ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

ನವದೆಹಲಿ : ರಾಮಲೀಲಾದಲ್ಲಿ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಶಹದಾರದಲ್ಲಿರುವ ಜೈ ಶ್ರೀ ರಾಮಲೀಲಾ ವಿಶ್ವಕರ್ಮ ನಗರದಲ್ಲಿ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಪೂರ್ವ ದೆಹಲಿಯ ನಿವಾಸಿ ಸುಶೀಲ ಕೌಶಿಕ (45) ಅವರು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಆಭರಣಗಳಂತೆ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued

ಸಿಪಿಐ(ಎಂ) ಮುಖಂಡ ಸೀತಾರಾಮ ಯೆಚೂರಿ ಸ್ಥಿತಿ ʼಚಿಂತಾನಜಕʼ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಪ್ರಸ್ತುತ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ನವದೆಹಲಿಯಲ್ಲಿ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಮಂಗಳವಾರ ತಿಳಿಸಿದೆ. 72 ವರ್ಷದ ರಾಜಕಾರಣಿ ಯೆಚೂರಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಮತ್ತು ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ … Continued

ಶಾಲೆಗೆ ಪಿಸ್ತೂಲ್ ತಂದ 6ನೇ ತರಗತಿ ವಿದ್ಯಾರ್ಥಿ…!

ನವದೆಹಲಿ: ಆಘಾತಕಾರಿ ಘಟನೆಯಲ್ಲಿ, ಶಾಲೆಯ ಆಡಳಿತವು 10 ವರ್ಷದ ಮಗುವಿನ ಬ್ಯಾಗ್‌ ನಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ನಂತರ ಅವರು ಅದನ್ನು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಇದು ಆಟಿಕೆ ಎಂದು ಭಾವಿಸಿರುವುದಾಗಿ ಬಾಲಕ ಪೊಲೀಸ್ ತಂಡಕ್ಕೆ ತಿಳಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಶನಿವಾರ ದೀಪಕ ವಿಹಾರ್ ಪ್ರದೇಶದ ಖಾಸಗಿ ಶಾಲೆಯಲ್ಲಿ ಈ … Continued

ಬಾಂಗ್ಲಾದೇಶದಲ್ಲಿ ದಂಗೆ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ದೆಹಲಿಯ ಬಳಿ ಬಂದಿಳಿದ ಶೇಖ್ ಹಸೀನಾ ; ಅಜಿತ ದೋವಲ್ ಭೇಟಿ

ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಅವರು ಸೋಮವಾರ ಸಂಜೆ ದೆಹಲಿಯಿಂದ ಸುಮಾರು 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ. ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದರು. ಕೆಲವು ಗಂಟೆಗಳ ಹಿಂದೆ 76 ವರ್ಷ ವಯಸ್ಸಿನ ಹಾಗೂ ಐದು ಬಾರಿ ಬಾಂಗ್ಲಾದೇಶದ … Continued

ನೀತಿ ಆಯೋಗದ ಸಭೆಗೆ ವಿಪಕ್ಷಗಳ 7 ಸಿಎಂಗಳು ಗೈರು : ಅಸಮಾಧಾನದಿಂದ ಅರ್ಧದಲ್ಲೇ ಎದ್ದು ಹೋದ ಮಮತಾ ಬ್ಯಾನರ್ಜಿ

ನವದೆಹಲಿ : ಇಂದಿನಿಂದ(ಜುಲೈ 27) ನಡೆಯುತ್ತಿರುವ ನೀತಿ ಆಯೋಗದ ೯ನೇ ಗವರ್ನಿಂಗ್ ಕೌನ್ಸಿಲ್ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ತಾರತಮ್ಯದ ಆರೋಪ ಹೊರಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಭೆಯಿಂದ ಅರ್ಧದಲ್ಲೇ ಎದ್ದು ಹೊರಬಂದಿದ್ದಾರೆ. ನನಗೆ ಮಾತನಾಡಲು ಸಮಯ ನೀಡಲಿಲ್ಲ ಹಾಗೂ ನನ್ನ ಮೈಕ್ ಅನ್ನು ಆಫ್ ಮಾಡಲಾಯಿತು ಎಂದು ಸಭೆಯಿಂದ ಹೊರಬಂದ ನಂತರ … Continued

ಅಸಾದುದ್ದೀನ್ ಒವೈಸಿ ಮನೆಗೆ ಕಪ್ಪು ಮಸಿ ಎರಚಿದ ದುಷ್ಕರ್ಮಿಗಳು; ಇದಕ್ಕೆ ʼಹೆದರಲ್ಲ’ ಎಂದ ಸಂಸದ

ನವದೆಹಲಿ:ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿಯ ಅಧಿಕೃತ ನಿವಾಸವನ್ನು ಗುರುವಾರ (ಜೂನ್ 27) ಕೆಲವು ಅಪರಿಚಿತ ದುಷ್ಕರ್ಮಿಗಳು ಕಪ್ಪು ಶಾಯಿ ಎರಚಿದ್ದಾರೆ. ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಎಕ್ಸ್ ಪೋಸ್ಟ್ ಮೂಲಕ ಈ ಮಾಹಿತಿಯನ್ನು ನೀಡಿದ್ದಾರೆ. .ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ ಕೂಗಿದ್ದಕ್ಕಾಗಿ ಎಐಎಂಐಎಂ ಸಂಸದ ಕಳೆದ ಕೆಲವು … Continued