ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued

ದೆಹಲಿಯಲ್ಲಿ ಫೆ.7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಪಾಲಿನ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ನಡೆಯುವ ಧರಣಿಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ. ಅಲ್ಲದೆ, ರಾಜ್ಯದ 138 … Continued

ಬಾಬರ್ ರಸ್ತೆ ನಾಮಫಲಕ ಅಳಿಸಿ ಅಯೋಧ್ಯಾ ಮಾರ್ಗ ಎಂಬ ಪೋಸ್ಟರ್ ಅಂಟಿಸಿದ ಹಿಂದೂ ಸೇನಾ ಕಾರ್ಯಕರ್ತರು…

ನವದೆಹಲಿ : ದೆಹಲಿಯಲ್ಲಿರುವ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ‘ಅಯೋಧ್ಯಾ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಹಿಂದೂ ಸೇನಾ ಕಾರ್ಯಕರ್ತರು ಅಂಟಿಸಿರುವುದು ಬೆಳಕಿಗೆ ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯಾ ರಸ್ತೆ ಎಂದು ಬದಲಾಯಿಸುವಂತೆ ಹಿಂದೂ ಸೇನಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈಗ ಬಾಬರ್ ರಸ್ತೆಯ ಫಲಕದ ಮೇಲೆ ಅಯೋಧ್ಯಾ ಮಾರ್ಗ ಎಂದು ಪೋಸ್ಟರ್ ಅನ್ನು ಅಂಟಿಸಿದ್ದಾರೆ. ಈ … Continued

ಅರವಿಂದ್ ಕೇಜ್ರಿವಾಲರನ್ನು ‘ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್’ ಎಂದು ಕರೆದ ಓವೈಸಿ, ತಿರುಗೇಟು ನೀಡಿದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂಘ ಪರಿವಾರದ ರಾಜಕೀಯವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್” ಎಂದು ಕರೆದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ದೆಹಲಿಯಲ್ಲಿ ಸುಂದರಕಾಂಡ ಪಠಣ ಕಾರ್ಯಕ್ರಮವನ್ನು … Continued

ಕಾಜಲ್ ಝಾ ಯಾರು..? ಇವಳ ₹ 100 ಕೋಟಿ ಮೌಲ್ಯದ ದೆಹಲಿ ಬಂಗಲೆ ಸೀಜ್‌ ಮಾಡಿದ ಪೊಲೀಸರು…

ನವದೆಹಲಿ: ಸ್ಕ್ರ್ಯಾಪ್ ಮೆಟಲ್ ಮಾಫಿಯಾ ಮತ್ತು ಗ್ಯಾಂಗ್‌ಸ್ಟರ್‌ ರವೀಂದ್ರ ನಗರ, ಅಲಿಯಾಸ್ ರವಿ ಕಾನಾ ವಿರುದ್ಧದ ಕಾರ್ಯಾಚರಣೆಯಲ್ಲಿ, ನೋಯ್ಡಾ ಪೊಲೀಸರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ₹200 ಕೋಟಿಗೂ ಹೆಚ್ಚು ಮೌಲ್ಯದ ಆತನ ಆಸ್ತಿಯನ್ನು ಯಶಸ್ವಿಯಾಗಿ ಸೀಲ್ ಮಾಡಿದ್ದಾರೆ. ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿದ ನೋಯ್ಡಾ ಪೊಲೀಸರು ರವಿ ಕಾನಾ ತನ್ನ ಗೆಳತಿ ಕಾಜಲ್ ಝಾಗೆ ಉಡುಗೊರೆಯಾಗಿ ನೀಡಿದ ₹ … Continued

ದೆಹಲಿಯಲ್ಲಿ ದಟ್ಟವಾದ ಮಂಜು, ಶೂನ್ಯ ಸಮೀಪ ಗೋಚರತೆ : 110 ವಿಮಾನಗಳು, 25 ರೈಲುಗಳ ಸಂಚಾರದ ಮೇಲೆ ಪರಿಣಾಮ

ನವದೆಹಲಿ: ಬುಧವಾರ ಬೆಳಗ್ಗೆ ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಗೋಚರತೆ ಕೇವಲ 50 ಮೀಟರಿಗೆ ಕುಸಿದಿದೆ. ಇದು ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 110 ಕ್ಕೂ ಹೆಚ್ಚು ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರಿವೆ. ದೆಹಲಿಗೆ ತೆರಳುವ 25 ರೈಲುಗಳು ವಿಳಂಬವಾಗಿವೆ ಎಂದು ಉತ್ತರ ರೈಲ್ವೆ ತಿಳಿಸಿದೆ. ಶೀತ ಅಲೆಯ … Continued

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ : ರಾಯಭಾರಿಗೆ ಬರೆದ ಪತ್ರ ಪತ್ತೆ

ನವದೆಹಲಿ: ಮಂಗಳವಾರ ಸಂಜೆ ಇಸ್ರೇಲ್ ರಾಯಭಾರಿ ಕಚೇರಿ ಬಳಿ “ಸ್ಫೋಟ”ದ ಶಬ್ದ ಕೇಳಿಬರುತ್ತಿರುವ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದಿದೆ. ದೆಹಲಿ ಪೊಲೀಸರ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಆದರೆ ಅವರು ಸ್ಥಳವನ್ನು ಹುಡುಕಿದಾಗ ಮತ್ತು ಅನುಮಾನಾಸ್ಪದವಾಗಿ ಏನೂ ಸಿಗದ ನಂತರ ಅಲ್ಲಿಂದ ತೆರಳಿದೆ ಎಂದು ವರದಿಯಾಗಿದೆ. ಆದಾಗ್ಯೂ, ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ದೂರದಲ್ಲಿರುವ … Continued

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯಕ್ಕೆ ಬರ ಪರಿಹಾರ ಹಣ ತುರ್ತು ಬಿಡುಗಡೆಗೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಡಿಸೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಪರಿಹಾರದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬರ ಪರಿಸ್ಥಿತಿಯ ಕುರಿತು … Continued

ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ : 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯಲ್ಲಿ ಅಪರಾಧ ನಡೆದ ಸುಮಾರು 15 ವರ್ಷಗಳ ನಂತರ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ, ಐದನೇ ಅಪರಾಧಿ ಈಗಾಗಲೇ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾನೆ. ಎಲ್ಲ ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್ ಮಲಿಕ್, ಅಜಯಕುಮಾರ ಅವರಿಗೆ ಜೀವಾವಧಿ … Continued

ಕ್ರೂರ ಹತ್ಯೆ….: 17 ವರ್ಷದ ಹುಡುಗನನ್ನು 60ಕ್ಕೂ ಹೆಚ್ಚು ಬಾರಿ ಇರಿದ ಕೊಂದ 16 ವರ್ಷದ ಹುಡುಗ…!

ನವದೆಹಲಿ: ಮಂಗಳವಾರ ರಾತ್ರಿ ದೆಹಲಿಯ ರಸ್ತೆಯಲ್ಲಿ 17 ವರ್ಷದ ಯುವಕನೊಬ್ಬನಿಗೆ ಕಿರಿಯ ಹುಡುಗನೊಬ್ಬ ಹಲವು ಬಾರಿ ಇರಿದು ಸಾಯಿಸಿದ್ದಾನೆ. ಅತ್ಯಂತ ಆಘಾತಕಾರಿ ವೀಡಿಯೊ ದೃಶ್ಯಗಳಲ್ಲಿ ಅಪ್ರಾಪ್ತ ಬಾಲಕ ದೇಹದ ಪಕ್ಕದಲ್ಲಿ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. 16 ವರ್ಷದ ಬಾಲಕ 17 ವರ್ಷದ ಹುಡುಗನಿಗೆ ಕನಿಷ್ಠ 60 ಬಾರಿ ಇರಿದಿದ್ದಾನೆ, ಆತನ ಕುತ್ತಿಗೆಯನ್ನು ಕತ್ತರಿಸಲು ಪ್ರಯತ್ನಿಸಿದ್ದಾನೆ, ಆತನ … Continued