ಜೂ.6 ರಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ ದಿಪ್ಕೆ ಭಾರತಕ್ಕೆ ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

 ನವದೆಹಲಿ: ದೇಶದಲ್ಲಿ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳು ಹಾಗೂ ವಿವಾದಗಳಿಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಜಿರಳೆ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರು ಜೂನ್ 6 ರಂದು ದೆಹಲಿಯಲ್ಲಿ ಬೃಹತ್ … Continued

ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ಉತ್ತರಾಧಿಕಾರಿ ಆಯ್ಕೆ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಬದಲು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ … Continued

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಗುರುವಾರ ಪಕ್ಷದ ಸಂಘಟನಾತ್ಮಕ ವಿಭಾಗದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದ್ದು, ದೇಶದ ಪ್ರಮುಖ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ತ್ರಿಪುರಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಪಕ್ಷದ … Continued

ಇಂಧನ ಉಳಿತಾಯಕ್ಕೆ ದೆಹಲಿ ಸರ್ಕಾರದ ಪ್ಲಾನ್: ವಾರದಲ್ಲಿ 2 ದಿನ ‘ವರ್ಕ್ ಫ್ರಂ ಹೋಮ್’, 1 ದಿನ ಮೆಟ್ರೋ ಪ್ರಯಾಣ ಕಡ್ಡಾಯ

ನವದೆಹಲಿ: ಜಾಗತಿಕ ಅನಿಶ್ಚಿತತೆ ಮತ್ತು ಹೆಚ್ಚುತ್ತಿರುವ ಇಂಧನ ದರಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಓಗೊಟ್ಟಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ದೆಹಲಿಯಲ್ಲಿ ಕಠಿಣ ಇಂಧನ ಸಂರಕ್ಷಣಾ ಕ್ರಮಗಳನ್ನು ಪ್ರಕಟಿಸಿದ್ದಾರೆ. ಸರ್ಕಾರಿ ಕಚೇರಿಗಳಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳು ಶುಕ್ರವಾರದಿಂದ (ಮೇ 15) … Continued

ನಿವಾಸದಲ್ಲಿ ನ್ಯಾಯಾಧೀಶರು ಶವವಾಗಿ ಪತ್ತೆ ; ಆತ್ಮಹತ್ಯೆಯ ಶಂಕೆ

ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೃತರನ್ನು ಅಮನ್ ಕುಮಾರ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಈಶಾನ್ಯ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ … Continued

ಕ್ಷುಲ್ಲಕ ಜಗಳಕ್ಕೆ ಪೊಲೀಸನಿಂದ ಗುಂಡಿನ ದಾಳಿ: ಫುಡ್ ಡೆಲಿವರಿ ಬಾಯ್ ಎದೆ ಸೀಳಿದ ಬುಲೆಟ್, ಮತ್ತೊಬ್ಬನಿಗೆ ಗಂಭೀರ ಗಾಯ

ನವದೆಹಲಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ದೆಹಲಿ ಪೊಲೀಸ್ ಪೇದೆಯೊಬ್ಬ ಫುಡ್ ಡೆಲಿವರಿ ಏಜೆಂಟ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಭಾನುವಾರ ದ್ವಾರಕಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿವೆ. ದ್ವಾರಕಾದ ಜಾಫರ್ಪುರ ಕಲನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ರೂಪೇಶ … Continued

ಕೆಲಸದಿಂದ ತೆಗೆದಿದ್ದಕ್ಕೆ ಸೇಡು: ಐಆರ್‌ಎಸ್ ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಮನೆಯ ಮಾಜಿ ಉದ್ಯೋಗಿ

ನವದೆಹಲಿ: ದೇಶದ ರಾಜಧಾನಿಯ ಈಸ್ಟ್ ಆಫ್ ಕೈಲಾಶ್ ಪ್ರದೇಶದಲ್ಲಿ ಹಿರಿಯ ಅಧಿಕಾರಿಯೊಬ್ಬರ ಪುತ್ರಿ, 22 ವರ್ಷದ ಐಐಟಿ ಪದವೀಧರೆಯನ್ನು ಅತ್ಯಾಚಾರಗೈದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸಕ್ಕಿದ್ದ 19 ವರ್ಷದ ರಾಹುಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿ ದೆಹಲಿಯ ಪ್ರತಿಷ್ಠಿತ ಡಿಪಿಎಸ್ ಆರ್‌ಕೆ ಪುರಂ ಶಾಲೆಯಲ್ಲಿ ವ್ಯಾಸಂಗ … Continued

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್ಸಿಗೆ ಸರ್ಕಾರದ ಸೂಚನೆ

ನವದೆಹಲಿ: ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ದೆಹಲಿಯ ’24, ಅಕ್ಬರ್ ರಸ್ತೆ’ ಬಂಗಲೆಯನ್ನು ಶನಿವಾರದೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕಳೆದ ವರ್ಷವಷ್ಟೇ ಕಾಂಗ್ರೆಸ್ ಪಕ್ಷವು ಕೋಟ್ಲಾ ಮಾರ್ಗದಲ್ಲಿರುವ ತನ್ನ … Continued

ರೀಲ್ಸ್ ಹುಚ್ಚು | ಚಲಿಸುವಾಗಲೇ ಬಸ್, ರಿಕ್ಷಾ ಬಾಗಿಲು ತೆರೆದು ಪುಂಡಾಟಿಕೆ : ವೀಡಿಯೊ ವೈರಲ್‌ ; ಯುವಕನ ಬಂಧನ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ‘ಲೈಕ್ಸ್’ ಮತ್ತು ‘ಶೇರ್’ಗಳಿಗಾಗಿ ಪ್ರಾಣದ ಹಂಗು ತೊರೆದು ಸ್ಟಂಟ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹದ್ದೇ ಒಂದು ಅಪಾಯಕಾರಿ ಸಾಹಸಕ್ಕೆ ಕೈಹಾಕಿ, ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಖಜೂರಿ ಖಾಸ್ ನಿವಾಸಿಯಾದ ತುಷಾರ್ ಪುನಿಯಾ ಬಂಧಿತ ಆರೋಪಿ. ಫೆಬ್ರವರಿ 16 ರಂದು … Continued