ವೀಡಿಯೊ..| ಹಾರ್ನ್‌ ಮಾಡಬೇಡಿ ಎಂದಿದ್ದಕ್ಕೆ ವೃದ್ಧನಿಗೆ ಬೆದರಿಕೆ ಹಾಕಿದರು ; ಪೊಲೀಸರನ್ನು ಕರೆದ ಅಕ್ಕಪಕ್ಕದವರಿಗೆ ಕಾರ್‌ ಗುದ್ದಿಸಿದ ಸಹೋದರಿಯರು…!

ನವದೆಹಲಿ : ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಹೈಡ್ರಾಮಾದ ನಂತರ ಬಂಧಿಸಲಾಗಿದೆ. ಅವರು ವೃದ್ಧನನ್ನು ಬೆದರಿಕೆ ಹಾಕಿ, ಪೊಲೀಸರು ಬಂದ ನಂತರ ಗಂಟೆಗಳ ಕಾಲ ಮನೆಯೊಳಗೆ ಲಾಕ್‌ ಮಾಡಿಕೊಂಡು, ನಂತರ ಕ್ಯಾಂಪಸ್‌ನೊಳಗೆ ತಮ್ಮ ಕಾರನ್ನು ಬೇಕಾಬಿಟ್ಟಿ ಓಡಿಸಿ ಜನರನ್ನು ಗಾಯಗೊಳಿಸಿದ್ದಾರೆ. ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ್ದಾರೆ. ಪೊಲೀಸರು … Continued

ದೀಪಾವಳಿ ಆಚರಿಸುತ್ತಿದ್ದ ವೇಳೆ ಮಗನ ಎದುರೇ ವ್ಯಕ್ತಿ-ಅಪ್ರಾಪ್ತನ ಹತ್ಯೆ ; ಇದರ ʼಮಾಸ್ಟರ್‌ ಮೈಂಡ್‌ʼ ಮತ್ತೊಬ್ಬ ಅಪ್ರಾಪ್ತ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಬಿಹಾರಿ ಕಾಲೋನಿಯಲ್ಲಿ ಗುರುವಾರ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಹುಡುಗ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಒಬ್ಬ ಹುಡುಗ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ಆಕಾಶ (40) ಮತ್ತು ಆತನ ಸಹೋದರನ ಮಗ ರಿಷಭ (16) ಎಂದು … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಗುಜರಾತಿನಲ್ಲಿ 5,000 ಕೋಟಿ ರೂ. ಮೌಲ್ಯದ 518 ಕೆಜಿ ಕೊಕೇನ್ ವಶ…

ನವದೆಹಲಿ: ಭಾನುವಾರ ವಿಶೇಷ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಅಂಕಲೇಶ್ವರ ನಗರದಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರು ಮತ್ತು ಗುಜರಾತ್ ಪೊಲೀಸರ ಜಂಟಿ ತಂಡ ಅಂಕಲೇಶ್ವರದಲ್ಲಿರುವ ಆವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯ ಆವರಣದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 518 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ … Continued

ಆಹಾರದ ಪ್ಯಾಕೆಟ್‌ಗಳಲ್ಲಿ ತುಂಬಿ ಸಾಗಿಸುತ್ತಿದ್ದ ₹ 2,000 ಕೋಟಿ ಮೌಲ್ಯದ ಕೊಕೇನ್ ದೆಹಲಿಯಲ್ಲಿ ವಶ…!

ನವದೆಹಲಿ: ಒಂದು ವಾರದಲ್ಲಿ, ದೆಹಲಿಯಲ್ಲಿ ₹ 7,000 ಕೋಟಿಗೂ ಹೆಚ್ಚು ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಗುರುವಾರ ದೆಹಲಿಯ ರಮೇಶ ನಗರದಲ್ಲಿ ಮಾದಕವಸ್ತು ಜಾಲವನ್ನು ಭೇದಿಸಿದ್ದು, ತಿಂಡಿ ಪ್ಯಾಕೆಟ್‌ಗಳಲ್ಲಿ ತುಂಬಿದ ₹ 2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಜಿಪಿಎಸ್ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

ನವದೆಹಲಿ : ರಾಮಲೀಲಾದಲ್ಲಿ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಶಹದಾರದಲ್ಲಿರುವ ಜೈ ಶ್ರೀ ರಾಮಲೀಲಾ ವಿಶ್ವಕರ್ಮ ನಗರದಲ್ಲಿ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಪೂರ್ವ ದೆಹಲಿಯ ನಿವಾಸಿ ಸುಶೀಲ ಕೌಶಿಕ (45) ಅವರು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಆಭರಣಗಳಂತೆ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued