ದೆಹಲಿಯ ಹುಮಾಯೂನ್ ಸಮಾಧಿ ಬಳಿ ದರ್ಗಾದ ಛಾವಣಿ ಕುಸಿದು 5 ಮಂದಿ ಸಾವು

ನವದೆಹಲಿ: ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಹುಮಾಯೂನ್ ಸಮಾಧಿ ಸಂಕೀರ್ಣದ ಬಳಿಯ ದರ್ಗಾದ ಛಾವಣಿ ಕುಸಿದು ಕನಿಷ್ಠ ಐದು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೆಹಲಿ ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಘಟನೆಯ ನಂತರ ಒಟ್ಟು ಒಂಬತ್ತು ಜನರನ್ನು ಏಮ್ಸ್‌ಗೆ ಸಾಗಿಸಲಾಯಿತು, ಅವರಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಲಾಗಿದೆ. ಸುದ್ದಿಸಂಸ್ಥೆ ಪ್ರಕಾರ, ಮೃತಪಟ್ಟ ಐವರಲ್ಲಿ ಮೂವರು … Continued

ವೀಡಿಯೊಗಳು…| ಮತಗಳ್ಳತನದ ವಿರುದ್ಧ ಪ್ರತಿಭಟನೆ ; ರಾಹುಲ್ ಗಾಂಧಿ ಬಂಧನ, ಮೂರ್ಛೆ ಹೋದ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ: ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿ ಜೊತೆ ಕೈಜೋಡಿಸಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್, ಶಿವಸೇನೆ (ಯುಬಿಟಿ) ನಾಯಕರಾದ ಸಂಜಯ ರಾವತ್ … Continued

ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ

ನವದೆಹಲಿ: ಶುಕ್ರವಾರ ರಾತ್ರಿ ದೆಹಲಿಯ ಕರವಾಲ್ ನಗರ ಪ್ರದೇಶದ ಮನೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮಕ್ಕಳು 5 ಮತ್ತು 7 ವರ್ಷದ ಹೆಣ್ಣು ಮಕ್ಕಳಾಗಿದ್ದಾರೆ. 28 ವರ್ಷದ ಪತ್ನಿ ಜಯಶ್ರೀ ಜೊತೆಗಿನ ದೀರ್ಘಕಾಲದ ಜಗಳವೇ ಈ ಕೊಲೆಗಳಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಆದಾಗ್ಯೂ, ನಿಖರವಾದ ಕಾರಣವನ್ನು … Continued

ವೀಡಿಯೊ..| ಭಾರತೀಯ ಉಡುಗೆ ತೊಟ್ಟಿದ್ದಕ್ಕಾಗಿ ದಂಪತಿಗೆ ರೆಸ್ಟೋರೆಂಟ್ ಪ್ರವೇಶ ನಿರಾಕರಣೆ ಆರೋಪ ; ಗಂಭೀರವಾಗಿ ಪರಿಗಣಿಸಿದ ಸಿಎಂ ಗುಪ್ತಾ

ನವದೆಹಲಿ: ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ರೆಸ್ಟೋರೆಂಟ್‌ಗೆ ದಂಪತಿಗೆ ಸಾಂಪ್ರದಾಯಿಕ ಭಾರತೀಯ ಉಡುಗೆ ತೊಟ್ಟಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ರೆಸ್ಟೋರೆಂಟ್‌ಗೆ ಪ್ರವೇಶ ನಿರಾಕರಿಸಿದ ನಂತರ ದಂಪತಿ ತಮಗೆ ಆದ ತೊಂದರೆ ಬಗ್ಗೆ ಹೇಳಿಕೊಂಡಿದ್ದಾರೆ. ಇತರರನ್ನು ಒಳಗೆ … Continued

ರಷ್ಯಾದ ತೈಲ ಖರೀದಿಗೆ ಭಾರತದ ಮೇಲೆ ಟ್ರಂಪ್‌ ಸುಂಕದ ಟಾರ್ಗೆಟ್‌ ಮಧ್ಯೆ ಪುತಿನ್ ಶೀಘ್ರವೇ ಭಾರತಕ್ಕೆ ಭೇಟಿ

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್ ಮಾಸ್ಕೋ ಭೇಟಿಯ ಸಂದರ್ಭದಲ್ಲಿ ತಿಳಿಸಿದ್ದಾರೆ. ದಿನಾಂಕಗಳು ಇನ್ನೂ ಅಂತಿಮಗೊಳ್ಳದಿದ್ದರೂ, ಈ ವರ್ಷ ಭೇಟಿ ನಡೆಯುವ ಸಾಧ್ಯತೆಯಿದೆ ಎಂದು ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. “ನಮ್ಮಲ್ಲಿ ವಿಶೇಷ ಹಾಗೂ ಸುದೀರ್ಘ ಸಂಬಂಧವಿದೆ … Continued

ನಡುರಸ್ತೆಯಲ್ಲಿ ವ್ಯಕ್ತಿಯ ಫೋನ್ ಕಸಿದುಕೊಂಡು ಪರಾರಿ ; ಆದ್ರೆ ತನಿಖೆ ವೇಳೆ ಆತನ ಪತ್ನಿಯ ವಿವಾಹೇತರ ಸಂಬಂಧ ಬಯಲಾಯ್ತು…!

ನವದೆಹಲಿ: ದೆಹಲಿಯಲ್ಲಿ ನಡೆದ ಫೋನ್ ಕದ್ದ ಘಟನೆಯಲ್ಲಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದ್ದು, ವಿವಾಹೇತರ ಸಂಬಂಧವೊಂದು ಬಯಲಾಗಿದೆ. ಸ್ಕೂಟಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಫೋನ್ ಕದ್ದ ವ್ಯಕ್ತಿ ದೂರು ನೀಡಿದ ನಂತರ ಇದು ತನ್ನ ಪತ್ನಿಯೇ ಯೋಜಿಸಿದ್ದ ಕೃತ್ಯ ಎಂದು ಬೆಳಕಿಗೆ ಬಂದಿದೆ. ಆ ವ್ಯಕ್ತಿ ಆರಂಭದಲ್ಲಿ ದಕ್ಷಿಣ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ … Continued

ಗ್ರೀನ್ ಆಸ್ಕರ್ – ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ಬೆಂಗಳೂರು: ಈಚೆಗಷ್ಟೇ ಇಂಗ್ಲೆಂಡಿನ ಪ್ರತಿಷ್ಠಿತ ಗ್ರೀನ್ ಆಸ್ಕರ್ – ಆಶ್ಡನ್‌ ಜಾಗತಿಕ ಪ್ರಶಸ್ತಿಯಿಂದ ವಿಶ್ವದಲ್ಲಿಯೇ 3ನೇ ಸಲ ಗುರುತಿಸಲ್ಪಟ್ಟ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದ್ದಾರೆ ಹಾಗೂ ಸಂಸ್ಥೆಯ ಈ ಹಿರಿಮೆಗೆ ಅಭಿನಂದಿಸಿದ್ದಾರೆ. ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು … Continued

ಮಳೆಯಲ್ಲಿ ಆಟವಾಡುತ್ತೇನೆಂದು ಹಠ ಮಾಡಿದ್ದಕ್ಕೆ 10 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಂದ ತಂದೆ…!

ನವದೆಹಲಿ: ದೆಹಲಿಯಲ್ಲಿ ಶನಿವಾರ 10 ವರ್ಷದ ಬಾಲಕನೊಬ್ಬ ಮಳೆಯಲ್ಲಿ ಆಟವಾಡಲು ಹೊರಗೆ ಹೋಗಬೇಕೆಂದು ಹಠ ಮಾಡಿದಕ್ಕೆ ಆತನ ತಂದೆ ಆತನನ್ನು ಇರಿದು ಕೊಂದಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಪರಾಧಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ, ದಾದಾದೇವ ಆಸ್ಪತ್ರೆಯಿಂದ ಪೊಲೀಸರಿಗೆ ಮಗುವಿಗೆ ಇರಿತದ ಗಾಯಗಳಾದ ಬಗ್ಗೆ ಕರೆ ಬಂದಿತು. ತನಿಖಾಧಿಕಾರಿ ತಕ್ಷಣ ಆಸ್ಪತ್ರೆಗೆ … Continued

ಪಾಕಿಸ್ತಾನ ಪರ ಬೇಹುಗಾರಿಕೆ ; ನೌಕಾಪಡೆ ಪ್ರಧಾನ ಕಚೇರಿಯ ಸಿಬ್ಬಂದಿ ಬಂಧನ : ಆಪರೇಶನ್‌ ಸಿಂಧೂರ ವೇಳೆಯೂ ಮಾಹಿತಿ ರವಾನೆ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ವರ್ಷಗಳಿಂದ ಮತ್ತು ಆಪರೇಷನ್ ಸಿಂಧೂರ ಸಮಯದಲ್ಲಿಯೂ ಸಹ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ದೆಹಲಿಯಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ಬಂಧಿಸಲಾಗಿದೆ. ಹಣಕ್ಕಾಗಿ ವಿಶಾಲ ಯಾದವ್ ಎಂಬ ಸಿಬ್ಬಂದಿ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಇದನ್ನು ನಿರ್ವಹಿಸುತ್ತಿದ್ದ ಪಾಕಿಸ್ತಾನಿ ಮಹಿಳೆಗೆ … Continued

ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ದೆಹಲಿಯಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಯ ಗ್ಯಾಸ್ಟ್ರೋ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದೆ. ಈ ತಿಂಗಳಲ್ಲಿ 78 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಅಧಿಕೃತ ಹೇಳಿಕೆಯ ಪ್ರಕಾರ, … Continued