ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued

ಇ-ರಿಕ್ಷಾ ಬ್ಯಾಟರಿ ಸ್ಥಗಿತಗೊಳಿಸಬಲ್ಲ ಆ್ಯಪ್‌ಗಳ ತೆರವಿಗೆ ಗೂಗಲ್‌, ಆಪಲ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ: ಪ್ರಯಾಣಿಕರ ಸುರಕ್ಷತೆ, ದುರುಪಯೋಗ ಹಾಗೂ ವಿದ್ಯುತ್ ವಾಹನಗಳ (ಇವಿ) ಬ್ಯಾಟರಿ ನಿರ್ವಹಣಾ ವ್ಯವಸ್ಥೆಗಳಿಗೆ (Battery Management System–BMS) ಅನಧಿಕೃತ ಪ್ರವೇಶದ ಬಗ್ಗೆ ವ್ಯಕ್ತವಾಗಿರುವ ಗಂಭೀರ ಆತಂಕದ ಹಿನ್ನೆಲೆಯಲ್ಲಿ, ಇ-ರಿಕ್ಷಾ ಹಾಗೂ ಇತರ ವಿದ್ಯುತ್ ವಾಹನಗಳ ಬ್ಯಾಟರಿಗಳನ್ನು ದೂರದಿಂದಲೇ (ರಿಮೋಟ್ ಮೂಲಕ) ಸ್ಥಗಿತಗೊಳಿಸುವ ಸಾಮರ್ಥ್ಯ ಹೊಂದಿರುವುದಾಗಿ ಆರೋಪಿಸಲಾದ ಏಳು ಮೊಬೈಲ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ … Continued

ಭೀಕರ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ‘ಐಎಸ್‌ಐ’ ಬೆಂಬಲಿತ ಉಗ್ರ ಜಾಲ ಭೇದಿಸಿದ ಪೊಲೀಸರು : 7 ಮಂದಿ ಕುಖ್ಯಾತರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ವಲಯ) ಪ್ರದೇಶದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ (ISI) ಬೆಂಬಲದೊಂದಿಗೆ ರೂಪಿಸಲಾಗಿದ್ದ ಬೃಹತ್ ಅಂತಾರಾಷ್ಟ್ರೀಯ ಉಗ್ರ-ಅಪರಾಧ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಕಮ್ ಉಗ್ರ ಶಹಜಾದ್ ಭಟ್ಟಿ ಮತ್ತು ಆತನ ಸಹಚರ … Continued

ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued

ದೆಹಲಿ ಹೊಟೇಲ್‌ ಅಗ್ನಿ ದುರಂತ : ಐಸಿಯುನಲ್ಲಿದ್ದ ತಂದೆ ಸನಿಹ ಇರಲು ಹೊಟೇಲ್‌ನಲ್ಲಿ ತಂಗಿದ್ದ ಸಿಎ ಕುಟುಂಬದ 8 ಮಂದಿ ಸಾವು

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಫ್ಲರಿಶ್ ಸ್ಟೇ’ (Flourish Stay) ಹೋಟೆಲ್‌ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರು ಸೇರಿದಂತೆ ಕನಿಷ್ಠ 21 ಜನರು ಜೀವಂತವಾಗಿ ದಹನವಾಗಿದ್ದಾರೆ. ಮೃತರ ಪೈಕಿ 12 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ. ಗುರುಗ್ರಾಮದ ಸೆಕ್ಟರ್ 46 … Continued

ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued

ಜೂ.6 ರಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ ದಿಪ್ಕೆ ಭಾರತಕ್ಕೆ ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

 ನವದೆಹಲಿ: ದೇಶದಲ್ಲಿ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳು ಹಾಗೂ ವಿವಾದಗಳಿಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಜಿರಳೆ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರು ಜೂನ್ 6 ರಂದು ದೆಹಲಿಯಲ್ಲಿ ಬೃಹತ್ … Continued

ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ಉತ್ತರಾಧಿಕಾರಿ ಆಯ್ಕೆ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಬದಲು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ … Continued

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಗುರುವಾರ ಪಕ್ಷದ ಸಂಘಟನಾತ್ಮಕ ವಿಭಾಗದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದ್ದು, ದೇಶದ ಪ್ರಮುಖ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ತ್ರಿಪುರಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಪಕ್ಷದ … Continued