ಮಾಜಿ ಪ್ರಧಾನಿ ಮನಮೋಹನ ಸಿಂಗ್ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸಲಾಯಿತು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ … Continued

ವೀಡಿಯೊ | ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಜನರು

ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ರಾಜೌರಿ ಗಾರ್ಡನ್‌ನಲ್ಲಿರುವ ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಭಯಭೀತರಾದ ಜನರು ಹತ್ತಿರದ ಕಟ್ಟಡದ ಛಾವಣಿಗೆ ಹಾರಿ ಬಚಾವ್‌ ಆಗಿದ್ದಾರೆ. ಗಾಯವಾದ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ;$30,000 ಹಣಕ್ಕೆ ಬೇಡಿಕೆ

ನವದೆಹಲಿ : ಇಮೇಲ್‌ ಮೂಲಕ ದೆಹಲಿಯ ಸುಮಾರು 40 ಶಾಲೆಗಳಿಗೆ ಸೋಮವಾರ (ಡಿ. 9)ರ ಬೆಳಗ್ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ʼʼಪಶ್ಚಿಮ ವಿಹಾರದ ಜಿಕೆ ಗೋಯೆಂಕಾ ಮತ್ತು ಡಿಪಿಎಸ್‌ ಆರ್‌ಕೆ ಪುರಂ ಶಾಲೆ ಸೇರಿದಂತೆ 40 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ … Continued

ವೀಡಿಯೊ…| ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ದ್ರವ ಎರಚಿದ ವ್ಯಕ್ತಿ…!

ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ ಪ್ರದೇಶದಲ್ಲಿ ಶನಿವಾರ ಹೈ ಡ್ರಾಮಾ ನಡೆದಿದ್ದು, ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ದ್ರವ ಎಸೆದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಕೇಜ್ರಿವಾಲ್‌ ಅವರನ್ನು ಹಿಡಿಯಲು ಪ್ರಯತ್ನಿಸುತ್ತಿರುವುದನ್ನು ತೋರಿಸಿದೆ. ಕೇಜ್ರಿವಾಲ್ ಅವರ ಮೇಲೆ ದ್ರವವನ್ನು ಎಸೆದ … Continued

ಇನ್‌ಸ್ಟಾಗ್ರಾಂ ಪ್ರಿಯತಮನ ಜೊತೆ ಮದುವೆಗೆ ಅಡ್ಡಿ: ಮಗುವನ್ನೇ ಕತ್ತು ಹಿಸುಕಿ ಸಾಯಿಸಿದ ತಾಯಿ…!

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು ಮಹಿಳೆಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಆಸ್ಪತ್ರೆಗೆ ಮಗುವನ್ನು ಕರೆತರುವಷ್ಟರಲ್ಲಿಯೇ ಅದು ಮೃತಪಟ್ಟಿರುವ ಬಗ್ಗೆ ದೀಪಚಂದ್ ಬಂಧು ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದ ನಂತರ ಈ ಪ್ರಕಣ ಬೆಳಕಿಗೆ ಬಂದಿದೆ. ಮಗುವಿನ ಕುತ್ತಿಗೆ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued

ಎಚ್ಚರ…| ವಂಚಕರಿಂದ ʼಡಿಜಿಟಲ್ ಬಂಧನʼ : 10 ಕೋಟಿ ರೂ. ಕಳೆದುಕೊಂಡ 70 ವರ್ಷದ ನಿವೃತ್ತ ಇಂಜಿನಿಯರ್…!

ನವದೆಹಲಿ: ದೆಹಲಿಯ 70 ವರ್ಷದ ನಿವೃತ್ತ ಇಂಜಿನಿಯರ್ ಡಿಜಿಟಲ್ ಬಂಧನದ ಹಗರಣಕ್ಕೆ ಬಲಿಯಾದ ನಂತರ ತನ್ನ ಜೀವಮಾನದ ಉಳಿತಾಯದ ಹಣ ಕಳೆದುಕೊಂಡಿದ್ದಾರೆ. ತೈವಾನ್‌ನಿಂದ ನಿಷೇಧಿತ ಪದಾರ್ಥಗಳನ್ನು ಒಳಗೊಂಡ ಪಾರ್ಸೆಲ್ ನಿಮ್ಮ ಹೆಸರಿಗೆ ಕಳುಹಿಸಲಾಗಿದೆ ಎಂದು ಫೋನ್‌ ಮಾಡಿ ಹೆದರಿಸಿ ವಂಚಕರು ಅವರಿಂದ 10 ಕೋಟಿ ರೂ.ಗಳಿಗೂ ಹೆಚ್ಚು ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ. ಪೊಲೀಸರಂತೆ … Continued

ವೀಡಿಯೊ…| ಸುಪ್ರೀಂ ಕೋರ್ಟ್‌ ಸಿಜೆಐ ಚಂದ್ರಚೂಡರ ʼಮರಣದಂಡನೆ ಪ್ರಶ್ನೆʼಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ವಕೀಲರ ಉತ್ತರ ಹೇಗಿದೆ ನೋಡಿ…

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ರಾಷ್ಟ್ರೀಯ ನ್ಯಾಯಾಂಗ ವಸ್ತುಸಂಗ್ರಹಾಲಯ ಮತ್ತು ಆರ್ಕೈವ್ (ಎನ್‌ಜೆಎಂಎ) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ ಅವರು ಗುರುವಾರ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ವಕೀಲರ ಜೊತೆ ಸಂವಾದ ನಡೆಸಿದರು. ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದ ಮುಖ್ಯ ನ್ಯಾಯಾಧೀಶ ಚಂದ್ರಚೂಡ ಅವರು ಭಾರತದಲ್ಲಿ ಮರಣದಂಡನೆಯ ಬಗ್ಗೆ ಪ್ರಶ್ನೆಯನ್ನು ಕೇಳುವ … Continued

ಬಾಲಕನ ಹೊಟ್ಟೆಯಿಂದ ಬ್ಯಾಟರಿಗಳು, ಬ್ಲೇಡ್‌ಗಳು ಸೇರಿದಂತೆ 56 ಲೋಹದ ವಸ್ತುಗಳನ್ನು ಹೊರಕ್ಕೆ ತೆಗೆದ ವೈದ್ಯರು ; .ಆದರೆ…

ಹತ್ರಾಸ್ (ಉತ್ತರ ಪ್ರದೇಶ) : ದೆಹಲಿಯ ಆಸ್ಪತ್ರೆಯಲ್ಲಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಿ ಬಾಲನ ಹೊಟ್ಟೆಯಿಂದ ವಾಚ್ ಬ್ಯಾಟರಿಗಳು, ಬ್ಲೇಡ್‌ಗಳು, ಉಗುರುಗಳು ಮತ್ತು ಇತರ ಲೋಹದ ತುಣುಕುಗಳಂತಹ ಬೆರಗುಗೊಳಿಸುವ 56 ವಸ್ತುಗಳನ್ನು ತೆಗೆದು ಹಾಕಿದ ಒಂದು ದಿನದ ನಂತರ ಉತ್ತರ ಪ್ರದೇಶದ ಹತ್ರಾಸದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. . 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮಾ … Continued

ವೀಡಿಯೊ..| ಟ್ರಾಫಿಕ್ ಪೋಲೀಸರನ್ನು 20 ಮೀಟರ್ ಎಳೆದೊಯ್ದ ಕಾರು; ಗಾಯಗೊಂಡ ಎಎಸ್‌ ಐ-ಹೆಡ್ ಕಾನ್ಸ್‌ಟೇಬಲ್…

ನವದೆಹಲಿ : ನೈಋತ್ಯ ದೆಹಲಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನಲ್ಲಿ ಸುಮಾರು 20 ಮೀಟರ್ ಎಳೆದೊಯ್ದ ಘಟನೆ ನಡೆದ ವರದಿಯಾಗಿದೆ. ಈ ಸಂಬಂಧ ಶಂಕಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ಸಂಜೆ 7:45 ರ ಸುಮಾರಿಗೆ ವೇದಾಂತ ದೇಶಿಕಾ ಮಾರ್ಗದ ಬಳಿಯ ಬೆರ್ ಸರೈ ಟ್ರಾಫಿಕ್ … Continued