ಸಿಡಿ ಪ್ರಕರಣ : ದೆಹಲಿಯಲ್ಲಿ ಎಸ್‍ಐಟಿ ಹುಡುಕಾಟ

ಬೆಂಗಳೂರು: ಸಿಡಿ ಪ್ರಕರಣದ ಕಿಂಗ್‍ಪಿನ್‍ಗಳು ಎನ್ನಲಾದ ಇಬ್ಬರು ವ್ಯಕ್ತಿಗಳು ಹಾಗೂ ಆ ಯುವತಿ ದೆಹಲಿಯಲ್ಲಿ ಇರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಎಸ್‍ಐಟಿ ಪೊಲೀಸರು ದೆಹಲಿ ಹಾಗೂ ಸುತ್ತಮುತ್ತ ಶೋಧ ನಡೆಸುತ್ತಿದ್ದಾರೆ. ಕಿಂಗ್‍ಪಿನ್ ಎಂದು ಹೇಳಲಾದ ವ್ಯಕ್ತಿ ಬುಧವಾರ ವಿಡಿಯೋ ತುಣುಕು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋವನ್ನು ದೆಹಲಿಯಿಂದಲೇ ಅಪ್‍ಲೋಡ್ ಮಾಡಲಾಗಿದೆ ಎಂಬುದು ಎಸ್‍ಐಟಿ ಶಂಕೆ. ಈ ಹಿನ್ನೆಲೆಯಲ್ಲಿ … Continued

ವಿಶ್ವದ ಅತ್ಯಂತ ಕಲುಷಿತ ರಾಜಧಾನಿ: ದೆಹಲಿ ಹ್ಯಾಟ್ರಿಕ್‌ ಸಾಧನೆ !!

ವಿಶ್ವದ ಅತ್ಯಂತ ಮಲೀನ ರಾಜಧಾನಿ ಎಂದು ಸತತ ೩ನೇ ಬಾರಿ ಕುಖ್ಯಾತಿಗೆ ಪಾತ್ರವಾಗಿದೆ. ಸ್ವಿಸ್‌ನ ಐಕ್ಯೂ ಕೇರ್‌ ನಡೆಸಿದ ಸಂಶೋಧನೆಯಲ್ಲಿ ಶ್ವಾಸಕೋಶದ ಹಾನಿಕಾರಕ ವಾಯುಗಾಮಿ ಕಣಗಳ ಸಾಂದ್ರತೆಯ ಆಧಾರದ ಮೇಲೆ ವಾಯುವಿನ ಗುಣಮಟ್ಟವನ್ನು ಪಿಎಂ೨.೫ ರಂದು ಗುರುತಿಸಲಾಗಿದೆ. 106 ದೇಶಗಳಿಗೆ ದತ್ತಾಂಶವನ್ನು ಸಂಗ್ರಹಿಸಿದ ಸಂಸ್ಥೆ 2020 ರ ವಿಶ್ವ ವಾಯು ಗುಣಮಟ್ಟ ವರದಿಯ ಪ್ರಕಾರ, ವಿಶ್ವದ … Continued

ಐಕ್ಯೂಏರ್ ವರದಿ:ಸತತ ಮೂರನೇ ವರ್ಷವೂ ದೆಹಲಿಗೆ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಕುಖ್ಯಾತಿ…!

2020ರಲ್ಲಿ ಸತತ ಮೂರನೇ ವರ್ಷವೂ ದೆಹಲಿಯು ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎಂಬ ಕುಖ್ಯಾತಿ ಪಡೆದಿದೆ. ಸ್ವಿಸ್ ಗುಂಪಿನ ಐಕ್ಯೂಏರ್ (IQAir,) ಅಧ್ಯಯನ ವರದಿ ಸತತ ಮೂರನೇ ವರ್ಷವೂ ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎಂದು ಹೇಳಿದೆ. ಶ್ವಾಸಕೋಶದ ಹಾನಿಕಾರಕ ವಾಯುಗಾಮಿ ಕಣಗಳ ಸಾಂದ್ರತೆಯ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುತ್ತದೆ. ವಾಯು ಗುಣಮಟ್ಟದ ಮಟ್ಟವನ್ನು … Continued

ದೆಹಲಿ ಬಾಟ್ಲಾ ಎನ್‌ಕೌಂಟರ್‌ ಪ್ರಕರಣ: ಉಗ್ರ ಅರಿಜ್‌ ಖಾನಗೆ ಮರಣದಂಡನೆ

    ನವ ದೆಹಲಿ: 2008 ರ ಬಾಟ್ಲಾ ಹೌಸ್ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಮತ್ತು ಇತರ ಅಪರಾಧಗಳಿಗಾಗಿ ದೆಹಲಿ ನ್ಯಾಯಾಲಯ ಸೋಮವಾರ ಉಗ್ರ ಅರಿಜ್ ಖಾನ್ ಅವರಿಗೆ ಮರಣದಂಡನೆ ವಿಧಿಸಿದೆ.ನ್ಯಾಯಾಲಯವು ಈ ಪ್ರಕರಣವನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಹೇಳಿದೆ. ಇದಕ್ಕೂ ಮೊದಲು, ಖಾನ್ ಗೆ ಪೊಲೀಸರು … Continued

ಲಿಂಗಾನುಪಾತ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೇ ಹೆಚ್ಚು ಕುಸಿತ..!

  ನವ ದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯ ಲಿಂಗಾನುಪಾತದ ನಿಯತಾಂಕವು ಕಳವಳಕಾರಿಯಾಗಿದೆ. ಬಿಹಾರ, ಕರ್ನಾಟಕ, ಒಡಿಶಾ ಮತ್ತು ಉತ್ತರಾಖಂಡ ರಾಜ್ಯವೂ ಕುಸಿತ ಕಂಡಿವೆ. ಈ ಮಧ್ಯೆ ಕಡಿಮೆ ಎಸ್‌ಆರ್‌ಬಿ ಹೊಂದಿರುವ ರಾಜ್ಯಗಳಾದ ರಾಜಸ್ಥಾನ ಮತ್ತು ಹರಿಯಾಣವನ್ನು ಲಿಂಗಾನುಪಾತದ ನಿಯತಾಂಕದಲ್ಲಿ ಸುಧಾರಣೆ ದಾಖಲಿಸಿದ್ದಕ್ಕಾಗಿ ಶ್ಲಾಘಿಸಲಾಗಿದೆ. 1,000 ಗಂಡುಮಕ್ಕಳ ಜನನಗಳಿಗೆ ಜನಿಸಿದ ಹೆಣ್ಣುಮಕ್ಕಳ ಸಂಖ್ಯೆ ಎಂದು ಅಳೆಯಲಾಗುತ್ತದೆ, ಇದು … Continued

ದೆಹಲಿ ಏಮ್ಸ್‌ನಲ್ಲಿ ಕೋ ವ್ಯಾಕ್ಸಿನ್‌ ಕೊವಿಡ್‌ ಲಸಿಕೆ ಮೊದಲ ಡೋಸ್‌ ಪಡೆದ ಪ್ರಧಾನಿ ಮೋದಿ

ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕೋವಿಡ್ -19 ಲಸಿಕೆಯ ತಮ್ಮ ಮೊದಲ ಡೋಸ್ ತೆಗೆದುಕೊಂಡರು. “ಏಮ್ಸ್ನಲ್ಲಿ ನನ್ನ ಮೊದಲ ಡೋಸ್ ಕೊವಿಡ್‌-19 ಲಸಿಕೆ ತೆಗೆದುಕೊಂಡೆ. ಕೊವಿಡ್‌ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ … Continued

ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್‌ ಬಣ ರಾಜಕೀಯದ ಜಗಳ..?

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್‌ ಸೇಠ್‌ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್‌ಗೆ ದೂರು … Continued

ದೀರ್ಘ ಬಾಳಿಕೆ ಕುನ್ಬಾ ಟೆಂಟ್‌ಗಳ ನಿರ್ಮಾಣಕ್ಕೆ ಪ್ರತಿಭಟನಾಕಾರರ ಸಿದ್ಧತೆ

ದೆಹಲಿ ಗಡಿಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ರೈತರು ಸದ್ಯಕ್ಕೆ ಹೋರಾಟವನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿಲ್ಲ. ದೀರ್ಘ ಬಾಳಿಕೆಯ ಕುನ್ಬಾ ಟೆಂಟ್ಗಳನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನಷ್ಟು ತಿಂಗಳುಗಳ ಕಾಲ ಪ್ರತಿಭಟನೆಯನ್ನು ಮುಂದುವರೆಸುವ ಉದ್ದೇಶದಿಂದ ಶಾಶ್ವತವೆನ್ನಬಹುದಾದ ಕುನ್ಬಾ ಡೇರೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಪ್ರತಿಯೊಂದು ಕುಟುಂಬಗಳಿಂದ ೨೦೦ ರೂ.ಗಳಿಂದ ೫೦೦ರೂ.ವರೆಗೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ … Continued

ಐದು ರಾಜ್ಯಗಳಿಂದ ಬರುವವರಿಗೆ ಕೊವಿಡ್‌ ನೆಗೆಟಿವ್‌ ವರದಿ ಕಡ್ಡಾಯ ಮಾಡಲಿರುವ ದೆಹಲಿ?

ನವ ದೆಹಲಿ: ದೇಶಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕಳೆದ ವಾರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಐದು ರಾಜ್ಯಗಳಿಂದ ಪ್ರಯಾಣಿಸುವ ಜನರಿಗೆ ಕೊವಿಡ್‌ ನೆಗೆಟಿವ್‌ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸುವ ಬಗ್ಗೆ ದೆಹಲಿ ಮುಂದಾಗಿದೆ. ಮಹಾರಾಷ್ಟ್ರ, ಕೇರಳ,ಛತ್ತೀಸ್‌ಗಡ, ಮಧ್ಯಪ್ರದೇಶ, ಮತ್ತು ಪಂಜಾಬ್‌ನಿಂದ ದೆಹಲಿಗೆ ಪ್ರಯಾಣಿಸುವ ಜನರು ಶನಿವಾರದಿಂದ R ಣಾತ್ಮಕ ನೆಗೆಟಿವ್‌ ಆರ್‌ಟಿ-ಪಿಸಿಆರ್ ಪರೀಕ್ಷೆ ವರದಿ ತೋರಿಸಬೇಕಾಗುತ್ತದೆ ಎಂದು … Continued

ದೆಹಲಿ ಪ್ರತಿಭಟನೆಗೆ ರಾಜ್ಯದಿಂದಲೂ ರೈತರು

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯ ಸಿಂಗುದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದಿಂದ ಸಾವಿರಾರು ರೈತರು ಮಂಗಳವಾರದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ಗಡಿ ಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, … Continued