26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನ ಅಮೆರಿಕದಿಂದ ದೆಹಲಿಗೆ ತಂದ ವಿಮಾನ ; ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಬಂಧನ

ನವದೆಹಲಿ: ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಸಂಚಿನಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತದ ಮೋಸ್ಟ್‌ ವಾಂಟೆಡ್‌ ವ್ಯಕ್ತಿ ತಹವ್ವೂರ್ ಹುಸೇನ್ ರಾಣಾನನ್ನು ಅಮೆರಿಕದಿಂದ ದೆಹಲಿಗೆ ಕರೆತರಲಾಗಿದೆ. ಆತನನ್ನು ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಯಿತು. ವಿಮಾನ ದೆಹಲಿಯಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆಯೇ 64 ವರ್ಷದ ತಹವ್ವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಲ್ಯಾಂಡಿಂಗ್ … Continued

ಆರೋಗ್ಯದಲ್ಲಿ ಏರುಪೇರು : ಲಾಲು ಪ್ರಸಾದ ಯಾದವ್ ಆಸ್ಪತ್ರೆಗೆ ದಾಖಲು

ಪಾಟ್ನಾ: ಆರ್‌ಜೆಡಿ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್‌ ಅವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಿ ನಂತರ ಬುಧವಾರ ದೆಹಲಿಗೆ ಕರೆದೊಯ್ದು ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿದೆ. 76 ವರ್ಷದ ನಾಯಕನನ್ನು ಎಐಐಎಂಎಸ್‌ನ ಕಾರ್ಡಿಯಾಲಜಿ ಪ್ರಾಧ್ಯಾಪಕ ಡಾ ರಾಕೇಶ ಯಾದವ್ ಅವರ ಕಾರ್ಡಿಯೋ-ನ್ಯೂರೋ ಸೆಂಟರ್‌ನ ಕಾರ್ಡಿಯೋ ಕ್ರಿಟಿಕಲ್ ಕೇರ್ ಘಟಕಕ್ಕೆ ದಾಖಲಿಸಲಾಗಿದೆ … Continued

ಎಲ್ಲಾ ನಕಲಿ ಇಲ್ಲಿ… | ಎಕ್ಸಿಡೆಂಟ್‌ ನಕಲಿ…ಅಂತ್ಯಕ್ರಿಯೆ ನಕಲಿ…! 2 ಕೋಟಿ ವಿಮೆ ಹಣ ಪಡೆಯಲು ಮಗ ಸತ್ತಿದ್ದಾನೆಂದು ಬಿಂಬಿಸಿ ಸಿಕ್ಕಿಬಿದ್ದರು..!

ನವದೆಹಲಿ: ವಿಮಾ ಕಂಪನಿ(Insurance Company)ಯಿಂದ 2 ಕೋಟಿ ರೂ. ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ತನ್ನ ಮಗನನ್ನು ಸತ್ತಿದ್ದಾನೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಜಾಫ್‌ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಈ ಸಂಬಂಧ ನಕಲಿ ಮರಣ ಪ್ರಮಾಣ ಪತ್ರವನ್ನೂ ಸಿದ್ಧಪಡಿಸಲಾಗಿತ್ತು, ನಕಲಿ ಅಂತ್ಯಕ್ರಿಯೆಯನ್ನೂ … Continued

ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣ; ಎಂಜಿನಿಯರ್ ರಶೀದ್ ಜಾಮೀನು ಅರ್ಜಿ ವಜಾ

ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಲೋಕಸಭಾ ಸಂಸದ ಎಂಜಿನಿಯರ್ ರಶೀದ್ (Engineer Rashid) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಎಂಜಿನಿಯರ್ ರಶೀದ್ ಎಂದೇ 2017ರ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ 2019 ರಿಂದ ತಿಹಾರ್‌ ಜೈಲಿನಲ್ಲಿದ್ದಾನೆ. 2017ರಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸಿನ … Continued

ಉಪರಾಷ್ಟ್ರಪತಿ ಜಗದೀಪ ಧನಕರ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ ಧನಕರ (73) ಅವರು ಅಸ್ವಸ್ಥತೆ ಮತ್ತು ಎದೆ ನೋವಿನ ಅನುಭವವಾದ ನಂತರ ಭಾನುವಾರ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಕ್ರಿಟಿಕಲ್ ಕೇರ್ ಯುನಿಟ್‌ನಲ್ಲಿ (CCU) ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ ಅವರ … Continued

ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ : ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪರ್ವೇಶ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರೂ ನಾಯಕರ ಹೆಸರನ್ನು ಘೋಷಿಸಲಾಯಿತು.ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಪೈಕಿ ರೇಖಾ ಗುಪ್ತಾ ಅವರು ಏಕೈಕ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ … Continued

ಪ್ರಧಾನಿ ಮೋದಿ ಭೇಟಿಯಾದ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಬಣ್ಣಿಸಿದ್ದಾರೆ. ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ … Continued

ವೀಡಿಯೊ..| ಮಗುವನ್ನು ಎದೆಗವಚಿಕೊಂಡು ಲಾಠಿ ಹಿಡಿದು ದೆಹಲಿ ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ನಿಯಂತ್ರಿಸುತ್ತಿರುವ ಮಹಿಳಾ ಕಾನ್​ಸ್ಟೆಬಲ್…!

ನವದೆಹಲಿ: ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ಮಹಿಳಾ ಕಾನ್‌ಸ್ಟೆಬಲ್ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಗುವನ್ನು ಎದೆಗವಚಿಕೊಂಡು ಪ್ರಯಾಣಿಕರ ರಕ್ಷಣೆಗಾಗಿ ಗಸ್ತು ತಿರುಗುತ್ತಿರುವ ವೀಡಿಯೊ ಎಲ್ಲೆಡೆ ವೈರಲ್ ಆಗಿದೆ. ಮಗುವನ್ನು ಎದೆಗಚಿಕೊಂಡು ಒಂದು ಕೈಯಲ್ಲಿ ಲಾಠಿ ಹಿಡಿದು ಜನಸಂದಣಿಯನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದಾರೆ. “ಅವಳು ಕೆಲಸ ಮಾಡುತ್ತಾಳೆ, ಅವಳು ಪೋಷಿಸುತ್ತಾಳೆ, ಅವಳು ಎಲ್ಲವನ್ನೂ ಮಾಡುತ್ತಾಳೆ… ತಾಯಿ, … Continued

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 11 ಮಹಿಳೆಯರು, 4 ಮಕ್ಕಳು ಸೇರಿ 18 ಮಂದಿ ಸಾವು

ನವದೆಹಲಿ: ಮಹಾಕುಂಭಕ್ಕೆ ಹೋಗುವ ಎರಡು ರೈಲುಗಳು ತಡವಾಗಿ ಬಂದಿದ್ದರಿಂದ ಜನದಟ್ಟಣೆಯಿಂದ ಕೂಡಿದ್ದ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಹಠಾತ್ ನೂಕು ನುಗ್ಗಲು ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಕೀಯ ಅಧಿಕಾರಿ ಸಾವುಗಳನ್ನು ದೃಢಪಡಿಸಿದ್ದಾರೆ. ಘಟನೆಯಲ್ಲಿ … Continued

ಸೌರ ವಿದ್ಯುತ್‌ ಚಾಲಿತ 3 ಟವರ್‌ಗಳು, 12 ಅಂತಸ್ತಿನ ಕಟ್ಟಡ, 300 ಕೊಠಡಿಗಳು, ಆಸ್ಪತ್ರೆ, ಸಭಾಂಗಣ ; ದೆಹಲಿಯಲ್ಲಿ 150 ಕೋಟಿ ರೂ.ವೆಚ್ಚದಲ್ಲಿ ನವೀಕರಿಸಿದ ಆರ್‌ ಎಸ್‌ ಎಸ್ ಕಚೇರಿ

ನವದೆಹಲಿ: 3.75 ಎಕರೆಯಲ್ಲಿ ಹರಡಿರುವ ಆರ್‌ಎಸ್‌ಎಸ್ ಕಚೇರಿಯು ಮೂರು 12 ಅಂತಸ್ತಿನ 3 ಎತ್ತರದ ಕಟ್ಟಡಗಳು, 300 ಕೊಠಡಿಗಳಿಂದ ಕೂಡಿದೆ. ದೆಹಲಿಯ ಜಾಂಡೆವಾಲನ್ ಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೊಸ ಕಚೇರಿಯು ಆರ್‌ಎಸ್‌ಎಸ್‌ನ ಭವಿಷ್ಯದ ಕಾರ್ಯಚಟುವಟಿಕೆಗಳ ನೀಲನಕ್ಷೆಗಳನ್ನು ರಚಿಸುವ ಶಕ್ತಿ ಕೇಂದ್ರವಾಗಲಿದೆ. ಸುಮಾರು 75,000 ಪ್ರೇರಿತ ಸ್ವಯಂಸೇವಕರು ಮತ್ತು ಕಾರ್ಯಕರ್ತರ ಸೇನೆಯಿಂದ 150 ಕೋಟಿ ರೂಪಾಯಿಗಳ … Continued