ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಕಪಾಳಮೋಕ್ಷ, ಥಳಿತ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಈಶಾನ್ಯ ಭಾಗದ ಮೌಜ್‌ಪುರ ಪ್ರದೇಶದಲ್ಲಿರುವ ಖಾಸಗಿ ಪ್ಲೇಸ್ಕೂಲ್‌ನಲ್ಲಿ ಮೂರು ವರ್ಷದ ಮಗುವಿನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೆಹಲಿ ಪೊಲೀಸರು ಪೋಕ್ಸೊ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೊರಬಂದಿರುವ ಆಘಾತಕಾರಿ ಸಿಸಿಟಿವಿ ದೃಶ್ಯಗಳಲ್ಲಿ, ಪುಟ್ಟ ಮಗು ಕುಳಿತಿದ್ದ ಹಳದಿ ಬಣ್ಣದ ಸಣ್ಣ ಪ್ಲಾಸ್ಟಿಕ್ ಕುರ್ಚಿಯನ್ನು … Continued

“ಕಣ್ಣಿನಲ್ಲಿ 3, ದೇಹದಲ್ಲಿ 200 ಪೆಲೆಟ್‌ಗಳು”..: ಎಫ್‌ಐಆರ್‌ ದಾಖಲಿಸಲು ಒತ್ತಾಯಿಸಿ ಠಾಣೆ ಮುಂದೆ ರಾಹುಲ್ ಗಾಂಧಿ ಧರಣಿ

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್‌ ಗನ್‌ ಬಳಸಿ ಗುಂಡಿನ ದಾಳಿ ನಡೆಸಲು ಆದೇಶ ನೀಡಿದ್ದು ಯಾರು ಎಂಬುದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸುತ್ತಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪೆಲೆಟ್‌ ಗನ್‌ ದಾಳಿಗೆ ಒಳಗಾದ ವಿದ್ಯಾರ್ಥಿ ಸಾಹಿಲ್ ಲೋಚಬ್‌ ಅವರನ್ನು ಜೊತೆಯಲ್ಲಿ ಕರೆದುಕೊಂಡು ಇಂದು, ಶುಕ್ರವಾರ ಸಂಸತ್‌ ಸ್ಟ್ರೀಟ್‌ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್‌ … Continued

ದೆಹಲಿ ಜಲ ಮಂಡಳಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಎಎಪಿ ನಾಯಕ ಸತ್ಯೇಂದ್ರ ಜೈನ್ ಸೇರಿ 6 ಮಂದಿ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಜಲ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಜಲ ಮಂಡಳಿ (DJB) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಮಾರು 18 … Continued

ದೆಹಲಿ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ನಂಟಿರುವ ಉಗ್ರ ಸಂಘಟನೆ ಕೈವಾಡ: ವಿಶ್ವಸಂಸ್ಥೆ ವರದಿಯಲ್ಲಿ ಉಲ್ಲೇಖ

ನವದೆಹಲಿ: 2025ರ ನವೆಂಬರ್‌ನಲ್ಲಿ ದೆಹಲಿಯ ಕೆಂಪುಕೋಟೆ (ರೆಡ್‌ಫೋರ್ಟ್) ಸಮೀಪ ನಡೆದ ಸ್ಫೋಟದ ಹಿಂದೆ ಜಾಗತಿಕ ಭಯೋತ್ಪಾದಕ ಸಂಘಟನೆ ಅಲ್‌ಖೈದಾದ ಅಂಗಸಂಸ್ಥೆಯಾದ ಅಲ್‌ಖೈದಾ ಇನ್ ದಿ ಇಂಡಿಯನ್ ಸಬ್‌ಕಾಂಟಿನೆಂಟ್ (AQIS) ಕೈವಾಡವಿತ್ತು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ವಿಶ್ಲೇಷಣಾತ್ಮಕ ಬೆಂಬಲ ಮತ್ತು ನಿರ್ಬಂಧಗಳ ಮೇಲ್ವಿಚಾರಣಾ ತಂಡದ ವರದಿ ತಿಳಿಸಿದೆ. ಈ ದಾಳಿಯಲ್ಲಿ 11 ಮಂದಿ ಮೃತಪಟ್ಟಿದ್ದರು. … Continued

ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued

ಇ-ರಿಕ್ಷಾ ಬ್ಯಾಟರಿ ಸ್ಥಗಿತಗೊಳಿಸಬಲ್ಲ ಆ್ಯಪ್‌ಗಳ ತೆರವಿಗೆ ಗೂಗಲ್‌, ಆಪಲ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ: ಪ್ರಯಾಣಿಕರ ಸುರಕ್ಷತೆ, ದುರುಪಯೋಗ ಹಾಗೂ ವಿದ್ಯುತ್ ವಾಹನಗಳ (ಇವಿ) ಬ್ಯಾಟರಿ ನಿರ್ವಹಣಾ ವ್ಯವಸ್ಥೆಗಳಿಗೆ (Battery Management System–BMS) ಅನಧಿಕೃತ ಪ್ರವೇಶದ ಬಗ್ಗೆ ವ್ಯಕ್ತವಾಗಿರುವ ಗಂಭೀರ ಆತಂಕದ ಹಿನ್ನೆಲೆಯಲ್ಲಿ, ಇ-ರಿಕ್ಷಾ ಹಾಗೂ ಇತರ ವಿದ್ಯುತ್ ವಾಹನಗಳ ಬ್ಯಾಟರಿಗಳನ್ನು ದೂರದಿಂದಲೇ (ರಿಮೋಟ್ ಮೂಲಕ) ಸ್ಥಗಿತಗೊಳಿಸುವ ಸಾಮರ್ಥ್ಯ ಹೊಂದಿರುವುದಾಗಿ ಆರೋಪಿಸಲಾದ ಏಳು ಮೊಬೈಲ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ … Continued

ಭೀಕರ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ‘ಐಎಸ್‌ಐ’ ಬೆಂಬಲಿತ ಉಗ್ರ ಜಾಲ ಭೇದಿಸಿದ ಪೊಲೀಸರು : 7 ಮಂದಿ ಕುಖ್ಯಾತರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ವಲಯ) ಪ್ರದೇಶದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ (ISI) ಬೆಂಬಲದೊಂದಿಗೆ ರೂಪಿಸಲಾಗಿದ್ದ ಬೃಹತ್ ಅಂತಾರಾಷ್ಟ್ರೀಯ ಉಗ್ರ-ಅಪರಾಧ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಕಮ್ ಉಗ್ರ ಶಹಜಾದ್ ಭಟ್ಟಿ ಮತ್ತು ಆತನ ಸಹಚರ … Continued

ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued

ದೆಹಲಿ ಹೊಟೇಲ್‌ ಅಗ್ನಿ ದುರಂತ : ಐಸಿಯುನಲ್ಲಿದ್ದ ತಂದೆ ಸನಿಹ ಇರಲು ಹೊಟೇಲ್‌ನಲ್ಲಿ ತಂಗಿದ್ದ ಸಿಎ ಕುಟುಂಬದ 8 ಮಂದಿ ಸಾವು

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಫ್ಲರಿಶ್ ಸ್ಟೇ’ (Flourish Stay) ಹೋಟೆಲ್‌ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರು ಸೇರಿದಂತೆ ಕನಿಷ್ಠ 21 ಜನರು ಜೀವಂತವಾಗಿ ದಹನವಾಗಿದ್ದಾರೆ. ಮೃತರ ಪೈಕಿ 12 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ. ಗುರುಗ್ರಾಮದ ಸೆಕ್ಟರ್ 46 … Continued

ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued