ದೆಹಲಿ ಚುನಾವಣೆ ಫಲಿತಾಂಶ | ಆರಂಭಿಕ ಟ್ರೆಂಡ್‌ ; ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್‌ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್‌ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ. ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ … Continued

‘ಆಪರೇಷನ್‌ ಕಮಲ’ ಆರೋಪಕ್ಕೆ ಪುರಾವೆ ಕೊಡಿ ; ಅರವಿಂದ ಕೇಜ್ರಿವಾಲಗೆ ಎಸಿಬಿ ನೋಟಿಸ್

ನವದೆಹಲಿ: ಬಿಜೆಪಿ ವಿರುದ್ಧ ಮಾಡಿದ ಆಮಿಷದ ಆರೋಪಕ್ಕೆ ಪುರಾವೆಗಳನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. ಕೇಜ್ರಿವಾಲ್ ಅವರ “ಆಪರೇಷನ್ ಕಮಲ” ಕ್ಕೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದೆ, ಇದರಲ್ಲಿ ಅವರು ಮತ್ತು ಇತರ ಎಎಪಿ ನಾಯಕರು ಬಿಜೆಪಿಯು ತಮ್ಮ ಪಕ್ಷದ … Continued

ತಮ್ಮ ಪಕ್ಷ ಸೇರುವಂತೆ ಎಎಪಿ ನಾಯಕರಿಗೆ 15 ಕೋಟಿ ರೂ. ಆಫರ್‌ ನೀಡಿದ ಬಿಜೆಪಿ ; ಕೇಜ್ರಿವಾಲ್‌ ಆರೋಪ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ಬಿಜೆಪಿಯು ತನ್ನ ಪಕ್ಷದ ನಾಯಕರಿಗೆ ಹಣದ ಆಫರ್‌ ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ತನ್ನ 16 ಅಭ್ಯರ್ಥಿಗಳನ್ನು ಕರೆದು ಬಿಜೆಪಿಗೆ ಸೇರಲು ತಲಾ 15 ಕೋಟಿ ರೂ.ಗಳ ಆಫರ್‌ ನೀಡಿದೆ ಎಂದು ದೆಹಲಿ … Continued

ಚೋಲಿ ಕೆ ಪೀಚೆ.. ಸಿನೆಮಾ ಹಾಡಿಗೆ ಡ್ಯಾನ್ಸ್‌ ಮಾಡಿದ ಮದುಮಗ ; ಮದುವೆಯನ್ನೇ ರದ್ದುಗೊಳಿಸಿದ ಮದುಮಗಳ ಅಪ್ಪ…!

ನವದೆಹಲಿ: ದೆಹಲಿಯ ಮದುಮಗ ತನ್ನ ಮದುವೆಯಲ್ಲಿ ಬಾಲಿವುಡ್ ಜನಪ್ರಿಯ ಹಾಡಿಗೆ ನೃತ್ಯ ಮಾಡಿದ ನಂತರ ಮದುವೆಯೇ ರದ್ದುಗೊಂಡ ವಿದ್ಯಮಾನ ನಡೆದಿದೆ. ಮದುಮಗ ಚೋಲಿ ಕೆ ಪೀಚೆ ಕ್ಯಾ ಹೈ ಎಂಮ ಹಾಡಿಗೆ ವರ ನೃತ್ಯ ಮಾಡಿದ್ದು ವಧುವಿನ ತಂದೆಯ ಕೆಂಗಣ್ಣಿಗೆ ಗುರಿಯಾಗಿದ್ದು, ಅವರು ಮದುವೆಯನ್ನೇ ರದ್ದುಗೊಳಿಸಿದ್ದಾರೆ…! ಮದುಮಗ ಮೆರವಣಿಗೆಯಲ್ಲಿ ಮದುವೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದಾನೆ. ಪ್ರತ್ಯಕ್ಷದರ್ಶಿಗಳ … Continued

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ ಕೇಜ್ರಿವಾಲ ಆಮ್‌ ಆದ್ಮಿ ಪಕ್ಷಕ್ಕೆ 7 ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಶಾಸಕರಾದ ನರೇಶ ಯಾದವ್ (ಮೆಹ್ರೌಲಿ), ರೋಹಿತಕುಮಾರ (ತ್ರಿಲೋಕಪುರಿ), ರಾಜೇಶ ರಿಷಿ (ಜನಕಪುರಿ), ಮದನಲಾಲ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ವೀಡಿಯೊ..| ಹಿಂದಿ ಸಿನೆಮಾದ ಕುಛ್‌ ಕುಛ್‌ ಹೋತಾ ಹೈ ಹಾಡನ್ನು ವಾದ್ಯ ಸಮೇತ ಹಾಡಿ ಸಂಭ್ರಮಿಸಿದ ಇಂಡೋನೇಷ್ಯಾದ ಅಧಿಕಾರಿಗಳ ನಿಯೋಗ…!

ನವದೆಹಲಿ: ಇಂದು (ಜನವರಿ 26) ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದೆ. ಈ ಬಾರಿ ಗಣರಾಜ್ಯೋತ್ಸವ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋ ಸುಬಿಯಂತೋ(Prabowo Subianto) ಆಗಮಿಸಿದ್ದಾರೆ. ಪ್ರಬೋ ಸುಬಿಯಂತೋ ಮತ್ತು ಅವರ ಜೊತೆಗಿದ್ದ ಅಧಿಕಾರಿಗಳ ನಿಯೋಗಕ್ಕೆ ರಾಷ್ಟ್ರಪತಿ ಭವನದಲ್ಲಿ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳ ತಂಡ ಬಾಲಿವುಡ್‌ನ ಜನಪ್ರಿಯ ಸಿನಿಮಾದ ಹಾಡೊಂದನ್ನು ಹಾಡಿದ್ದು, … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

ತನ್ನದೇ ಮದುವೆ ಕಾರ್ಡ್‌ ಕೊಡಲು ಹೋಗುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮದುಮಗ…!

ನವದೆಹಲಿ: ದುರಂತದ ಘಟನೆಯೊಂದರಲ್ಲಿ, ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಕಾರಿಗೆ ಬೆಂಕಿ ಹೊತ್ತುಕೊಂಡು ಹಚ್ಚಿ ಸುಟ್ಟು ಕರಕಲಾದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮದುಮಗ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ನಾವಡ ನಿವಾಸಿಯಾಗಿರುವ ಅನಿಲ ಎಂಬವರ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued