ಇಂಧನ ಉಳಿತಾಯಕ್ಕೆ ದೆಹಲಿ ಸರ್ಕಾರದ ಪ್ಲಾನ್: ವಾರದಲ್ಲಿ 2 ದಿನ ‘ವರ್ಕ್ ಫ್ರಂ ಹೋಮ್’, 1 ದಿನ ಮೆಟ್ರೋ ಪ್ರಯಾಣ ಕಡ್ಡಾಯ

ನವದೆಹಲಿ: ಜಾಗತಿಕ ಅನಿಶ್ಚಿತತೆ ಮತ್ತು ಹೆಚ್ಚುತ್ತಿರುವ ಇಂಧನ ದರಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಓಗೊಟ್ಟಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ದೆಹಲಿಯಲ್ಲಿ ಕಠಿಣ ಇಂಧನ ಸಂರಕ್ಷಣಾ ಕ್ರಮಗಳನ್ನು ಪ್ರಕಟಿಸಿದ್ದಾರೆ. ಸರ್ಕಾರಿ ಕಚೇರಿಗಳಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳು ಶುಕ್ರವಾರದಿಂದ (ಮೇ 15) … Continued

ನಿವಾಸದಲ್ಲಿ ನ್ಯಾಯಾಧೀಶರು ಶವವಾಗಿ ಪತ್ತೆ ; ಆತ್ಮಹತ್ಯೆಯ ಶಂಕೆ

ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೃತರನ್ನು ಅಮನ್ ಕುಮಾರ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಈಶಾನ್ಯ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ … Continued

ಕ್ಷುಲ್ಲಕ ಜಗಳಕ್ಕೆ ಪೊಲೀಸನಿಂದ ಗುಂಡಿನ ದಾಳಿ: ಫುಡ್ ಡೆಲಿವರಿ ಬಾಯ್ ಎದೆ ಸೀಳಿದ ಬುಲೆಟ್, ಮತ್ತೊಬ್ಬನಿಗೆ ಗಂಭೀರ ಗಾಯ

ನವದೆಹಲಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ದೆಹಲಿ ಪೊಲೀಸ್ ಪೇದೆಯೊಬ್ಬ ಫುಡ್ ಡೆಲಿವರಿ ಏಜೆಂಟ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಭಾನುವಾರ ದ್ವಾರಕಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿವೆ. ದ್ವಾರಕಾದ ಜಾಫರ್ಪುರ ಕಲನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ರೂಪೇಶ … Continued

ಕೆಲಸದಿಂದ ತೆಗೆದಿದ್ದಕ್ಕೆ ಸೇಡು: ಐಆರ್‌ಎಸ್ ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಮನೆಯ ಮಾಜಿ ಉದ್ಯೋಗಿ

ನವದೆಹಲಿ: ದೇಶದ ರಾಜಧಾನಿಯ ಈಸ್ಟ್ ಆಫ್ ಕೈಲಾಶ್ ಪ್ರದೇಶದಲ್ಲಿ ಹಿರಿಯ ಅಧಿಕಾರಿಯೊಬ್ಬರ ಪುತ್ರಿ, 22 ವರ್ಷದ ಐಐಟಿ ಪದವೀಧರೆಯನ್ನು ಅತ್ಯಾಚಾರಗೈದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸಕ್ಕಿದ್ದ 19 ವರ್ಷದ ರಾಹುಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿ ದೆಹಲಿಯ ಪ್ರತಿಷ್ಠಿತ ಡಿಪಿಎಸ್ ಆರ್‌ಕೆ ಪುರಂ ಶಾಲೆಯಲ್ಲಿ ವ್ಯಾಸಂಗ … Continued

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್ಸಿಗೆ ಸರ್ಕಾರದ ಸೂಚನೆ

ನವದೆಹಲಿ: ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ದೆಹಲಿಯ ’24, ಅಕ್ಬರ್ ರಸ್ತೆ’ ಬಂಗಲೆಯನ್ನು ಶನಿವಾರದೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕಳೆದ ವರ್ಷವಷ್ಟೇ ಕಾಂಗ್ರೆಸ್ ಪಕ್ಷವು ಕೋಟ್ಲಾ ಮಾರ್ಗದಲ್ಲಿರುವ ತನ್ನ … Continued

ರೀಲ್ಸ್ ಹುಚ್ಚು | ಚಲಿಸುವಾಗಲೇ ಬಸ್, ರಿಕ್ಷಾ ಬಾಗಿಲು ತೆರೆದು ಪುಂಡಾಟಿಕೆ : ವೀಡಿಯೊ ವೈರಲ್‌ ; ಯುವಕನ ಬಂಧನ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ‘ಲೈಕ್ಸ್’ ಮತ್ತು ‘ಶೇರ್’ಗಳಿಗಾಗಿ ಪ್ರಾಣದ ಹಂಗು ತೊರೆದು ಸ್ಟಂಟ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹದ್ದೇ ಒಂದು ಅಪಾಯಕಾರಿ ಸಾಹಸಕ್ಕೆ ಕೈಹಾಕಿ, ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಖಜೂರಿ ಖಾಸ್ ನಿವಾಸಿಯಾದ ತುಷಾರ್ ಪುನಿಯಾ ಬಂಧಿತ ಆರೋಪಿ. ಫೆಬ್ರವರಿ 16 ರಂದು … Continued

ಉದ್ಯಮಿಯನ್ನು ಹೆಲ್ಮೆಟ್‌ನಿಂದ ಹೊಡೆದು ಬರ್ಬರವಾಗಿ ಕೊಂದ ಮೂವರು ಫುಡ್ ಡೆಲಿವರಿ ರೈಡರ್‌ಗಳು

ನವದೆಹಲಿ: ದೆಹಲಿಯ ಹೃದಯಭಾಗವಾದ ಕನ್ನಾಟ್ ಪ್ಲೇಸ್‌ನಲ್ಲಿ ಪಾರ್ಟಿಗೆ ತೆರಳಿದ್ದ 36 ವರ್ಷದ ಉದ್ಯಮಿಯೊಬ್ಬರನ್ನು ಮೂವರು ಫುಡ್ ಡೆಲಿವರಿ ರೈಡರ್‌ಗಳು ಬರ್ಬರವಾಗಿ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3ರ ರಾತ್ರಿ ಈ ಘಟನೆ ನಡೆದಿದೆ. ಮೃತ ಉದ್ಯಮಿಯನ್ನು ಶಿವಂ ಗುಪ್ತಾ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, … Continued

ಸೈಬರ್ ವಂಚಕರ ಜಾಲಕ್ಕೆ ಬಿದ್ದ ಎನ್‌ಆರ್‌ಐ ದಂಪತಿ; ಬರೋಬ್ಬರಿ 14.85 ಕೋಟಿ ರೂ. ಲೂಟಿ…!

ನವದೆಹಲಿ: ದೆಹಲಿಯಲ್ಲಿ ವಾಸವಾಗಿರುವ ವೃದ್ಧ ಎನ್‌ಆರ್‌ಐ ವೈದ್ಯ ದಂಪತಿಯನ್ನು ಸರಿಸುಮಾರು ಎರಡು ವಾರಗಳ ಕಾಲ ‘ಡಿಜಿಟಲ್ ಅರೆಸ್ಟ್’ (Digital Arrest) ಹೆಸರಿನಲ್ಲಿ ಬಂಧನದಲ್ಲಿರಿಸಿ, ಬರೋಬ್ಬರಿ 14.85 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಡಾ. ಓಂ ತನೇಜಾ ಮತ್ತು ಅವರ ಪತ್ನಿ ಡಾ. ಇಂದಿರಾ ತನೇಜಾ ಅವರು ಸುಮಾರು 48 ವರ್ಷಗಳ ಕಾಲ ಅಮೆರಿಕಾದಲ್ಲಿ … Continued

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ಅವರನ್ನು ಮಂಗಳವಾರ ದೆಹಲಿಯ ಸರ್ ಗಂಗಾ ರಾಮ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.  ಪ್ರಸ್ತುತ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ ಎಂದು ವರದಿ ತಿಳಿಸಿದೆ. ದೀರ್ಘಕಾಲದ ಕೆಮ್ಮಿನ ಸಮಸ್ಯೆಗಳನ್ನು ಎದುರಿಸುತ್ತಿರುವ 79 ವರ್ಷದ … Continued

ದೆಹಲಿಯಲ್ಲಿ ದಟ್ಟ ಮಂಜು: 128 ವಿಮಾನಗಳ ಸಂಚಾರ ರದ್ದು, ರಾಷ್ಟ್ರ ರಾಜಧಾನಿಗೆ ‘ರೆಡ್ ಅಲರ್ಟ್’ ಘೋಷಣೆ

ನವದೆಹಲಿ: ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜಿನಿಂದಾಗಿ ವಿಮಾನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಇದುವರೆಗೆ ಸುಮಾರು 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಗೆ ನೀಡಿದ್ದ ‘ಆರೆಂಜ್ ಅಲರ್ಟ್’ ಅನ್ನು ಮಂಗಳವಾರದವರೆಗೆ ‘ರೆಡ್ ಅಲರ್ಟ್’ ಆಗಿ ಬದಲಾಯಿಸಿದೆ. ದೆಹಲಿ ಮಾತ್ರವಲ್ಲದೆ, ಉತ್ತರ ಮತ್ತು ಈಶಾನ್ಯ ಭಾರತದ ಇತರ ಭಾಗಗಳಾದ ಪಂಜಾಬ್ … Continued