಯಾದ ತುಷಾರ್ ಪುನಿಯಾ ಬಂಧಿತ ಆರೋಪಿ. ಫೆಬ್ರವರಿ 16 ರಂದು … Continued

ನ್ಯಾಶನಲ್‌ ಹೆರಾಲ್ಡ್ ಪ್ರಕರಣ : ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ ಐಆರ್

ನವದೆಹಲಿ: ನವದೆಹಲಿ: ನ್ಯಾಶನಲ್‌ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪಗಳನ್ನು ಹೊರಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (Economic Offences Wing) ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಆರು ಜನರ ವಿರುದ್ಧ ದಾಖಲಿಸಿದ ಹೊಸ … Continued

ದೆಹಲಿಯಲ್ಲಿ ಎನ್‌ಕೌಂಟರ್ : ‘ಸಿಗ್ಮಾ ಗ್ಯಾಂಗ್’ ನ ನಾಲ್ವರು ʼಮೋಸ್ಟ್ ವಾಂಟೆಡ್ʼ ಗ್ಯಾಂಗ್‌ಸ್ಟರ್‌ ಗಳು ಹತ

ನವದೆಹಲಿ: ದೆಹಲಿಯಲ್ಲಿ ಬಿಹಾರ ಪೊಲೀಸರ ಸಹಯೋಗದೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್‌ನಲ್ಲಿ ನಾಲ್ವರು ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ಗಳು ಹತರಾಗಿದ್ದಾರೆ. ಈ ಘಟನೆ ಗುರುವಾರ ಮುಂಜಾನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ದೆಹಲಿ ಪೊಲೀಸರ ಪ್ರಕಾರ, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಹದ್ದೂರ್ ಶಾ ರಸ್ತೆಯಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಹತರಾದವರನ್ನು ರಂಜನ್ ಪಾಠಕ್ (25), ಬಿಮಲೇಶ್ … Continued