ದೆಹಲಿಯಲ್ಲಿ ಸಿಕ್ಕಿಬಿದ್ದ ವಾಂಟೆಡ್‌ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬೇಕಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್‌ನ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ಗುರುವಾರ ದೆಹಲಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆತನ ತಲೆಯ ಮೇಲೆ 10 ಲಕ್ಷ ರೂಪಾಯಿ ಬಹುಮಾನ ಇತ್ತು. ಕೇಂದ್ರೀಯ ಏಜೆನ್ಸಿಗಳ ಸಮನ್ವಯದಲ್ಲಿ, ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡ ಮಟ್ಟೂವನ್ನು ಬಂಧಿಸಿದೆ. ಪೊಲೀಸ್ ತಂಡವು ಮಟ್ಟೂನಿಂದ ಪಿಸ್ತೂಲ್, ಆರು ಲೈವ್ ಕಾರ್ಟ್ರಿಡ್ಜ್ಗಳು ಮತ್ತು … Continued

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ : ರಾಯಭಾರಿಗೆ ಬರೆದ ಪತ್ರ ಪತ್ತೆ

ನವದೆಹಲಿ: ಮಂಗಳವಾರ ಸಂಜೆ ಇಸ್ರೇಲ್ ರಾಯಭಾರಿ ಕಚೇರಿ ಬಳಿ “ಸ್ಫೋಟ”ದ ಶಬ್ದ ಕೇಳಿಬರುತ್ತಿರುವ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದಿದೆ. ದೆಹಲಿ ಪೊಲೀಸರ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಆದರೆ ಅವರು ಸ್ಥಳವನ್ನು ಹುಡುಕಿದಾಗ ಮತ್ತು ಅನುಮಾನಾಸ್ಪದವಾಗಿ ಏನೂ ಸಿಗದ ನಂತರ ಅಲ್ಲಿಂದ ತೆರಳಿದೆ ಎಂದು ವರದಿಯಾಗಿದೆ. ಆದಾಗ್ಯೂ, ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ದೂರದಲ್ಲಿರುವ … Continued

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : ಕರ್ನಾಟಕದ ಟೆಕ್ಕಿ-ಮಾಜಿ ಪೊಲೀಸ್ ಅಧಿಕಾರಿ ಪುತ್ರನ ಬಂಧನ

ನವದೆಹಲಿ: ಸಂಸತ್ತಿನ ಭಾರೀ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಒಬ್ಬನನ್ನು ಕರ್ನಾಟಕದ ಬಾಗಲಕೋಟೆಯ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯವರ ಮಗ ಸಾಯಿಕೃಷ್ಣ ಎಂದು ಗುರುತಿಸಲಾಗಿದೆ. ಸಾಯಿಕೃಷ್ಣ, ಡಿಸೆಂಬರ್ 13 ರಂದು ಲೋಕಸಭೆಯ ಸದನಕ್ಕೆ ಒಳನುಗ್ಗಿ ಡಬ್ಬಿಗಳಿಂದ ಹಳದಿ ಅನಿಲವನ್ನು ಬಿಡುಗಡೆ ಮಾಡಿದವರಲ್ಲಿ ಒಬ್ಬನಾದ ಮನೋರಂಜನ ಡಿ. … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಬಳಕೆ ಮಾಡಿದ್ದ ಸುಟ್ಟ ಫೋನ್ ಗಳ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ನಾಶಪಡಿಸಿದ್ದ ಮೊಬೈಲ್‌ ಫೋನ್‌ಗಳ ಭಾಗಗಳನ್ನು ದೆಹಲಿ ಪೊಲೀಸರು ಭಾನುವಾರ ರಾಜಸ್ಥಾನದಲ್ಲಿ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಎಲ್ಲಾ ಫೋನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲೋಕಸಭೆ ಭದ್ರತಾ ಉಲ್ಲಂಘನೆ ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ ಎಲ್ಲಾ ಆರೋಪಿಗಳ … Continued

ಸಂಸತ್‌ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಸಂಸತ್‌ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಡೆದಿದ್ದು, ಘಟನೆ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಅವರೆಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ … Continued

ದೇಶದ ಉತ್ತರದ ಗಡಿ ತಿರುಚಲು ಯತ್ನ : ಎಫ್‌ಐಆರ್‌ನಲ್ಲಿ ನ್ಯೂಸ್‌ಕ್ಲಿಕ್‌ ಸಂಸ್ಥಾಪಕರ ವಿರುದ್ಧ ಆರೋಪ

ನವದೆಹಲಿ: ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರು ವಿದೇಶಿ ನಿಧಿಯ ಮೂಲಕ ಕೋಟ್ಯಂತರ ರೂಪಾಯಿ ಸ್ವೀಕರಿಸಿದ್ದಾರೆ. ಹಾಗೂ ಅದನ್ನು ಭಾರತದ ಸಮಗ್ರತೆ ಮತ್ತು ಭದ್ರತೆಗೆ ಹಾನಿ ಮಾಡಲು ಬಳಕೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸ್‌ ವಿಶೇಷ ಘಟಕ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಎಫ್‌ಐಆರ್‌ನಲ್ಲಿ ಪ್ರಬೀರ್‌, ಚಕ್ರವರ್ತಿ … Continued

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ : ಪೋಕ್ಸೊ ಪ್ರಕರಣ ಕೈಬಿಟ್ಟ ಪೊಲೀಸರು

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್‌ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್‌ಶೀಟ್) ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ಗೆ ಗುರುವಾರ ಸಲ್ಲಿಸಿದ್ದಾರೆ. 180ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಸಿಂಗ್‌ ವಿರುದ್ಧ, … Continued

ಭಾರತದ ಅತಿದೊಡ್ಡ ಕಾರು ಕಳ್ಳನ ಬಂಧನ: ಈತ ಕದ್ದಿದ್ದು ಬರೋಬ್ಬರಿ 5,000 ಕಾರುಗಳು…!

ನವದೆಹಲಿ: “ಭಾರತದ ಅತಿದೊಡ್ಡ ಕಾರು ಕಳ್ಳ” ಅನಿಲ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಚೌಹಾಣ್ (52) ಕಾರು ಕಳ್ಳರ ತಂಡದ ಕಿಂಗ್ ಪಿನ್. ಈತನ ವಿರುದ್ಧ 180 ಪ್ರಕರಣಗಳು ದಾಖಲಾಗಿವೆ. ಒಂದಲ್ಲ, ಹತ್ತಲ್ಲ, ನೂರಲ್ಲ… ಈತನ ಮೇಲೆ ಬರೋಬ್ಬರಿ 5,000 ಕಾರುಗಳನ್ನು ಕದ್ದ ಆರೋಪವಿದೆ..! ಬಂಧನದ ಸಮಯದಲ್ಲಿ, ಪೊಲೀಸರು ಆರು ದೇಶ ನಿರ್ಮಿತ … Continued

ದಿಶಾರಿಂದ ತನಿಖಾ ಸಂಸ್ಥೆಯ ಮೇಲೆ ಒತ್ತಡ ಹೇರುವ ಪ್ರಯತ್ನ:ದೆಹಲಿ ಹೈಕೋರ್ಟ್‌ಗೆ ಪೊಲೀಸರ ಹೇಳಿಕೆ

ನವ ದೆಹಲಿ:ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದನ್ನು ತಡೆಯುವಂತೆ ಹವಾಮಾನ ಕಾರ್ಯಕರ್ತೆ ದಿಶಾ ರವಿ ಸಲ್ಲಿಸಿದ್ದ ಅರ್ಜಿಯನ್ನು ತನಿಖಾ ಸಂಸ್ಥೆಯ ಮೇಲೆ ಒತ್ತಡ ಹೇರುವ ಪ್ರಯತ್ನ ಎಂದು ದೆಹಲಿ ಪೊಲೀಸರು ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪೊಲೀಸರ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ನ್ಯಾಯಾಲಯಕ್ಕೆ ತಿಳಿಸಿದ್ದು, ಫೆಬ್ರವರಿ 13ರಂದು ದಿಶಾ ರವಿ ಅವರನ್ನು … Continued